Homeಸಿನಿಮಾಕ್ರೀಡೆಆಸ್ಟ್ರೇಲಿಯಾ ಎದುರು ಜಯ: ಐತಿಹಾಸಿಕ ಬಾರ್ಡರ್ ಗವಾಸ್ಕರ್ ಸರಣಿ ಭಾರತದ ಮಡಿಲಿಗೆ

ಆಸ್ಟ್ರೇಲಿಯಾ ಎದುರು ಜಯ: ಐತಿಹಾಸಿಕ ಬಾರ್ಡರ್ ಗವಾಸ್ಕರ್ ಸರಣಿ ಭಾರತದ ಮಡಿಲಿಗೆ

- Advertisement -
- Advertisement -

ಬ್ರಿಸ್ಬೇನ್‌‌ನಲ್ಲಿ ನಡೆದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ರೋಚಕ ಜಯಗಳಿಸಿದೆ. ಆ ಮೂಲಕ 2-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ.

ಇಂದಿನ ಕೊನೆಯ ಪಂದ್ಯದ ಐದನೇ ದಿನದಾಟದಲ್ಲಿ ಭಾರತದ ಗೆಲುವಿಗೆ 328 ರನ್‌ಗಳ ಗುರಿ ಪಡೆದಿತ್ತು. ಶುಭ್‌ಮನ್ ಗಿಲ್ ಮತ್ತು ರಿಷಬ್ ಪಂತ್‌ರವರ ಅದ್ಭುತ ಬ್ಯಾಂಟಿಂಗ್‌ನಿಂದ ಭಾರತ ಮೂರು ವಿಕೆಟ್‌ಗಳ ಜಯ ಪಡೆಯಿತು.

ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ ಪ್ರಥಮ ಇನ್ನಿಂಗ್ಸ್‌ನಲ್ಲಿ 369 ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ 294 ರನ್ ಗಳಿಸಿತ್ತು. ಇದಕ್ಕೆ ಪ್ರತಿಯಾಗಿ ಮೊದಲ ಇನ್ನಿಂಗ್ಸ್‌ನಲ್ಲಿ 336 ರನ್ ಗಳಿಸಿದ್ದ ಭಾರತ, ಎರಡನೇ ಇನ್ನಿಂಗ್ಸ್‌ನಲ್ಲಿ 329 ರನ್ ಬಾರಿಸಿ ಜಯ ತನ್ನದಾಗಿಸಿಕೊಂಡಿತು.

ಕಳೆದ ಬಾರಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದಿದ್ದ ಭಾರತ ಈ ಬಾರಿಯೂ ಸರಣಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿ ಟ್ರೋಫಿ ಉಳಿಸಿಕೊಂಡಿದೆ.

ಆರಂಭಿಕ ಆಟಗಾರ ಶುಭಮನ್‌ ಗಿಲ್ 146 ಎಸೆತಗಳಲ್ಲಿ 91 ರನ್ ಗಳಿಸಿ ಭದ್ರ ಬುನಾದಿ ಹಾಕಿಕೊಟ್ಟರೆ, ಮಧ್ಯಮ ಕ್ರಮಾಂದ ಆಟಗಾರ ರಿಷಬ್ ಪಂತ್ 138 ಎಸೆತಗಳಲ್ಲಿ 89 ರನ್ ರನ್ ಗಳಿಸಿ ಜಯದ ದಡ ಸೇರಿಸಿದರು.

ಟೆಸ್ಟ್ ಪಂದ್ಯ ಕೊನೆ ಕೊನೆಗೆ 20-20 ಪಂದ್ಯದ ರೀತಿ ಪರಿವರ್ತನೆಯಾಗಿತ್ತು. 100 ಓವರ್‌ಗಳಗೆ 5 ದಿನದಾಟ ಮುಕ್ತಾಯವಾಗಬೇಕಿದ್ದು ಅಷ್ಟರೊಳಗೆ ಭಾರತ 328 ರನ್ ಗಳಿಸಬೇಕಿತ್ತು. ಅಷ್ಟರಲ್ಲಿ ವಿಕೆಟ್ ಉಳಿಸಿಕೊಂಡರೆ ಡ್ರಾ, ವಿಕೆಟ್ ಕಳೆದುಕೊಂಡರೆ ಸೋಲು ಅನುಭವಿಸಬೇಕಿತ್ತು ಒಂದು ಹಂತದಲ್ಲಿ 33 ಎಸೆತಗಳಿಗೆ 19 ರನ್ ಬೇಕಿದ್ದಾಗ ವಾಷಿಂಗ್ಟನ್ ಸುಂದರ್ ಔಟ್ ಆಗಿ ಆತಂಕ ಮೂಡಿಸಿದ್ದರು. ಆದರೆ ಲೀಲಾಜಾಲವಾಗಿ ಬ್ಯಾಟ್ ಬೀಸಿದ ಪಂತ್ ಜಯ ತಂದುಕೊಟ್ಟರು.

ಶುಭ್‌ಮನ್ ಗಿಲ್, ರಿಷಬ್ ಪಂತ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ವಾಷಿಂಗ್‌ಟನ್ ಸುಂದರ್ ಮತ್ತು ನಟರಾಜನ್ ಈ ನಾಲ್ವರು ಯುವ ಆಟಗಾರರು ಅತ್ಯುತ್ತಮ ಪ್ರದರ್ಶನದಿಂದ ತಮ್ಮ ಟೆಸ್ಟ್ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ನಟರಾಜನ್ ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಗಳಿಸಿ ಗಮನ ಸೆಳೆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ 5 ವಿಕೆಟ್ ಗಳಿಸಿ ಸಾಧನೆಗೈದರು.

ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’


ಇದನ್ನೂ ಓದಿ: ಮುಷ್ತಾಕ್ ಅಲಿ ಟ್ರೋಫಿ: ಚಾಂಪಿಯನ್ ಕರ್ನಾಟಕ ನಾಕ್ ‌ಔಟ್ ಹಂತದತ್ತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...