Homeಮುಖಪುಟಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

ಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

- Advertisement -
- Advertisement -

ಕೋಲ್ಕತ್ತಾ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಸಮುದಾಯದವರಿಗೆ “ಕಿರುಕುಳ” ನೀಡಲಾಗುತ್ತಿದೆ ಎಂದು ಆರೋಪಿಸಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಕೋಲ್ಕತ್ತಾದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ನೂರಾರು ಬೆಂಬಲಿಗರೊಂದಿಗೆ ಸಾಗಿದ ಈ ರ‍್ಯಾಲಿಯಲ್ಲಿ, ಬಂಗಾಳಿಗಳ ಬಗೆಗಿನ ಬಿಜೆಪಿಯ ವರ್ತನೆ ತೀವ್ರ ಬೇಸರ ತರಿಸಿದೆ ಎಂದು ಅವರು ಖಂಡಿಸಿದರು.

“ಬಿಜೆಪಿಯ ಬಂಗಾಳಿ ವಿರೋಧಿ ಧೋರಣೆ ನನಗೆ ತೀವ್ರ ಮುಜುಗರ ಮತ್ತು ಬೇಸರ ತರಿಸಿದೆ. ಇನ್ನು ಮುಂದೆ ನಾನು ಹೆಚ್ಚಾಗಿ ಬಂಗಾಳಿಯಲ್ಲೇ ಮಾತನಾಡುತ್ತೇನೆ; ನಿಮಗೆ ಧೈರ್ಯವಿದ್ದರೆ ನನ್ನನ್ನು ಬಂಧನ ಶಿಬಿರಗಳಿಗೆ ಕಳುಹಿಸಿ!” ಎಂದು ಮಮತಾ ಬ್ಯಾನರ್ಜಿ ಬಿಜೆಪಿಗೆ ಸವಾಲು ಹಾಕಿದರು. ರ್ಯಾಲಿಯಲ್ಲಿ ಆಕ್ರೋಶ ಹೊರಹಾಕಿದ ಅವರು, “ಬಂಗಾಳಿ ಮಾತನಾಡುವ ವಲಸಿಗರು ರೋಹಿಂಗ್ಯಾ ಮುಸ್ಲಿಮರು ಎಂಬುದನ್ನು ಸಾಬೀತುಪಡಿಸಲು ನಾನು ನಿಮಗೆ ಸವಾಲು ಹಾಕುತ್ತೇನೆ. ದೇಶಾದ್ಯಂತ 22 ಲಕ್ಷ ಬಂಗಾಳಿ ವಲಸೆ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅವರೆಲ್ಲರಿಗೂ ಮಾನ್ಯ ಗುರುತಿನ ದಾಖಲೆಗಳಿವೆ” ಎಂದು ಹೇಳಿದರು.

ಈ ಪ್ರತಿಭಟನಾ ಮೆರವಣಿಗೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಸೇರಿದಂತೆ ಹಲವು ಹಿರಿಯ ಟಿಎಂಸಿ ನಾಯಕರು ಸಾಥ್ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದೊಂದಿಗೆ, ಮಧ್ಯಾಹ್ನ 1.45ಕ್ಕೆ ಮಧ್ಯ ಕೋಲ್ಕತ್ತಾದ ಕಾಲೇಜು ಸ್ಕ್ವೇರ್‌ನಿಂದ ಮೆರವಣಿಗೆ ಆರಂಭವಾಯಿತು. ಸುಮಾರು ಮೂರು ಕಿಲೋಮೀಟರ್ ದೂರ ಸಾಗಿದ ಈ ಮೆರವಣಿಗೆ, ಧರ್ಮತಲಾದ ಡೊರಿನಾ ಕ್ರಾಸಿಂಗ್‌ನಲ್ಲಿ ಅಂತ್ಯಗೊಂಡಿತು. ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸುಮಾರು 1,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಮೆರವಣಿಗೆಯಿಂದಾಗಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಬೇರೆ ಮಾರ್ಗಗಳಿಗೆ ತಿರುಗಿಸಬೇಕಾಯಿತು.

ಚುನಾವಣಾ ಕದನಕ್ಕೆ ನಾಂದಿ: ಮೋದಿ ಭೇಟಿಗೂ ಮುನ್ನ ಮಮತಾ ಆರ್ಭಟ:

ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿಗೆ ಕೇವಲ 24 ಗಂಟೆಗಳ ಮುಂಚಿತವಾಗಿ ಈ ಪ್ರತಿಭಟನೆ ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. “ಬಿಜೆಪಿ ಬಂಗಾಳಿ ಮಾತನಾಡುವ ಜನರನ್ನು ಬಂಧನ ಶಿಬಿರಗಳಿಗೆ ಕಳುಹಿಸಲು ಮುಂದಾದರೆ, ಬಂಗಾಳವು ಮುಂಬರುವ ಚುನಾವಣೆಯಲ್ಲಿ ಅವರನ್ನು ರಾಜಕೀಯವಾಗಿ ಬಗ್ಗುಬಡಿಯುತ್ತದೆ” ಎಂದು ಮಮತಾ ಬ್ಯಾನರ್ಜಿ ಖಡಾಖಂಡಿತವಾಗಿ ಹೇಳಿದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಬಂಗಾಳಿ ಮಾತನಾಡುವವರನ್ನು “ಅಕ್ರಮ ವಲಸಿಗರು” ಎಂದು ಹಣೆಪಟ್ಟಿ ಕಟ್ಟಲು, ವ್ಯವಸ್ಥಿತವಾಗಿ ಭಾಷಾ ಪ್ರೊಫೈಲಿಂಗ್ ಮಾಡಲು ಮತ್ತು ಅನಿಯಂತ್ರಿತ ಬಂಧನಗಳಿಗೆ ಗುರಿಪಡಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಗಳನ್ನು ಟಿಎಂಸಿ ಬಲವಾಗಿ ಆರೋಪಿಸಿದೆ. ಈ ಬೃಹತ್ ಪ್ರತಿಭಟನೆಯು ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಟಿಎಂಸಿಯ ಭವಿಷ್ಯದ ಪ್ರಚಾರದ ದಿಕ್ಕನ್ನು ಸೂಚಿಸಿತು.

ಬಿಜೆಪಿ ತಿರುಗೇಟು: “ಬಂಗಾಳಿ ಅಸ್ಮಿತೆ” ಹೆಸರಿನಲ್ಲಿ ಅಕ್ರಮ ವಲಸಿಗರ ರಕ್ಷಣೆ ಆರೋಪ

ಈ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. “ಬಂಗಾಳಿ ಅಸ್ಮಿತೆ” ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಸಂಪೂರ್ಣ ಕಸರತ್ತು ವಾಸ್ತವವಾಗಿ “ಬಂಗಾಳಿ ಮಾತನಾಡುವ ರೋಹಿಂಗ್ಯಾಗಳು ಮತ್ತು ಅಕ್ರಮ ಬಾಂಗ್ಲಾದೇಶಿ ಒಳನುಸುಳುಕೋರರ” ಅಸ್ತಿತ್ವವನ್ನು ಮರೆಮಾಚುವ ಪ್ರಯತ್ನ” ಎಂದು ಅವರು ಆರೋಪಿಸಿದರು.

ಮಮತಾ ಬ್ಯಾನರ್ಜಿಯವರ ನಡೆಯನ್ನು ತೀವ್ರವಾಗಿ ಟೀಕಿಸಿದ ಸುವೇಂದು ಅಧಿಕಾರಿ, “ರಾಜ್ಯದಲ್ಲಿ ಸಾವಿರಾರು ಬಂಗಾಳಿ ಮಾತನಾಡುವ ಶಿಕ್ಷಕರು ಉದ್ಯೋಗ ಕಳೆದುಕೊಂಡು ನರಳುತ್ತಿರುವಾಗ, ಅವರ ಗೋಳಾಟ ಮಮತಾ ಬ್ಯಾನರ್ಜಿಗೆ ಏಕೆ ಕೇಳಿಸಲಿಲ್ಲ?” ಎಂದು ವ್ಯಂಗ್ಯವಾಡಿದರು. ಸರ್ಕಾರದ ಮೇಲೆ ಸರಣಿ ಪ್ರಶ್ನೆಗಳನ್ನು ಎಸೆದ ಅವರು, “ಅತ್ರಿ ಭಟ್ಟಾಚಾರ್ಯ ಮತ್ತು ಸುಬ್ರತಾ ಗುಪ್ತಾ ಎಂಬ ಬಂಗಾಳಿ ಅಧಿಕಾರಿಗಳನ್ನು ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಪರಿಗಣಿಸದೆ, ಕಿರಿಯರಾದ ಮನೋಜ್ ಪಂತ್‌ಗೆ ಆ ಹುದ್ದೆ ಏಕೆ ನೀಡಲಾಯಿತು? ಅಲ್ಲದೆ, ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಮುಖೋಪಾಧ್ಯಾಯ ಅವರನ್ನು ಕಡೆಗಣಿಸಿ, ಹೊರ ರಾಜ್ಯದ ಕಿರಿಯ ಅಧಿಕಾರಿಯಾದ ರಾಜೀವ್ ಕುಮಾರ್‌ರನ್ನು ಡಿಜಿಪಿಯಾಗಿ ಏಕೆ ನೇಮಿಸಲಾಯಿತು?” ಎಂದು ತಮ್ಮ ‘ಎಕ್ಸ್’ ಪೋಸ್ಟ್‌ನಲ್ಲಿ ಅಸಮಾಧಾನ ಹೊರಹಾಕಿದರು.

ಕಾಲೇಜಿನಲ್ಲೇ ವಿದ್ಯಾರ್ಥಿನಿ ಬೆಂಕಿಹಚ್ಚಿಕೊಂಡು ಸಾವು ಪ್ರಕರಣ: ಬಿಜೆಡಿಯಿಂದ ಬೃಹತ್ ಪ್ರತಿಭಟನೆ, ಬಾಲಸೋರ್ ಪಟ್ಟಣ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...