Homeಮುಖಪುಟಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ BJP ನಾಯಕನ ಮೇಲೆ BRS ಶಾಸಕನಿಂದ ಹಲ್ಲೆ

ಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ BJP ನಾಯಕನ ಮೇಲೆ BRS ಶಾಸಕನಿಂದ ಹಲ್ಲೆ

- Advertisement -
- Advertisement -

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ತೆಲುಗು ಸುದ್ದಿ ವಾಹಿನಿಯೊಂದು ನಡೆಸಿದ ಚರ್ಚೆಯ ನೇರಪ್ರಸಾರ ಕಾರ್ಯಕ್ರಮದಲ್ಲಿ ಆಡಳಿತಾರೂಢ ಬಿಆರ್‌ಎಸ್ ಶಾಸಕರೊಬ್ಬರು, ಬಿಜೆಪಿ ಮುಖಂಡನ ಮೇಲೆ ಬಹಿರಂಗ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಈ ವೇಳೆ ಪೊಲೀಸರು ಮತ್ತು ಇತರರು ಮಧ್ಯಪ್ರವೇಶಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.

ಹೈದರಾಬಾದ್ ನ ಕುತುಬಲ್ಲಾಪುರ ಕ್ಷೇತ್ರದ ಬಿಆರ್‌ಎಸ್ ಶಾಸಕ ಕೆ.ಪಿ.ವಿವೇಕಾನಂದ, ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುನಾ ಶ್ರೀಶೈಲಂ ಗೌಡ್ ಮೇಲೆ ಹಲ್ಲೆ ನಡೆಸಿದ್ದಾಗಿ ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಜಿ.ಕಿಶನ್ ರೆಡ್ಡಿ ಆರೋಪಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದೇ ತಾಳ್ಮೆ ಕಳೆದುಕೊಂಡ ಶಾಸಕರು ಹಲ್ಲೆ ನಡೆಸಿದ್ದಾಗಿ ಅವರು ಹೇಳಿದ್ದಾರೆ.

ಕುನಾ ಶ್ರೀಶೈಲಂ ಗೌಡ್ ಅವರ ಕತ್ತಿನ ಪಟ್ಟಿ ಹಿಡಿದು ವಿವೇಕಾನಂದ ಹಲ್ಲೆ ನಡೆಸಿದ ಕ್ರಮ ಅಂಜುಬುರುಕತನದ್ದು ಎಂದು ಅವರು ಹೇಳಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸದಿದ್ದರೆ, ಕಾನೂನಾತ್ಮಕ ಹೋರಾಟ ಆರಂಭಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

“ಚರ್ಚೆಯಲ್ಲಿ ಇಬ್ಬರೂ ಸಭ್ಯತೆಯನ್ನು ಪಾಲಿಸಬೇಕಾದದ್ದು ಅಗತ್ಯವಾದರೂ, ಬಿಜೆಪಿ ಮುಖಂಡ ಶಾಸಕರ ತಂದೆಯ ಹೆಸರನ್ನು ಎತ್ತಿಕೊಂಡರು” ಎಂದು ಬಿಆರ್‌ಎಸ್ ವಕ್ತಾರ ಶ್ರವಣ್ ದಸೋಜು ಪ್ರತಿಕ್ರಿಯಿಸಿದ್ದಾರೆ.

ಗೌಡ್ ಅವರು ವಿವೇಕಾನಂದ ಅವರ ಮೇಲೆ ವಾಗ್ದಾಳಿ ನಡೆಸುವ ವೇಳೆ ಅವರ ತಂದೆ-ತಾಯಿಯ ಹೆಸರು ಬಳಕೆ ಮಾಡಬಾರದಿತ್ತು ಹಾಗೂ ಶಾಸಕರು ಕೂಡಾ ಎದುರಾಳಿಯ ಮೇಲೆ ದಾಳಿ ಮಾಡಬಾರದಿತ್ತು. ಇಬ್ಬರೂ ಸಂಯಮ ಹೊಂದಿರಬೇಕಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆ ಕುರಿತು ಬಿಆರ್‌ಎಸ್ ವಕ್ತಾರ ಶ್ರವಣ್ ದಾಸೋಜು ಅವರು ಗೌಡ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ”ಬಿಆರ್‌ಎಸ್ ಶಾಸಕರ ತಂದೆಯ ಬಗ್ಗೆ ಗೌಡ್ ಉಲ್ಲೇಖಿಸಿದ್ದಾರೆ. ಇಬ್ಬರೂ ಚರ್ಚೆಯ ಸಮಯದಲ್ಲಿ ಸಭ್ಯತೆ ಮತ್ತು ಸೌಜನ್ಯವನ್ನು ಕಾಪಾಡಿಕೊಳ್ಳಬೇಕಾಗಿತ್ತು.ವಿವೇಕಾನಂದರು ಹಾಲಿ ಶಾಸಕರಾಗಿದ್ದರೆ, ಶ್ರೀಶೈಲಂ ಗೌಡ್ ಮೊದಲು ಶಾಸಕರಾಗಿದ್ದರು ಎಂದು ಅವರು ಹೇಳಿದರು.

ಇಬ್ಬರೂ ಸಭ್ಯತೆ, ಸಭ್ಯತೆಯನ್ನು ಕಾಪಾಡಿಕೊಂಡಿರಬೇಕು” ಮತ್ತು ಸಂಯಮದಿಂದಿರಬೇಕು. ಗೌಡ್ ಅವರು ವಿವೇಕಾನಂದರ ಪೋಷಕರ ಬಗ್ಗೆ ಮಾತನಾಡುವ ಬದಲು ಚರ್ಚೆಯ ಕುರಿತು ಮಾತನಾಡಬೇಕಿತ್ತು. ಇಬ್ಬರೂ ಸಂವೇದನಾಶೀಲರಾಗಿ ನಡೆದುಕೊಳ್ಳಬೇಕಿತ್ತು ಏಕೆಂದರೆ ಇಡೀ ಜಗತ್ತು ತಮ್ಮನ್ನು ಗಮನಿಸುತ್ತಿದೆ ಎಂದು ಅರಿತುಕೊಳ್ಳಬಹುದಿತ್ತು ಎಂದು ದಾಸೋಜು ಹೇಳಿದರು.

ಇದನ್ನೂ ಓದಿ: 477 ಕೇಬಲ್ ಟಿವಿ ಆಪರೇಟರ್‌ಗಳ ನೋಂದಣಿ ರದ್ದುಗೊಳಿಸಿದ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...