Homeಮುಖಪುಟಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

ಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

- Advertisement -
- Advertisement -

ಕೋಲ್ಕತ್ತಾ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಸಮುದಾಯದವರಿಗೆ “ಕಿರುಕುಳ” ನೀಡಲಾಗುತ್ತಿದೆ ಎಂದು ಆರೋಪಿಸಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಕೋಲ್ಕತ್ತಾದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ನೂರಾರು ಬೆಂಬಲಿಗರೊಂದಿಗೆ ಸಾಗಿದ ಈ ರ‍್ಯಾಲಿಯಲ್ಲಿ, ಬಂಗಾಳಿಗಳ ಬಗೆಗಿನ ಬಿಜೆಪಿಯ ವರ್ತನೆ ತೀವ್ರ ಬೇಸರ ತರಿಸಿದೆ ಎಂದು ಅವರು ಖಂಡಿಸಿದರು.

“ಬಿಜೆಪಿಯ ಬಂಗಾಳಿ ವಿರೋಧಿ ಧೋರಣೆ ನನಗೆ ತೀವ್ರ ಮುಜುಗರ ಮತ್ತು ಬೇಸರ ತರಿಸಿದೆ. ಇನ್ನು ಮುಂದೆ ನಾನು ಹೆಚ್ಚಾಗಿ ಬಂಗಾಳಿಯಲ್ಲೇ ಮಾತನಾಡುತ್ತೇನೆ; ನಿಮಗೆ ಧೈರ್ಯವಿದ್ದರೆ ನನ್ನನ್ನು ಬಂಧನ ಶಿಬಿರಗಳಿಗೆ ಕಳುಹಿಸಿ!” ಎಂದು ಮಮತಾ ಬ್ಯಾನರ್ಜಿ ಬಿಜೆಪಿಗೆ ಸವಾಲು ಹಾಕಿದರು. ರ್ಯಾಲಿಯಲ್ಲಿ ಆಕ್ರೋಶ ಹೊರಹಾಕಿದ ಅವರು, “ಬಂಗಾಳಿ ಮಾತನಾಡುವ ವಲಸಿಗರು ರೋಹಿಂಗ್ಯಾ ಮುಸ್ಲಿಮರು ಎಂಬುದನ್ನು ಸಾಬೀತುಪಡಿಸಲು ನಾನು ನಿಮಗೆ ಸವಾಲು ಹಾಕುತ್ತೇನೆ. ದೇಶಾದ್ಯಂತ 22 ಲಕ್ಷ ಬಂಗಾಳಿ ವಲಸೆ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅವರೆಲ್ಲರಿಗೂ ಮಾನ್ಯ ಗುರುತಿನ ದಾಖಲೆಗಳಿವೆ” ಎಂದು ಹೇಳಿದರು.

ಈ ಪ್ರತಿಭಟನಾ ಮೆರವಣಿಗೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಸೇರಿದಂತೆ ಹಲವು ಹಿರಿಯ ಟಿಎಂಸಿ ನಾಯಕರು ಸಾಥ್ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದೊಂದಿಗೆ, ಮಧ್ಯಾಹ್ನ 1.45ಕ್ಕೆ ಮಧ್ಯ ಕೋಲ್ಕತ್ತಾದ ಕಾಲೇಜು ಸ್ಕ್ವೇರ್‌ನಿಂದ ಮೆರವಣಿಗೆ ಆರಂಭವಾಯಿತು. ಸುಮಾರು ಮೂರು ಕಿಲೋಮೀಟರ್ ದೂರ ಸಾಗಿದ ಈ ಮೆರವಣಿಗೆ, ಧರ್ಮತಲಾದ ಡೊರಿನಾ ಕ್ರಾಸಿಂಗ್‌ನಲ್ಲಿ ಅಂತ್ಯಗೊಂಡಿತು. ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸುಮಾರು 1,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಮೆರವಣಿಗೆಯಿಂದಾಗಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಬೇರೆ ಮಾರ್ಗಗಳಿಗೆ ತಿರುಗಿಸಬೇಕಾಯಿತು.

ಚುನಾವಣಾ ಕದನಕ್ಕೆ ನಾಂದಿ: ಮೋದಿ ಭೇಟಿಗೂ ಮುನ್ನ ಮಮತಾ ಆರ್ಭಟ:

ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿಗೆ ಕೇವಲ 24 ಗಂಟೆಗಳ ಮುಂಚಿತವಾಗಿ ಈ ಪ್ರತಿಭಟನೆ ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. “ಬಿಜೆಪಿ ಬಂಗಾಳಿ ಮಾತನಾಡುವ ಜನರನ್ನು ಬಂಧನ ಶಿಬಿರಗಳಿಗೆ ಕಳುಹಿಸಲು ಮುಂದಾದರೆ, ಬಂಗಾಳವು ಮುಂಬರುವ ಚುನಾವಣೆಯಲ್ಲಿ ಅವರನ್ನು ರಾಜಕೀಯವಾಗಿ ಬಗ್ಗುಬಡಿಯುತ್ತದೆ” ಎಂದು ಮಮತಾ ಬ್ಯಾನರ್ಜಿ ಖಡಾಖಂಡಿತವಾಗಿ ಹೇಳಿದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಬಂಗಾಳಿ ಮಾತನಾಡುವವರನ್ನು “ಅಕ್ರಮ ವಲಸಿಗರು” ಎಂದು ಹಣೆಪಟ್ಟಿ ಕಟ್ಟಲು, ವ್ಯವಸ್ಥಿತವಾಗಿ ಭಾಷಾ ಪ್ರೊಫೈಲಿಂಗ್ ಮಾಡಲು ಮತ್ತು ಅನಿಯಂತ್ರಿತ ಬಂಧನಗಳಿಗೆ ಗುರಿಪಡಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಗಳನ್ನು ಟಿಎಂಸಿ ಬಲವಾಗಿ ಆರೋಪಿಸಿದೆ. ಈ ಬೃಹತ್ ಪ್ರತಿಭಟನೆಯು ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಟಿಎಂಸಿಯ ಭವಿಷ್ಯದ ಪ್ರಚಾರದ ದಿಕ್ಕನ್ನು ಸೂಚಿಸಿತು.

ಬಿಜೆಪಿ ತಿರುಗೇಟು: “ಬಂಗಾಳಿ ಅಸ್ಮಿತೆ” ಹೆಸರಿನಲ್ಲಿ ಅಕ್ರಮ ವಲಸಿಗರ ರಕ್ಷಣೆ ಆರೋಪ

ಈ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. “ಬಂಗಾಳಿ ಅಸ್ಮಿತೆ” ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಸಂಪೂರ್ಣ ಕಸರತ್ತು ವಾಸ್ತವವಾಗಿ “ಬಂಗಾಳಿ ಮಾತನಾಡುವ ರೋಹಿಂಗ್ಯಾಗಳು ಮತ್ತು ಅಕ್ರಮ ಬಾಂಗ್ಲಾದೇಶಿ ಒಳನುಸುಳುಕೋರರ” ಅಸ್ತಿತ್ವವನ್ನು ಮರೆಮಾಚುವ ಪ್ರಯತ್ನ” ಎಂದು ಅವರು ಆರೋಪಿಸಿದರು.

ಮಮತಾ ಬ್ಯಾನರ್ಜಿಯವರ ನಡೆಯನ್ನು ತೀವ್ರವಾಗಿ ಟೀಕಿಸಿದ ಸುವೇಂದು ಅಧಿಕಾರಿ, “ರಾಜ್ಯದಲ್ಲಿ ಸಾವಿರಾರು ಬಂಗಾಳಿ ಮಾತನಾಡುವ ಶಿಕ್ಷಕರು ಉದ್ಯೋಗ ಕಳೆದುಕೊಂಡು ನರಳುತ್ತಿರುವಾಗ, ಅವರ ಗೋಳಾಟ ಮಮತಾ ಬ್ಯಾನರ್ಜಿಗೆ ಏಕೆ ಕೇಳಿಸಲಿಲ್ಲ?” ಎಂದು ವ್ಯಂಗ್ಯವಾಡಿದರು. ಸರ್ಕಾರದ ಮೇಲೆ ಸರಣಿ ಪ್ರಶ್ನೆಗಳನ್ನು ಎಸೆದ ಅವರು, “ಅತ್ರಿ ಭಟ್ಟಾಚಾರ್ಯ ಮತ್ತು ಸುಬ್ರತಾ ಗುಪ್ತಾ ಎಂಬ ಬಂಗಾಳಿ ಅಧಿಕಾರಿಗಳನ್ನು ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಪರಿಗಣಿಸದೆ, ಕಿರಿಯರಾದ ಮನೋಜ್ ಪಂತ್‌ಗೆ ಆ ಹುದ್ದೆ ಏಕೆ ನೀಡಲಾಯಿತು? ಅಲ್ಲದೆ, ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಮುಖೋಪಾಧ್ಯಾಯ ಅವರನ್ನು ಕಡೆಗಣಿಸಿ, ಹೊರ ರಾಜ್ಯದ ಕಿರಿಯ ಅಧಿಕಾರಿಯಾದ ರಾಜೀವ್ ಕುಮಾರ್‌ರನ್ನು ಡಿಜಿಪಿಯಾಗಿ ಏಕೆ ನೇಮಿಸಲಾಯಿತು?” ಎಂದು ತಮ್ಮ ‘ಎಕ್ಸ್’ ಪೋಸ್ಟ್‌ನಲ್ಲಿ ಅಸಮಾಧಾನ ಹೊರಹಾಕಿದರು.

ಕಾಲೇಜಿನಲ್ಲೇ ವಿದ್ಯಾರ್ಥಿನಿ ಬೆಂಕಿಹಚ್ಚಿಕೊಂಡು ಸಾವು ಪ್ರಕರಣ: ಬಿಜೆಡಿಯಿಂದ ಬೃಹತ್ ಪ್ರತಿಭಟನೆ, ಬಾಲಸೋರ್ ಪಟ್ಟಣ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...