Homeಕರ್ನಾಟಕ4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

- Advertisement -
- Advertisement -

ಪ್ರವಾಹಕ್ಕೆ ಒಳಗಾಗಿರುವ 6 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ರಾಜ್ಯ ಸಚಿವರೊಂದಿಗೆ ಇಂದು ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ್ದಾರೆ. ಪ್ರಧಾನಿಯವರು ನೂತನ ತಂತ್ರಜ್ಞಾನ ಮತ್ತು ಉತ್ತಮ ಸಂವಹನದ ಮೂಲಕ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ಭರವಸೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ, ಕೇರಳ, ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಿದ್ದು, ನೈರುತ್ಯ ಮಾನ್ಸೂನ್‌ ಎದುರಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ಅತಿವೃಷ್ಟಿಯಿಂದ ಬಾಧಿತವಾಗಿರುವ ಕರ್ನಾಟಕಕ್ಕೆ 4 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ರಾಜ್ಯದ 12 ಜಿಲ್ಲೆಗಳಲ್ಲಿನ ಅತಿವೃಷ್ಟಿ ಪರಿಸ್ಥಿತಿಯನ್ನು ವಿವರಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ವಿವಿಧ ಅಧಿಕಾರಿಗಳು ತಕ್ಷಣವೇ ಪರಿಹಾರ ಕೊಡಬೇಕೆಂದು ಒತ್ತಾಯಿಸಿದೆ. ಅಲ್ಲದೇ ರಕ್ಷಣಾ ಕಾರ್ಯಗಳಿಗೆ ಹೆಚ್ಚುವರಿ ನಾಲ್ಕು ಎನ್‌ಡಿಆರ್‌ಎಫ್‌ ತಂಡಗಳನ್ನ ಕಳುಹಿಸಿಕೊಡಬೇಕು ಎಂದೂ ಕೇಳಿಕೊಂಡಿದೆ.

 

ಭೂಕುಸಿತ ಅಧ್ಯಯನಕ್ಕೆ ಪ್ರತ್ಯೇಕ ತಂಡ ಕಳಿಸಿಕೊಡುವುದು, ಮಳೆ ಹಾನಿಗೆ ಪ್ರತ್ಯೇಕ ಪ್ಯಾಕೇಜ್ ನೀಡುವುದು, ಪರಿಹಾರ ಹಾಗೂ ಪುನರ್ವಸತಿಗಾಗಿ ರಾಜ್ಯಕ್ಕೆ ಎಸ್‌ಡಿಆರ್‌ಎಂಎಫ್‌ನ ಮುಂದಿನ ಕಂತಿನ ರೂ. 395 ಕೋಟಿ ರೂ. ಗಳನ್ನು ತಕ್ಷಣದ ಬಿಡುಗಡೆಗಾಗಿ ಕ್ರಮಗಳನ್ನು ಕೈಗೊಳ್ಳುವುದು ಸೇರಿದಂತೆ ಹಲವು ಬೇಡಿಕೆಗಳನ್ನು ರಾಜ್ಯ ಪ್ರಧಾನಿಗಳ ಮುಂದಿಟ್ಟಿದೆ. ಆದರೆ ಪ್ರಧಾನಿಯವರು ಯಾವುದೇ ತತ್‌ಕ್ಷಣದ ಪರಿಹಾವನ್ನು ಘೋಷಿಸಿಲ್ಲ ಎನ್ನಲಾಗಿದೆ.

ವಿಡಿಯೋ ಸಂವಾದದ ಬಳಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಂಚಿವ ಆರ್. ಅಶೋಕ್ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮೊಂದಿಗೆ 2 ಗಂಟೆ ಮಾತನಾಡಿದ್ದಾರೆ. ಇಲ್ಲಿಯ ವಸ್ತುಸ್ಥಿತಿಯನ್ನು ಗಮನಕ್ಕೆ ತಂದಿದ್ದೇವೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಆದ ಮಳೆಯ ಬಗ್ಗೆ ಮಾಹಿತಿ ಕೇಳಿದರು. ಆ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಶೇ. 18ರಷ್ಟು ಮಳೆಯಾಗಿದೆ. ಕೊಡಗಿನಲ್ಲಿ ಶೇ. 500ರಷ್ಟು ಹೆಚ್ಚು ಮಳೆಯಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೆಚ್ಚು ಮಳೆಯಾಗಿದೆ. 56 ತಾಲೂಕಿನ 885 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. 250 ಸೇತುವೆಗಳು ಹಾಳಾಗಿವೆ. 3 ಸಾವಿರ ಮನೆಗಳು ಹಾಳಾಗಿದೆ. 4 ಸಾವಿರ ಕೋಟಿ ರೂ ನಷ್ಟವಾಗಿರುವ ಪ್ರಾಥಮಿಕ ಅಂದಾಜು ಇದೆ ಎಂಬ ಮಾಹಿತಿಯನ್ನು ಪ್ರಧಾನಿಗೆ ತಿಳಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಕಳೆದ ವರ್ಷ ಪ್ರವಾಹ ಪರಿಸ್ಥಿತಿ ಕುರಿತು ಕರ್ನಾಟಕವು 35,000 ಕೋಟಿ ರೂ ಅಂದಾಜು ನಷ್ಟ ಸೇರಿ ಪರಿಹಾರಕ್ಕೆ ಮನವಿ ಮಾಡಿದ್ದರೆ, ಕೇಂದ್ರವು 1200 ಕೋಟಿ ರೂ ಮತ್ತು 669 ಕೋಟಿ ರೂ ಸೇರಿ ಎರಡು ಕಂತುಗಳಲ್ಲಿ 1869 ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ.

ಪ್ರತಿಪಕ್ಷಗಳು ರಾಜ್ಯ ಸರ್ಕಾರ ಮೋದಿಯವರ ಬಳಿ ಹೆಚ್ಚು ಪರಿಹಾರ ಕೇಳಲು ವಿಫಲವಾಗಿದೆ. ಹಾಗಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದುದೊಯ್ಯಬೇಕು ಎಂದು ಆಗ್ರಹಿಸಿವೆ.


ಇದನ್ನೂ ಓದಿ: ನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...