Homeಕರ್ನಾಟಕ4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

- Advertisement -
- Advertisement -

ಪ್ರವಾಹಕ್ಕೆ ಒಳಗಾಗಿರುವ 6 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ರಾಜ್ಯ ಸಚಿವರೊಂದಿಗೆ ಇಂದು ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ್ದಾರೆ. ಪ್ರಧಾನಿಯವರು ನೂತನ ತಂತ್ರಜ್ಞಾನ ಮತ್ತು ಉತ್ತಮ ಸಂವಹನದ ಮೂಲಕ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ಭರವಸೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ, ಕೇರಳ, ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಿದ್ದು, ನೈರುತ್ಯ ಮಾನ್ಸೂನ್‌ ಎದುರಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ಅತಿವೃಷ್ಟಿಯಿಂದ ಬಾಧಿತವಾಗಿರುವ ಕರ್ನಾಟಕಕ್ಕೆ 4 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ರಾಜ್ಯದ 12 ಜಿಲ್ಲೆಗಳಲ್ಲಿನ ಅತಿವೃಷ್ಟಿ ಪರಿಸ್ಥಿತಿಯನ್ನು ವಿವರಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ವಿವಿಧ ಅಧಿಕಾರಿಗಳು ತಕ್ಷಣವೇ ಪರಿಹಾರ ಕೊಡಬೇಕೆಂದು ಒತ್ತಾಯಿಸಿದೆ. ಅಲ್ಲದೇ ರಕ್ಷಣಾ ಕಾರ್ಯಗಳಿಗೆ ಹೆಚ್ಚುವರಿ ನಾಲ್ಕು ಎನ್‌ಡಿಆರ್‌ಎಫ್‌ ತಂಡಗಳನ್ನ ಕಳುಹಿಸಿಕೊಡಬೇಕು ಎಂದೂ ಕೇಳಿಕೊಂಡಿದೆ.

 

ಭೂಕುಸಿತ ಅಧ್ಯಯನಕ್ಕೆ ಪ್ರತ್ಯೇಕ ತಂಡ ಕಳಿಸಿಕೊಡುವುದು, ಮಳೆ ಹಾನಿಗೆ ಪ್ರತ್ಯೇಕ ಪ್ಯಾಕೇಜ್ ನೀಡುವುದು, ಪರಿಹಾರ ಹಾಗೂ ಪುನರ್ವಸತಿಗಾಗಿ ರಾಜ್ಯಕ್ಕೆ ಎಸ್‌ಡಿಆರ್‌ಎಂಎಫ್‌ನ ಮುಂದಿನ ಕಂತಿನ ರೂ. 395 ಕೋಟಿ ರೂ. ಗಳನ್ನು ತಕ್ಷಣದ ಬಿಡುಗಡೆಗಾಗಿ ಕ್ರಮಗಳನ್ನು ಕೈಗೊಳ್ಳುವುದು ಸೇರಿದಂತೆ ಹಲವು ಬೇಡಿಕೆಗಳನ್ನು ರಾಜ್ಯ ಪ್ರಧಾನಿಗಳ ಮುಂದಿಟ್ಟಿದೆ. ಆದರೆ ಪ್ರಧಾನಿಯವರು ಯಾವುದೇ ತತ್‌ಕ್ಷಣದ ಪರಿಹಾವನ್ನು ಘೋಷಿಸಿಲ್ಲ ಎನ್ನಲಾಗಿದೆ.

ವಿಡಿಯೋ ಸಂವಾದದ ಬಳಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಂಚಿವ ಆರ್. ಅಶೋಕ್ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮೊಂದಿಗೆ 2 ಗಂಟೆ ಮಾತನಾಡಿದ್ದಾರೆ. ಇಲ್ಲಿಯ ವಸ್ತುಸ್ಥಿತಿಯನ್ನು ಗಮನಕ್ಕೆ ತಂದಿದ್ದೇವೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಆದ ಮಳೆಯ ಬಗ್ಗೆ ಮಾಹಿತಿ ಕೇಳಿದರು. ಆ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಶೇ. 18ರಷ್ಟು ಮಳೆಯಾಗಿದೆ. ಕೊಡಗಿನಲ್ಲಿ ಶೇ. 500ರಷ್ಟು ಹೆಚ್ಚು ಮಳೆಯಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೆಚ್ಚು ಮಳೆಯಾಗಿದೆ. 56 ತಾಲೂಕಿನ 885 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. 250 ಸೇತುವೆಗಳು ಹಾಳಾಗಿವೆ. 3 ಸಾವಿರ ಮನೆಗಳು ಹಾಳಾಗಿದೆ. 4 ಸಾವಿರ ಕೋಟಿ ರೂ ನಷ್ಟವಾಗಿರುವ ಪ್ರಾಥಮಿಕ ಅಂದಾಜು ಇದೆ ಎಂಬ ಮಾಹಿತಿಯನ್ನು ಪ್ರಧಾನಿಗೆ ತಿಳಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಕಳೆದ ವರ್ಷ ಪ್ರವಾಹ ಪರಿಸ್ಥಿತಿ ಕುರಿತು ಕರ್ನಾಟಕವು 35,000 ಕೋಟಿ ರೂ ಅಂದಾಜು ನಷ್ಟ ಸೇರಿ ಪರಿಹಾರಕ್ಕೆ ಮನವಿ ಮಾಡಿದ್ದರೆ, ಕೇಂದ್ರವು 1200 ಕೋಟಿ ರೂ ಮತ್ತು 669 ಕೋಟಿ ರೂ ಸೇರಿ ಎರಡು ಕಂತುಗಳಲ್ಲಿ 1869 ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ.

ಪ್ರತಿಪಕ್ಷಗಳು ರಾಜ್ಯ ಸರ್ಕಾರ ಮೋದಿಯವರ ಬಳಿ ಹೆಚ್ಚು ಪರಿಹಾರ ಕೇಳಲು ವಿಫಲವಾಗಿದೆ. ಹಾಗಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದುದೊಯ್ಯಬೇಕು ಎಂದು ಆಗ್ರಹಿಸಿವೆ.


ಇದನ್ನೂ ಓದಿ: ನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...