Homeಕರ್ನಾಟಕ4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

- Advertisement -
- Advertisement -

ಪ್ರವಾಹಕ್ಕೆ ಒಳಗಾಗಿರುವ 6 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ರಾಜ್ಯ ಸಚಿವರೊಂದಿಗೆ ಇಂದು ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ್ದಾರೆ. ಪ್ರಧಾನಿಯವರು ನೂತನ ತಂತ್ರಜ್ಞಾನ ಮತ್ತು ಉತ್ತಮ ಸಂವಹನದ ಮೂಲಕ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ಭರವಸೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ, ಕೇರಳ, ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಿದ್ದು, ನೈರುತ್ಯ ಮಾನ್ಸೂನ್‌ ಎದುರಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ಅತಿವೃಷ್ಟಿಯಿಂದ ಬಾಧಿತವಾಗಿರುವ ಕರ್ನಾಟಕಕ್ಕೆ 4 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ರಾಜ್ಯದ 12 ಜಿಲ್ಲೆಗಳಲ್ಲಿನ ಅತಿವೃಷ್ಟಿ ಪರಿಸ್ಥಿತಿಯನ್ನು ವಿವರಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ವಿವಿಧ ಅಧಿಕಾರಿಗಳು ತಕ್ಷಣವೇ ಪರಿಹಾರ ಕೊಡಬೇಕೆಂದು ಒತ್ತಾಯಿಸಿದೆ. ಅಲ್ಲದೇ ರಕ್ಷಣಾ ಕಾರ್ಯಗಳಿಗೆ ಹೆಚ್ಚುವರಿ ನಾಲ್ಕು ಎನ್‌ಡಿಆರ್‌ಎಫ್‌ ತಂಡಗಳನ್ನ ಕಳುಹಿಸಿಕೊಡಬೇಕು ಎಂದೂ ಕೇಳಿಕೊಂಡಿದೆ.

 

ಭೂಕುಸಿತ ಅಧ್ಯಯನಕ್ಕೆ ಪ್ರತ್ಯೇಕ ತಂಡ ಕಳಿಸಿಕೊಡುವುದು, ಮಳೆ ಹಾನಿಗೆ ಪ್ರತ್ಯೇಕ ಪ್ಯಾಕೇಜ್ ನೀಡುವುದು, ಪರಿಹಾರ ಹಾಗೂ ಪುನರ್ವಸತಿಗಾಗಿ ರಾಜ್ಯಕ್ಕೆ ಎಸ್‌ಡಿಆರ್‌ಎಂಎಫ್‌ನ ಮುಂದಿನ ಕಂತಿನ ರೂ. 395 ಕೋಟಿ ರೂ. ಗಳನ್ನು ತಕ್ಷಣದ ಬಿಡುಗಡೆಗಾಗಿ ಕ್ರಮಗಳನ್ನು ಕೈಗೊಳ್ಳುವುದು ಸೇರಿದಂತೆ ಹಲವು ಬೇಡಿಕೆಗಳನ್ನು ರಾಜ್ಯ ಪ್ರಧಾನಿಗಳ ಮುಂದಿಟ್ಟಿದೆ. ಆದರೆ ಪ್ರಧಾನಿಯವರು ಯಾವುದೇ ತತ್‌ಕ್ಷಣದ ಪರಿಹಾವನ್ನು ಘೋಷಿಸಿಲ್ಲ ಎನ್ನಲಾಗಿದೆ.

ವಿಡಿಯೋ ಸಂವಾದದ ಬಳಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಂಚಿವ ಆರ್. ಅಶೋಕ್ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮೊಂದಿಗೆ 2 ಗಂಟೆ ಮಾತನಾಡಿದ್ದಾರೆ. ಇಲ್ಲಿಯ ವಸ್ತುಸ್ಥಿತಿಯನ್ನು ಗಮನಕ್ಕೆ ತಂದಿದ್ದೇವೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಆದ ಮಳೆಯ ಬಗ್ಗೆ ಮಾಹಿತಿ ಕೇಳಿದರು. ಆ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಶೇ. 18ರಷ್ಟು ಮಳೆಯಾಗಿದೆ. ಕೊಡಗಿನಲ್ಲಿ ಶೇ. 500ರಷ್ಟು ಹೆಚ್ಚು ಮಳೆಯಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೆಚ್ಚು ಮಳೆಯಾಗಿದೆ. 56 ತಾಲೂಕಿನ 885 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. 250 ಸೇತುವೆಗಳು ಹಾಳಾಗಿವೆ. 3 ಸಾವಿರ ಮನೆಗಳು ಹಾಳಾಗಿದೆ. 4 ಸಾವಿರ ಕೋಟಿ ರೂ ನಷ್ಟವಾಗಿರುವ ಪ್ರಾಥಮಿಕ ಅಂದಾಜು ಇದೆ ಎಂಬ ಮಾಹಿತಿಯನ್ನು ಪ್ರಧಾನಿಗೆ ತಿಳಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಕಳೆದ ವರ್ಷ ಪ್ರವಾಹ ಪರಿಸ್ಥಿತಿ ಕುರಿತು ಕರ್ನಾಟಕವು 35,000 ಕೋಟಿ ರೂ ಅಂದಾಜು ನಷ್ಟ ಸೇರಿ ಪರಿಹಾರಕ್ಕೆ ಮನವಿ ಮಾಡಿದ್ದರೆ, ಕೇಂದ್ರವು 1200 ಕೋಟಿ ರೂ ಮತ್ತು 669 ಕೋಟಿ ರೂ ಸೇರಿ ಎರಡು ಕಂತುಗಳಲ್ಲಿ 1869 ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ.

ಪ್ರತಿಪಕ್ಷಗಳು ರಾಜ್ಯ ಸರ್ಕಾರ ಮೋದಿಯವರ ಬಳಿ ಹೆಚ್ಚು ಪರಿಹಾರ ಕೇಳಲು ವಿಫಲವಾಗಿದೆ. ಹಾಗಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದುದೊಯ್ಯಬೇಕು ಎಂದು ಆಗ್ರಹಿಸಿವೆ.


ಇದನ್ನೂ ಓದಿ: ನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...