Homeಮುಖಪುಟಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

ಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

- Advertisement -
- Advertisement -

ಕೋಲ್ಕತ್ತಾ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಸಮುದಾಯದವರಿಗೆ “ಕಿರುಕುಳ” ನೀಡಲಾಗುತ್ತಿದೆ ಎಂದು ಆರೋಪಿಸಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಕೋಲ್ಕತ್ತಾದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ನೂರಾರು ಬೆಂಬಲಿಗರೊಂದಿಗೆ ಸಾಗಿದ ಈ ರ‍್ಯಾಲಿಯಲ್ಲಿ, ಬಂಗಾಳಿಗಳ ಬಗೆಗಿನ ಬಿಜೆಪಿಯ ವರ್ತನೆ ತೀವ್ರ ಬೇಸರ ತರಿಸಿದೆ ಎಂದು ಅವರು ಖಂಡಿಸಿದರು.

“ಬಿಜೆಪಿಯ ಬಂಗಾಳಿ ವಿರೋಧಿ ಧೋರಣೆ ನನಗೆ ತೀವ್ರ ಮುಜುಗರ ಮತ್ತು ಬೇಸರ ತರಿಸಿದೆ. ಇನ್ನು ಮುಂದೆ ನಾನು ಹೆಚ್ಚಾಗಿ ಬಂಗಾಳಿಯಲ್ಲೇ ಮಾತನಾಡುತ್ತೇನೆ; ನಿಮಗೆ ಧೈರ್ಯವಿದ್ದರೆ ನನ್ನನ್ನು ಬಂಧನ ಶಿಬಿರಗಳಿಗೆ ಕಳುಹಿಸಿ!” ಎಂದು ಮಮತಾ ಬ್ಯಾನರ್ಜಿ ಬಿಜೆಪಿಗೆ ಸವಾಲು ಹಾಕಿದರು. ರ್ಯಾಲಿಯಲ್ಲಿ ಆಕ್ರೋಶ ಹೊರಹಾಕಿದ ಅವರು, “ಬಂಗಾಳಿ ಮಾತನಾಡುವ ವಲಸಿಗರು ರೋಹಿಂಗ್ಯಾ ಮುಸ್ಲಿಮರು ಎಂಬುದನ್ನು ಸಾಬೀತುಪಡಿಸಲು ನಾನು ನಿಮಗೆ ಸವಾಲು ಹಾಕುತ್ತೇನೆ. ದೇಶಾದ್ಯಂತ 22 ಲಕ್ಷ ಬಂಗಾಳಿ ವಲಸೆ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅವರೆಲ್ಲರಿಗೂ ಮಾನ್ಯ ಗುರುತಿನ ದಾಖಲೆಗಳಿವೆ” ಎಂದು ಹೇಳಿದರು.

ಈ ಪ್ರತಿಭಟನಾ ಮೆರವಣಿಗೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಸೇರಿದಂತೆ ಹಲವು ಹಿರಿಯ ಟಿಎಂಸಿ ನಾಯಕರು ಸಾಥ್ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದೊಂದಿಗೆ, ಮಧ್ಯಾಹ್ನ 1.45ಕ್ಕೆ ಮಧ್ಯ ಕೋಲ್ಕತ್ತಾದ ಕಾಲೇಜು ಸ್ಕ್ವೇರ್‌ನಿಂದ ಮೆರವಣಿಗೆ ಆರಂಭವಾಯಿತು. ಸುಮಾರು ಮೂರು ಕಿಲೋಮೀಟರ್ ದೂರ ಸಾಗಿದ ಈ ಮೆರವಣಿಗೆ, ಧರ್ಮತಲಾದ ಡೊರಿನಾ ಕ್ರಾಸಿಂಗ್‌ನಲ್ಲಿ ಅಂತ್ಯಗೊಂಡಿತು. ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸುಮಾರು 1,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಮೆರವಣಿಗೆಯಿಂದಾಗಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಬೇರೆ ಮಾರ್ಗಗಳಿಗೆ ತಿರುಗಿಸಬೇಕಾಯಿತು.

ಚುನಾವಣಾ ಕದನಕ್ಕೆ ನಾಂದಿ: ಮೋದಿ ಭೇಟಿಗೂ ಮುನ್ನ ಮಮತಾ ಆರ್ಭಟ:

ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿಗೆ ಕೇವಲ 24 ಗಂಟೆಗಳ ಮುಂಚಿತವಾಗಿ ಈ ಪ್ರತಿಭಟನೆ ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. “ಬಿಜೆಪಿ ಬಂಗಾಳಿ ಮಾತನಾಡುವ ಜನರನ್ನು ಬಂಧನ ಶಿಬಿರಗಳಿಗೆ ಕಳುಹಿಸಲು ಮುಂದಾದರೆ, ಬಂಗಾಳವು ಮುಂಬರುವ ಚುನಾವಣೆಯಲ್ಲಿ ಅವರನ್ನು ರಾಜಕೀಯವಾಗಿ ಬಗ್ಗುಬಡಿಯುತ್ತದೆ” ಎಂದು ಮಮತಾ ಬ್ಯಾನರ್ಜಿ ಖಡಾಖಂಡಿತವಾಗಿ ಹೇಳಿದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಬಂಗಾಳಿ ಮಾತನಾಡುವವರನ್ನು “ಅಕ್ರಮ ವಲಸಿಗರು” ಎಂದು ಹಣೆಪಟ್ಟಿ ಕಟ್ಟಲು, ವ್ಯವಸ್ಥಿತವಾಗಿ ಭಾಷಾ ಪ್ರೊಫೈಲಿಂಗ್ ಮಾಡಲು ಮತ್ತು ಅನಿಯಂತ್ರಿತ ಬಂಧನಗಳಿಗೆ ಗುರಿಪಡಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಗಳನ್ನು ಟಿಎಂಸಿ ಬಲವಾಗಿ ಆರೋಪಿಸಿದೆ. ಈ ಬೃಹತ್ ಪ್ರತಿಭಟನೆಯು ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಟಿಎಂಸಿಯ ಭವಿಷ್ಯದ ಪ್ರಚಾರದ ದಿಕ್ಕನ್ನು ಸೂಚಿಸಿತು.

ಬಿಜೆಪಿ ತಿರುಗೇಟು: “ಬಂಗಾಳಿ ಅಸ್ಮಿತೆ” ಹೆಸರಿನಲ್ಲಿ ಅಕ್ರಮ ವಲಸಿಗರ ರಕ್ಷಣೆ ಆರೋಪ

ಈ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. “ಬಂಗಾಳಿ ಅಸ್ಮಿತೆ” ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಸಂಪೂರ್ಣ ಕಸರತ್ತು ವಾಸ್ತವವಾಗಿ “ಬಂಗಾಳಿ ಮಾತನಾಡುವ ರೋಹಿಂಗ್ಯಾಗಳು ಮತ್ತು ಅಕ್ರಮ ಬಾಂಗ್ಲಾದೇಶಿ ಒಳನುಸುಳುಕೋರರ” ಅಸ್ತಿತ್ವವನ್ನು ಮರೆಮಾಚುವ ಪ್ರಯತ್ನ” ಎಂದು ಅವರು ಆರೋಪಿಸಿದರು.

ಮಮತಾ ಬ್ಯಾನರ್ಜಿಯವರ ನಡೆಯನ್ನು ತೀವ್ರವಾಗಿ ಟೀಕಿಸಿದ ಸುವೇಂದು ಅಧಿಕಾರಿ, “ರಾಜ್ಯದಲ್ಲಿ ಸಾವಿರಾರು ಬಂಗಾಳಿ ಮಾತನಾಡುವ ಶಿಕ್ಷಕರು ಉದ್ಯೋಗ ಕಳೆದುಕೊಂಡು ನರಳುತ್ತಿರುವಾಗ, ಅವರ ಗೋಳಾಟ ಮಮತಾ ಬ್ಯಾನರ್ಜಿಗೆ ಏಕೆ ಕೇಳಿಸಲಿಲ್ಲ?” ಎಂದು ವ್ಯಂಗ್ಯವಾಡಿದರು. ಸರ್ಕಾರದ ಮೇಲೆ ಸರಣಿ ಪ್ರಶ್ನೆಗಳನ್ನು ಎಸೆದ ಅವರು, “ಅತ್ರಿ ಭಟ್ಟಾಚಾರ್ಯ ಮತ್ತು ಸುಬ್ರತಾ ಗುಪ್ತಾ ಎಂಬ ಬಂಗಾಳಿ ಅಧಿಕಾರಿಗಳನ್ನು ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಪರಿಗಣಿಸದೆ, ಕಿರಿಯರಾದ ಮನೋಜ್ ಪಂತ್‌ಗೆ ಆ ಹುದ್ದೆ ಏಕೆ ನೀಡಲಾಯಿತು? ಅಲ್ಲದೆ, ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಮುಖೋಪಾಧ್ಯಾಯ ಅವರನ್ನು ಕಡೆಗಣಿಸಿ, ಹೊರ ರಾಜ್ಯದ ಕಿರಿಯ ಅಧಿಕಾರಿಯಾದ ರಾಜೀವ್ ಕುಮಾರ್‌ರನ್ನು ಡಿಜಿಪಿಯಾಗಿ ಏಕೆ ನೇಮಿಸಲಾಯಿತು?” ಎಂದು ತಮ್ಮ ‘ಎಕ್ಸ್’ ಪೋಸ್ಟ್‌ನಲ್ಲಿ ಅಸಮಾಧಾನ ಹೊರಹಾಕಿದರು.

ಕಾಲೇಜಿನಲ್ಲೇ ವಿದ್ಯಾರ್ಥಿನಿ ಬೆಂಕಿಹಚ್ಚಿಕೊಂಡು ಸಾವು ಪ್ರಕರಣ: ಬಿಜೆಡಿಯಿಂದ ಬೃಹತ್ ಪ್ರತಿಭಟನೆ, ಬಾಲಸೋರ್ ಪಟ್ಟಣ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...