Homeಮುಖಪುಟಸರ್ಕಾರಿ ಬಸ್‌ ಹತ್ತಿ ಜನರ ಸಮಸ್ಯೆ ಆಲಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

ಸರ್ಕಾರಿ ಬಸ್‌ ಹತ್ತಿ ಜನರ ಸಮಸ್ಯೆ ಆಲಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸರ್ಕಾರಿ ಬಸ್‌ ಏರಿ ಸಮಾನ್ಯ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ಆಲಿಸಿರುವ ಘಟನೆ ಇತ್ತೀಚೆಗೆ ನಡೆದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ಗಳಿಸಿದೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಶನಿವಾರ ಚೆನ್ನೈನಲ್ಲಿರುವ ಕನ್ನಕಿ ನಗರಕ್ಕೆ ತೆರಳಿ ಸರ್ಕಾರಿ ಬಸ್ ಏರಿದ್ದಾರೆ. ಈ ವೇಳೆ ಅವರು ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ್ದು, ನಗರದ ಸ್ಥಳೀಯ ಬಸ್‌ಗಳ ಕುಂದುಕೊರತೆಗಳು ಮತ್ತು ಜನರ ಪ್ರತಿಕ್ರಿಯೆಗಳನ್ನು ಆಲಿಸಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಮುನ್ನೆಲೆಗೆ ಬರುವುದೇ ‘ತಮಿಳುನಾಡು ಮಾದರಿ?’

ಈ ವರ್ಷದ ಆರಂಭದಲ್ಲಿ ತಮಿಳುನಾಡಿನಲ್ಲಿ ಜಾರಿಗೆ ತಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಬಗ್ಗೆ ನೀವು ಹೇಗೆ ಭಾವಿಸುತ್ತೀರಿ ಎಂದು ಸ್ಟಾಲಿನ್ ನಿರ್ದಿಷ್ಟವಾಗಿ ಮಹಿಳಾ ಪ್ರಯಾಣಿಕರನ್ನು ಉದ್ದೇಶಿಸಿ ಕೇಳಿದ್ದಾರೆ. ಬಸ್‌ಗಳಲ್ಲಿ ಹೆಚ್ಚುವರಿ ಸೌಲಭ್ಯಗಳ ಅಗತ್ಯವಿದೆಯೇ ಎಂದು ಕೂಡಾ ಅವರು ವಿಚಾರಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು – ರಾಜ್ಯದ ಸರ್ಕಾರಿ ಉದ್ದಿಮೆಗಳ 2.87 ಲಕ್ಷ ಸಿಬ್ಬಂದಿಗೆ 216.38 ಕೋಟಿ ‘ದೀಪಾವಳಿ ಬೋನಸ್’!

ಈ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಡಿಎಂಕೆ ಪ್ರಕಟಿಸಿದ್ದ 400 ಪುಟಗಳ ಪ್ರಣಾಳಿಕೆಯಲ್ಲಿ ಸಿಟಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್‌ಗಳು ಕೂಡಾ ಸೇರಿವೆ.

ಪಕ್ಷವು ಸರ್ಕಾರಿ ವಲಯದ ಮಹಿಳಾ ಉದ್ಯೋಗಿಗಳಿಗೆ ಇದ್ದ ಆರು ತಿಂಗಳ ಹೆರಿಗೆ ರಜೆಯನ್ನು ಒಂದು ವರ್ಷಕ್ಕೆ ಏರಿಸುವುದು, ಹೆರಿಗೆ ಸಹಾಯ ಧನವಾಗಿ 24,000 ರೂ.ಗಳನ್ನು ನೀಡುವುವುದು, ಮಹಿಳೆಯರ ವಿರುದ್ಧದ ಅಪರಾಧಗಳ ತನಿಖೆಗಾಗಿ ವಿಶೇಷ ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ತೆರೆಯುವುದಾಗಿ ಪ್ರಸ್ತಾಪಿಸಿದೆ.

ಜೂನ್‌ನಲ್ಲಿ, ಡಿಎಂಕೆ ಸರ್ಕಾರವು ನಗರ ಪ್ರದೇಶಗಳಲ್ಲಿ ವಿಕಲಚೇತನರು ಮತ್ತು ಮಹಿಳಾ ಟ್ರಾನ್ಸ್‌ಜೆಂಡರ್‌‌‌ಗೆ ಉಚಿತ ಬಸ್ ಪ್ರಯಾಣದ ಪಾಸ್‌ಗಳನ್ನು ಪರಿಚಯಿಸುತ್ತಿದ್ದೇವೆ ಎಂದು ಘೋಷಿಸಿದೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...