Homeಮುಖಪುಟಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ BJP ನಾಯಕನ ಮೇಲೆ BRS ಶಾಸಕನಿಂದ ಹಲ್ಲೆ

ಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ BJP ನಾಯಕನ ಮೇಲೆ BRS ಶಾಸಕನಿಂದ ಹಲ್ಲೆ

- Advertisement -
- Advertisement -

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ತೆಲುಗು ಸುದ್ದಿ ವಾಹಿನಿಯೊಂದು ನಡೆಸಿದ ಚರ್ಚೆಯ ನೇರಪ್ರಸಾರ ಕಾರ್ಯಕ್ರಮದಲ್ಲಿ ಆಡಳಿತಾರೂಢ ಬಿಆರ್‌ಎಸ್ ಶಾಸಕರೊಬ್ಬರು, ಬಿಜೆಪಿ ಮುಖಂಡನ ಮೇಲೆ ಬಹಿರಂಗ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಈ ವೇಳೆ ಪೊಲೀಸರು ಮತ್ತು ಇತರರು ಮಧ್ಯಪ್ರವೇಶಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.

ಹೈದರಾಬಾದ್ ನ ಕುತುಬಲ್ಲಾಪುರ ಕ್ಷೇತ್ರದ ಬಿಆರ್‌ಎಸ್ ಶಾಸಕ ಕೆ.ಪಿ.ವಿವೇಕಾನಂದ, ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುನಾ ಶ್ರೀಶೈಲಂ ಗೌಡ್ ಮೇಲೆ ಹಲ್ಲೆ ನಡೆಸಿದ್ದಾಗಿ ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಜಿ.ಕಿಶನ್ ರೆಡ್ಡಿ ಆರೋಪಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದೇ ತಾಳ್ಮೆ ಕಳೆದುಕೊಂಡ ಶಾಸಕರು ಹಲ್ಲೆ ನಡೆಸಿದ್ದಾಗಿ ಅವರು ಹೇಳಿದ್ದಾರೆ.

ಕುನಾ ಶ್ರೀಶೈಲಂ ಗೌಡ್ ಅವರ ಕತ್ತಿನ ಪಟ್ಟಿ ಹಿಡಿದು ವಿವೇಕಾನಂದ ಹಲ್ಲೆ ನಡೆಸಿದ ಕ್ರಮ ಅಂಜುಬುರುಕತನದ್ದು ಎಂದು ಅವರು ಹೇಳಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸದಿದ್ದರೆ, ಕಾನೂನಾತ್ಮಕ ಹೋರಾಟ ಆರಂಭಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

“ಚರ್ಚೆಯಲ್ಲಿ ಇಬ್ಬರೂ ಸಭ್ಯತೆಯನ್ನು ಪಾಲಿಸಬೇಕಾದದ್ದು ಅಗತ್ಯವಾದರೂ, ಬಿಜೆಪಿ ಮುಖಂಡ ಶಾಸಕರ ತಂದೆಯ ಹೆಸರನ್ನು ಎತ್ತಿಕೊಂಡರು” ಎಂದು ಬಿಆರ್‌ಎಸ್ ವಕ್ತಾರ ಶ್ರವಣ್ ದಸೋಜು ಪ್ರತಿಕ್ರಿಯಿಸಿದ್ದಾರೆ.

ಗೌಡ್ ಅವರು ವಿವೇಕಾನಂದ ಅವರ ಮೇಲೆ ವಾಗ್ದಾಳಿ ನಡೆಸುವ ವೇಳೆ ಅವರ ತಂದೆ-ತಾಯಿಯ ಹೆಸರು ಬಳಕೆ ಮಾಡಬಾರದಿತ್ತು ಹಾಗೂ ಶಾಸಕರು ಕೂಡಾ ಎದುರಾಳಿಯ ಮೇಲೆ ದಾಳಿ ಮಾಡಬಾರದಿತ್ತು. ಇಬ್ಬರೂ ಸಂಯಮ ಹೊಂದಿರಬೇಕಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆ ಕುರಿತು ಬಿಆರ್‌ಎಸ್ ವಕ್ತಾರ ಶ್ರವಣ್ ದಾಸೋಜು ಅವರು ಗೌಡ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ”ಬಿಆರ್‌ಎಸ್ ಶಾಸಕರ ತಂದೆಯ ಬಗ್ಗೆ ಗೌಡ್ ಉಲ್ಲೇಖಿಸಿದ್ದಾರೆ. ಇಬ್ಬರೂ ಚರ್ಚೆಯ ಸಮಯದಲ್ಲಿ ಸಭ್ಯತೆ ಮತ್ತು ಸೌಜನ್ಯವನ್ನು ಕಾಪಾಡಿಕೊಳ್ಳಬೇಕಾಗಿತ್ತು.ವಿವೇಕಾನಂದರು ಹಾಲಿ ಶಾಸಕರಾಗಿದ್ದರೆ, ಶ್ರೀಶೈಲಂ ಗೌಡ್ ಮೊದಲು ಶಾಸಕರಾಗಿದ್ದರು ಎಂದು ಅವರು ಹೇಳಿದರು.

ಇಬ್ಬರೂ ಸಭ್ಯತೆ, ಸಭ್ಯತೆಯನ್ನು ಕಾಪಾಡಿಕೊಂಡಿರಬೇಕು” ಮತ್ತು ಸಂಯಮದಿಂದಿರಬೇಕು. ಗೌಡ್ ಅವರು ವಿವೇಕಾನಂದರ ಪೋಷಕರ ಬಗ್ಗೆ ಮಾತನಾಡುವ ಬದಲು ಚರ್ಚೆಯ ಕುರಿತು ಮಾತನಾಡಬೇಕಿತ್ತು. ಇಬ್ಬರೂ ಸಂವೇದನಾಶೀಲರಾಗಿ ನಡೆದುಕೊಳ್ಳಬೇಕಿತ್ತು ಏಕೆಂದರೆ ಇಡೀ ಜಗತ್ತು ತಮ್ಮನ್ನು ಗಮನಿಸುತ್ತಿದೆ ಎಂದು ಅರಿತುಕೊಳ್ಳಬಹುದಿತ್ತು ಎಂದು ದಾಸೋಜು ಹೇಳಿದರು.

ಇದನ್ನೂ ಓದಿ: 477 ಕೇಬಲ್ ಟಿವಿ ಆಪರೇಟರ್‌ಗಳ ನೋಂದಣಿ ರದ್ದುಗೊಳಿಸಿದ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...