Homeಮುಖಪುಟಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

ಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

- Advertisement -
- Advertisement -

ಕೋಲ್ಕತ್ತಾ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಸಮುದಾಯದವರಿಗೆ “ಕಿರುಕುಳ” ನೀಡಲಾಗುತ್ತಿದೆ ಎಂದು ಆರೋಪಿಸಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಕೋಲ್ಕತ್ತಾದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ನೂರಾರು ಬೆಂಬಲಿಗರೊಂದಿಗೆ ಸಾಗಿದ ಈ ರ‍್ಯಾಲಿಯಲ್ಲಿ, ಬಂಗಾಳಿಗಳ ಬಗೆಗಿನ ಬಿಜೆಪಿಯ ವರ್ತನೆ ತೀವ್ರ ಬೇಸರ ತರಿಸಿದೆ ಎಂದು ಅವರು ಖಂಡಿಸಿದರು.

“ಬಿಜೆಪಿಯ ಬಂಗಾಳಿ ವಿರೋಧಿ ಧೋರಣೆ ನನಗೆ ತೀವ್ರ ಮುಜುಗರ ಮತ್ತು ಬೇಸರ ತರಿಸಿದೆ. ಇನ್ನು ಮುಂದೆ ನಾನು ಹೆಚ್ಚಾಗಿ ಬಂಗಾಳಿಯಲ್ಲೇ ಮಾತನಾಡುತ್ತೇನೆ; ನಿಮಗೆ ಧೈರ್ಯವಿದ್ದರೆ ನನ್ನನ್ನು ಬಂಧನ ಶಿಬಿರಗಳಿಗೆ ಕಳುಹಿಸಿ!” ಎಂದು ಮಮತಾ ಬ್ಯಾನರ್ಜಿ ಬಿಜೆಪಿಗೆ ಸವಾಲು ಹಾಕಿದರು. ರ್ಯಾಲಿಯಲ್ಲಿ ಆಕ್ರೋಶ ಹೊರಹಾಕಿದ ಅವರು, “ಬಂಗಾಳಿ ಮಾತನಾಡುವ ವಲಸಿಗರು ರೋಹಿಂಗ್ಯಾ ಮುಸ್ಲಿಮರು ಎಂಬುದನ್ನು ಸಾಬೀತುಪಡಿಸಲು ನಾನು ನಿಮಗೆ ಸವಾಲು ಹಾಕುತ್ತೇನೆ. ದೇಶಾದ್ಯಂತ 22 ಲಕ್ಷ ಬಂಗಾಳಿ ವಲಸೆ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅವರೆಲ್ಲರಿಗೂ ಮಾನ್ಯ ಗುರುತಿನ ದಾಖಲೆಗಳಿವೆ” ಎಂದು ಹೇಳಿದರು.

ಈ ಪ್ರತಿಭಟನಾ ಮೆರವಣಿಗೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಸೇರಿದಂತೆ ಹಲವು ಹಿರಿಯ ಟಿಎಂಸಿ ನಾಯಕರು ಸಾಥ್ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದೊಂದಿಗೆ, ಮಧ್ಯಾಹ್ನ 1.45ಕ್ಕೆ ಮಧ್ಯ ಕೋಲ್ಕತ್ತಾದ ಕಾಲೇಜು ಸ್ಕ್ವೇರ್‌ನಿಂದ ಮೆರವಣಿಗೆ ಆರಂಭವಾಯಿತು. ಸುಮಾರು ಮೂರು ಕಿಲೋಮೀಟರ್ ದೂರ ಸಾಗಿದ ಈ ಮೆರವಣಿಗೆ, ಧರ್ಮತಲಾದ ಡೊರಿನಾ ಕ್ರಾಸಿಂಗ್‌ನಲ್ಲಿ ಅಂತ್ಯಗೊಂಡಿತು. ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸುಮಾರು 1,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಮೆರವಣಿಗೆಯಿಂದಾಗಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಬೇರೆ ಮಾರ್ಗಗಳಿಗೆ ತಿರುಗಿಸಬೇಕಾಯಿತು.

ಚುನಾವಣಾ ಕದನಕ್ಕೆ ನಾಂದಿ: ಮೋದಿ ಭೇಟಿಗೂ ಮುನ್ನ ಮಮತಾ ಆರ್ಭಟ:

ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿಗೆ ಕೇವಲ 24 ಗಂಟೆಗಳ ಮುಂಚಿತವಾಗಿ ಈ ಪ್ರತಿಭಟನೆ ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. “ಬಿಜೆಪಿ ಬಂಗಾಳಿ ಮಾತನಾಡುವ ಜನರನ್ನು ಬಂಧನ ಶಿಬಿರಗಳಿಗೆ ಕಳುಹಿಸಲು ಮುಂದಾದರೆ, ಬಂಗಾಳವು ಮುಂಬರುವ ಚುನಾವಣೆಯಲ್ಲಿ ಅವರನ್ನು ರಾಜಕೀಯವಾಗಿ ಬಗ್ಗುಬಡಿಯುತ್ತದೆ” ಎಂದು ಮಮತಾ ಬ್ಯಾನರ್ಜಿ ಖಡಾಖಂಡಿತವಾಗಿ ಹೇಳಿದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಬಂಗಾಳಿ ಮಾತನಾಡುವವರನ್ನು “ಅಕ್ರಮ ವಲಸಿಗರು” ಎಂದು ಹಣೆಪಟ್ಟಿ ಕಟ್ಟಲು, ವ್ಯವಸ್ಥಿತವಾಗಿ ಭಾಷಾ ಪ್ರೊಫೈಲಿಂಗ್ ಮಾಡಲು ಮತ್ತು ಅನಿಯಂತ್ರಿತ ಬಂಧನಗಳಿಗೆ ಗುರಿಪಡಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಗಳನ್ನು ಟಿಎಂಸಿ ಬಲವಾಗಿ ಆರೋಪಿಸಿದೆ. ಈ ಬೃಹತ್ ಪ್ರತಿಭಟನೆಯು ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಟಿಎಂಸಿಯ ಭವಿಷ್ಯದ ಪ್ರಚಾರದ ದಿಕ್ಕನ್ನು ಸೂಚಿಸಿತು.

ಬಿಜೆಪಿ ತಿರುಗೇಟು: “ಬಂಗಾಳಿ ಅಸ್ಮಿತೆ” ಹೆಸರಿನಲ್ಲಿ ಅಕ್ರಮ ವಲಸಿಗರ ರಕ್ಷಣೆ ಆರೋಪ

ಈ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. “ಬಂಗಾಳಿ ಅಸ್ಮಿತೆ” ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಸಂಪೂರ್ಣ ಕಸರತ್ತು ವಾಸ್ತವವಾಗಿ “ಬಂಗಾಳಿ ಮಾತನಾಡುವ ರೋಹಿಂಗ್ಯಾಗಳು ಮತ್ತು ಅಕ್ರಮ ಬಾಂಗ್ಲಾದೇಶಿ ಒಳನುಸುಳುಕೋರರ” ಅಸ್ತಿತ್ವವನ್ನು ಮರೆಮಾಚುವ ಪ್ರಯತ್ನ” ಎಂದು ಅವರು ಆರೋಪಿಸಿದರು.

ಮಮತಾ ಬ್ಯಾನರ್ಜಿಯವರ ನಡೆಯನ್ನು ತೀವ್ರವಾಗಿ ಟೀಕಿಸಿದ ಸುವೇಂದು ಅಧಿಕಾರಿ, “ರಾಜ್ಯದಲ್ಲಿ ಸಾವಿರಾರು ಬಂಗಾಳಿ ಮಾತನಾಡುವ ಶಿಕ್ಷಕರು ಉದ್ಯೋಗ ಕಳೆದುಕೊಂಡು ನರಳುತ್ತಿರುವಾಗ, ಅವರ ಗೋಳಾಟ ಮಮತಾ ಬ್ಯಾನರ್ಜಿಗೆ ಏಕೆ ಕೇಳಿಸಲಿಲ್ಲ?” ಎಂದು ವ್ಯಂಗ್ಯವಾಡಿದರು. ಸರ್ಕಾರದ ಮೇಲೆ ಸರಣಿ ಪ್ರಶ್ನೆಗಳನ್ನು ಎಸೆದ ಅವರು, “ಅತ್ರಿ ಭಟ್ಟಾಚಾರ್ಯ ಮತ್ತು ಸುಬ್ರತಾ ಗುಪ್ತಾ ಎಂಬ ಬಂಗಾಳಿ ಅಧಿಕಾರಿಗಳನ್ನು ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಪರಿಗಣಿಸದೆ, ಕಿರಿಯರಾದ ಮನೋಜ್ ಪಂತ್‌ಗೆ ಆ ಹುದ್ದೆ ಏಕೆ ನೀಡಲಾಯಿತು? ಅಲ್ಲದೆ, ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಮುಖೋಪಾಧ್ಯಾಯ ಅವರನ್ನು ಕಡೆಗಣಿಸಿ, ಹೊರ ರಾಜ್ಯದ ಕಿರಿಯ ಅಧಿಕಾರಿಯಾದ ರಾಜೀವ್ ಕುಮಾರ್‌ರನ್ನು ಡಿಜಿಪಿಯಾಗಿ ಏಕೆ ನೇಮಿಸಲಾಯಿತು?” ಎಂದು ತಮ್ಮ ‘ಎಕ್ಸ್’ ಪೋಸ್ಟ್‌ನಲ್ಲಿ ಅಸಮಾಧಾನ ಹೊರಹಾಕಿದರು.

ಕಾಲೇಜಿನಲ್ಲೇ ವಿದ್ಯಾರ್ಥಿನಿ ಬೆಂಕಿಹಚ್ಚಿಕೊಂಡು ಸಾವು ಪ್ರಕರಣ: ಬಿಜೆಡಿಯಿಂದ ಬೃಹತ್ ಪ್ರತಿಭಟನೆ, ಬಾಲಸೋರ್ ಪಟ್ಟಣ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...