Homeಮುಖಪುಟಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

ಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

- Advertisement -
- Advertisement -

ಕೋಲ್ಕತ್ತಾ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಸಮುದಾಯದವರಿಗೆ “ಕಿರುಕುಳ” ನೀಡಲಾಗುತ್ತಿದೆ ಎಂದು ಆರೋಪಿಸಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಕೋಲ್ಕತ್ತಾದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ನೂರಾರು ಬೆಂಬಲಿಗರೊಂದಿಗೆ ಸಾಗಿದ ಈ ರ‍್ಯಾಲಿಯಲ್ಲಿ, ಬಂಗಾಳಿಗಳ ಬಗೆಗಿನ ಬಿಜೆಪಿಯ ವರ್ತನೆ ತೀವ್ರ ಬೇಸರ ತರಿಸಿದೆ ಎಂದು ಅವರು ಖಂಡಿಸಿದರು.

“ಬಿಜೆಪಿಯ ಬಂಗಾಳಿ ವಿರೋಧಿ ಧೋರಣೆ ನನಗೆ ತೀವ್ರ ಮುಜುಗರ ಮತ್ತು ಬೇಸರ ತರಿಸಿದೆ. ಇನ್ನು ಮುಂದೆ ನಾನು ಹೆಚ್ಚಾಗಿ ಬಂಗಾಳಿಯಲ್ಲೇ ಮಾತನಾಡುತ್ತೇನೆ; ನಿಮಗೆ ಧೈರ್ಯವಿದ್ದರೆ ನನ್ನನ್ನು ಬಂಧನ ಶಿಬಿರಗಳಿಗೆ ಕಳುಹಿಸಿ!” ಎಂದು ಮಮತಾ ಬ್ಯಾನರ್ಜಿ ಬಿಜೆಪಿಗೆ ಸವಾಲು ಹಾಕಿದರು. ರ್ಯಾಲಿಯಲ್ಲಿ ಆಕ್ರೋಶ ಹೊರಹಾಕಿದ ಅವರು, “ಬಂಗಾಳಿ ಮಾತನಾಡುವ ವಲಸಿಗರು ರೋಹಿಂಗ್ಯಾ ಮುಸ್ಲಿಮರು ಎಂಬುದನ್ನು ಸಾಬೀತುಪಡಿಸಲು ನಾನು ನಿಮಗೆ ಸವಾಲು ಹಾಕುತ್ತೇನೆ. ದೇಶಾದ್ಯಂತ 22 ಲಕ್ಷ ಬಂಗಾಳಿ ವಲಸೆ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅವರೆಲ್ಲರಿಗೂ ಮಾನ್ಯ ಗುರುತಿನ ದಾಖಲೆಗಳಿವೆ” ಎಂದು ಹೇಳಿದರು.

ಈ ಪ್ರತಿಭಟನಾ ಮೆರವಣಿಗೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಸೇರಿದಂತೆ ಹಲವು ಹಿರಿಯ ಟಿಎಂಸಿ ನಾಯಕರು ಸಾಥ್ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದೊಂದಿಗೆ, ಮಧ್ಯಾಹ್ನ 1.45ಕ್ಕೆ ಮಧ್ಯ ಕೋಲ್ಕತ್ತಾದ ಕಾಲೇಜು ಸ್ಕ್ವೇರ್‌ನಿಂದ ಮೆರವಣಿಗೆ ಆರಂಭವಾಯಿತು. ಸುಮಾರು ಮೂರು ಕಿಲೋಮೀಟರ್ ದೂರ ಸಾಗಿದ ಈ ಮೆರವಣಿಗೆ, ಧರ್ಮತಲಾದ ಡೊರಿನಾ ಕ್ರಾಸಿಂಗ್‌ನಲ್ಲಿ ಅಂತ್ಯಗೊಂಡಿತು. ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸುಮಾರು 1,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಮೆರವಣಿಗೆಯಿಂದಾಗಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಬೇರೆ ಮಾರ್ಗಗಳಿಗೆ ತಿರುಗಿಸಬೇಕಾಯಿತು.

ಚುನಾವಣಾ ಕದನಕ್ಕೆ ನಾಂದಿ: ಮೋದಿ ಭೇಟಿಗೂ ಮುನ್ನ ಮಮತಾ ಆರ್ಭಟ:

ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿಗೆ ಕೇವಲ 24 ಗಂಟೆಗಳ ಮುಂಚಿತವಾಗಿ ಈ ಪ್ರತಿಭಟನೆ ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. “ಬಿಜೆಪಿ ಬಂಗಾಳಿ ಮಾತನಾಡುವ ಜನರನ್ನು ಬಂಧನ ಶಿಬಿರಗಳಿಗೆ ಕಳುಹಿಸಲು ಮುಂದಾದರೆ, ಬಂಗಾಳವು ಮುಂಬರುವ ಚುನಾವಣೆಯಲ್ಲಿ ಅವರನ್ನು ರಾಜಕೀಯವಾಗಿ ಬಗ್ಗುಬಡಿಯುತ್ತದೆ” ಎಂದು ಮಮತಾ ಬ್ಯಾನರ್ಜಿ ಖಡಾಖಂಡಿತವಾಗಿ ಹೇಳಿದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಬಂಗಾಳಿ ಮಾತನಾಡುವವರನ್ನು “ಅಕ್ರಮ ವಲಸಿಗರು” ಎಂದು ಹಣೆಪಟ್ಟಿ ಕಟ್ಟಲು, ವ್ಯವಸ್ಥಿತವಾಗಿ ಭಾಷಾ ಪ್ರೊಫೈಲಿಂಗ್ ಮಾಡಲು ಮತ್ತು ಅನಿಯಂತ್ರಿತ ಬಂಧನಗಳಿಗೆ ಗುರಿಪಡಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಗಳನ್ನು ಟಿಎಂಸಿ ಬಲವಾಗಿ ಆರೋಪಿಸಿದೆ. ಈ ಬೃಹತ್ ಪ್ರತಿಭಟನೆಯು ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಟಿಎಂಸಿಯ ಭವಿಷ್ಯದ ಪ್ರಚಾರದ ದಿಕ್ಕನ್ನು ಸೂಚಿಸಿತು.

ಬಿಜೆಪಿ ತಿರುಗೇಟು: “ಬಂಗಾಳಿ ಅಸ್ಮಿತೆ” ಹೆಸರಿನಲ್ಲಿ ಅಕ್ರಮ ವಲಸಿಗರ ರಕ್ಷಣೆ ಆರೋಪ

ಈ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. “ಬಂಗಾಳಿ ಅಸ್ಮಿತೆ” ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಸಂಪೂರ್ಣ ಕಸರತ್ತು ವಾಸ್ತವವಾಗಿ “ಬಂಗಾಳಿ ಮಾತನಾಡುವ ರೋಹಿಂಗ್ಯಾಗಳು ಮತ್ತು ಅಕ್ರಮ ಬಾಂಗ್ಲಾದೇಶಿ ಒಳನುಸುಳುಕೋರರ” ಅಸ್ತಿತ್ವವನ್ನು ಮರೆಮಾಚುವ ಪ್ರಯತ್ನ” ಎಂದು ಅವರು ಆರೋಪಿಸಿದರು.

ಮಮತಾ ಬ್ಯಾನರ್ಜಿಯವರ ನಡೆಯನ್ನು ತೀವ್ರವಾಗಿ ಟೀಕಿಸಿದ ಸುವೇಂದು ಅಧಿಕಾರಿ, “ರಾಜ್ಯದಲ್ಲಿ ಸಾವಿರಾರು ಬಂಗಾಳಿ ಮಾತನಾಡುವ ಶಿಕ್ಷಕರು ಉದ್ಯೋಗ ಕಳೆದುಕೊಂಡು ನರಳುತ್ತಿರುವಾಗ, ಅವರ ಗೋಳಾಟ ಮಮತಾ ಬ್ಯಾನರ್ಜಿಗೆ ಏಕೆ ಕೇಳಿಸಲಿಲ್ಲ?” ಎಂದು ವ್ಯಂಗ್ಯವಾಡಿದರು. ಸರ್ಕಾರದ ಮೇಲೆ ಸರಣಿ ಪ್ರಶ್ನೆಗಳನ್ನು ಎಸೆದ ಅವರು, “ಅತ್ರಿ ಭಟ್ಟಾಚಾರ್ಯ ಮತ್ತು ಸುಬ್ರತಾ ಗುಪ್ತಾ ಎಂಬ ಬಂಗಾಳಿ ಅಧಿಕಾರಿಗಳನ್ನು ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಪರಿಗಣಿಸದೆ, ಕಿರಿಯರಾದ ಮನೋಜ್ ಪಂತ್‌ಗೆ ಆ ಹುದ್ದೆ ಏಕೆ ನೀಡಲಾಯಿತು? ಅಲ್ಲದೆ, ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಮುಖೋಪಾಧ್ಯಾಯ ಅವರನ್ನು ಕಡೆಗಣಿಸಿ, ಹೊರ ರಾಜ್ಯದ ಕಿರಿಯ ಅಧಿಕಾರಿಯಾದ ರಾಜೀವ್ ಕುಮಾರ್‌ರನ್ನು ಡಿಜಿಪಿಯಾಗಿ ಏಕೆ ನೇಮಿಸಲಾಯಿತು?” ಎಂದು ತಮ್ಮ ‘ಎಕ್ಸ್’ ಪೋಸ್ಟ್‌ನಲ್ಲಿ ಅಸಮಾಧಾನ ಹೊರಹಾಕಿದರು.

ಕಾಲೇಜಿನಲ್ಲೇ ವಿದ್ಯಾರ್ಥಿನಿ ಬೆಂಕಿಹಚ್ಚಿಕೊಂಡು ಸಾವು ಪ್ರಕರಣ: ಬಿಜೆಡಿಯಿಂದ ಬೃಹತ್ ಪ್ರತಿಭಟನೆ, ಬಾಲಸೋರ್ ಪಟ್ಟಣ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...