Homeಮುಖಪುಟಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ BJP ನಾಯಕನ ಮೇಲೆ BRS ಶಾಸಕನಿಂದ ಹಲ್ಲೆ

ಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ BJP ನಾಯಕನ ಮೇಲೆ BRS ಶಾಸಕನಿಂದ ಹಲ್ಲೆ

- Advertisement -
- Advertisement -

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ತೆಲುಗು ಸುದ್ದಿ ವಾಹಿನಿಯೊಂದು ನಡೆಸಿದ ಚರ್ಚೆಯ ನೇರಪ್ರಸಾರ ಕಾರ್ಯಕ್ರಮದಲ್ಲಿ ಆಡಳಿತಾರೂಢ ಬಿಆರ್‌ಎಸ್ ಶಾಸಕರೊಬ್ಬರು, ಬಿಜೆಪಿ ಮುಖಂಡನ ಮೇಲೆ ಬಹಿರಂಗ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಈ ವೇಳೆ ಪೊಲೀಸರು ಮತ್ತು ಇತರರು ಮಧ್ಯಪ್ರವೇಶಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.

ಹೈದರಾಬಾದ್ ನ ಕುತುಬಲ್ಲಾಪುರ ಕ್ಷೇತ್ರದ ಬಿಆರ್‌ಎಸ್ ಶಾಸಕ ಕೆ.ಪಿ.ವಿವೇಕಾನಂದ, ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುನಾ ಶ್ರೀಶೈಲಂ ಗೌಡ್ ಮೇಲೆ ಹಲ್ಲೆ ನಡೆಸಿದ್ದಾಗಿ ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಜಿ.ಕಿಶನ್ ರೆಡ್ಡಿ ಆರೋಪಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದೇ ತಾಳ್ಮೆ ಕಳೆದುಕೊಂಡ ಶಾಸಕರು ಹಲ್ಲೆ ನಡೆಸಿದ್ದಾಗಿ ಅವರು ಹೇಳಿದ್ದಾರೆ.

ಕುನಾ ಶ್ರೀಶೈಲಂ ಗೌಡ್ ಅವರ ಕತ್ತಿನ ಪಟ್ಟಿ ಹಿಡಿದು ವಿವೇಕಾನಂದ ಹಲ್ಲೆ ನಡೆಸಿದ ಕ್ರಮ ಅಂಜುಬುರುಕತನದ್ದು ಎಂದು ಅವರು ಹೇಳಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸದಿದ್ದರೆ, ಕಾನೂನಾತ್ಮಕ ಹೋರಾಟ ಆರಂಭಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

“ಚರ್ಚೆಯಲ್ಲಿ ಇಬ್ಬರೂ ಸಭ್ಯತೆಯನ್ನು ಪಾಲಿಸಬೇಕಾದದ್ದು ಅಗತ್ಯವಾದರೂ, ಬಿಜೆಪಿ ಮುಖಂಡ ಶಾಸಕರ ತಂದೆಯ ಹೆಸರನ್ನು ಎತ್ತಿಕೊಂಡರು” ಎಂದು ಬಿಆರ್‌ಎಸ್ ವಕ್ತಾರ ಶ್ರವಣ್ ದಸೋಜು ಪ್ರತಿಕ್ರಿಯಿಸಿದ್ದಾರೆ.

ಗೌಡ್ ಅವರು ವಿವೇಕಾನಂದ ಅವರ ಮೇಲೆ ವಾಗ್ದಾಳಿ ನಡೆಸುವ ವೇಳೆ ಅವರ ತಂದೆ-ತಾಯಿಯ ಹೆಸರು ಬಳಕೆ ಮಾಡಬಾರದಿತ್ತು ಹಾಗೂ ಶಾಸಕರು ಕೂಡಾ ಎದುರಾಳಿಯ ಮೇಲೆ ದಾಳಿ ಮಾಡಬಾರದಿತ್ತು. ಇಬ್ಬರೂ ಸಂಯಮ ಹೊಂದಿರಬೇಕಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆ ಕುರಿತು ಬಿಆರ್‌ಎಸ್ ವಕ್ತಾರ ಶ್ರವಣ್ ದಾಸೋಜು ಅವರು ಗೌಡ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ”ಬಿಆರ್‌ಎಸ್ ಶಾಸಕರ ತಂದೆಯ ಬಗ್ಗೆ ಗೌಡ್ ಉಲ್ಲೇಖಿಸಿದ್ದಾರೆ. ಇಬ್ಬರೂ ಚರ್ಚೆಯ ಸಮಯದಲ್ಲಿ ಸಭ್ಯತೆ ಮತ್ತು ಸೌಜನ್ಯವನ್ನು ಕಾಪಾಡಿಕೊಳ್ಳಬೇಕಾಗಿತ್ತು.ವಿವೇಕಾನಂದರು ಹಾಲಿ ಶಾಸಕರಾಗಿದ್ದರೆ, ಶ್ರೀಶೈಲಂ ಗೌಡ್ ಮೊದಲು ಶಾಸಕರಾಗಿದ್ದರು ಎಂದು ಅವರು ಹೇಳಿದರು.

ಇಬ್ಬರೂ ಸಭ್ಯತೆ, ಸಭ್ಯತೆಯನ್ನು ಕಾಪಾಡಿಕೊಂಡಿರಬೇಕು” ಮತ್ತು ಸಂಯಮದಿಂದಿರಬೇಕು. ಗೌಡ್ ಅವರು ವಿವೇಕಾನಂದರ ಪೋಷಕರ ಬಗ್ಗೆ ಮಾತನಾಡುವ ಬದಲು ಚರ್ಚೆಯ ಕುರಿತು ಮಾತನಾಡಬೇಕಿತ್ತು. ಇಬ್ಬರೂ ಸಂವೇದನಾಶೀಲರಾಗಿ ನಡೆದುಕೊಳ್ಳಬೇಕಿತ್ತು ಏಕೆಂದರೆ ಇಡೀ ಜಗತ್ತು ತಮ್ಮನ್ನು ಗಮನಿಸುತ್ತಿದೆ ಎಂದು ಅರಿತುಕೊಳ್ಳಬಹುದಿತ್ತು ಎಂದು ದಾಸೋಜು ಹೇಳಿದರು.

ಇದನ್ನೂ ಓದಿ: 477 ಕೇಬಲ್ ಟಿವಿ ಆಪರೇಟರ್‌ಗಳ ನೋಂದಣಿ ರದ್ದುಗೊಳಿಸಿದ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...