Homeಮುಖಪುಟವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್...

ವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್ ಬಿಚ್ಚಿಟ್ಟ ತುರ್ತು ಪರಿಸ್ಥಿತಿಯ ನೆನಪುಗಳು

- Advertisement -
- Advertisement -

ಜೂನ್ ಎಂದರೆ ತುರ್ತು ಪರಿಸ್ಥಿತಿಯ ಕರಾಳ ನೆನಪು. 1975 ಜೂನ್ 25 ರಂದು ಭಾರತದಲ್ಲಿ ಹೇರಿದ್ದ  ತುರ್ತು ಪರಿಸ್ಥಿತಿಯ ವಿರುದ್ಧ ವಾಶಿಂಗ್ಟನ್ ನಲ್ಲಿ ಅಂದು ನೆಲೆಸಿದ್ದ ಸಾಮಾಜಿಕ ಹೋರಾಟಗಾರ, ಸೆಂಟರ್‌ ಫಾರ್ ಡೆಮಾಕ್ರಸಿ ಅಧ್ಯಕ್ಷ ಎಸ್ ಆರ್ ಹಿರೇಮಠ್ ಅವರು ಪ್ರತಿಭಟಿಸಿದ್ದರು. ಈ ಪ್ರತಿಭಟನೆ ನಡೆಸಿದ್ದಕ್ಕೆ ಅಂದಿನ ಭಾರತ ಸರ್ಕಾರ ಹಿರೇಮಠ್ ಅವರ ಪಾಸ್ ಪೋರ್ಟ್ ಅನ್ನು ರದ್ದು ಮಾಡಿತ್ತು.

1975 ರ ಅಧಿಕೃತ ತುರ್ತು ಪರಿಸ್ಥಿತಿಯಲ್ಲಿ ಇದ್ದ ದಿನಗಳಿಗೆ ಹೋಲಿಸಿದರೆ ಇವತ್ತಿನ ದಿನಗಳು ಅದರ 20 ಪಟ್ಟು ಭೀಕರವಾಗಿವೆ ಎನ್ನುವ ಹಿರೇಮಠರ ಮಾತುಗಳು ಎಚ್ಚರಿಕೆ ಘಂಟೆಯಾಗಿವೆ. ಬುದ್ಧ ಬಸವ ಅಂಬೇಡ್ಕರ್ ಅವರ ಕಲ್ಪನೆಯ ಸಮಾನತೆಯ ಸಮಾಜವನ್ನು ನಾವು ಕಟ್ಟಲು ಮತ್ತೆ ಹೋರಾಟಕ್ಕೆ ಸಜ್ಜಾಗಬೇಕು ಅನ್ನುವ ಹಿರೇಮಠ್ ಅವರನ್ನು ಹಿರಿಯ ಲೇಖಕ- ಪ್ರಕಾಶಕ ಬಸವರಾಜ್ ಸೂಳಿಬಾವಿ ಸಂದರ್ಶನ ನಡೆಸಿದ್ದಾರೆ.

ಜಯಪ್ರಕಾಶ್ ನಾರಾಯಣ್ ಅವರು ಕನಸು ಕಂಡಿದ್ದ ಸಂಪೂರ್ಣ ಕ್ರಾಂತಿಗೆ ಮತ್ತೆ ಏನು ಮಾಡಬೇಕು? ಈ ದೇಶವನ್ನು ಹಿಂದಕ್ಕೆ ಒಯ್ಯುತ್ತಿರುವ ಸಂಗತಿಗಳು ಯಾವುವು? ಆರ್ಥಿಕ ಅಸಮಾನತೆಯ ಜನಕರು ಯಾರು? ಇದನ್ನು ಮುಂದುವರೆಸುತ್ತಿರುವವರು ಯಾರು? ಸಿಎಎ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ಇವುಗಳ ಅಪಾಯಗಳು ಏನು? ಶೂಮಾಕರ್ ಮತ್ತು ಗಾಂಧಿ ಆರ್ಥಿಕ ವ್ಯವಸ್ಥೆ – ಅಂಬೇಡ್ಕರ್ – ಜ್ಯೋತಿಭಾ ಫುಲೆ ಇವರ ಸಮಾನತೆಯ ಆಂದೋಲನಗಳನ್ನು ಹೇಗೆ ಮರುಕಟ್ಟಬೇಕು? ಇವೆಲ್ಲವನ್ನೂ ಹಿರೇಮಠ್ ಅವರು ತಮ್ಮ ಅಪಾರ ಹೋರಾಟದ ಅನುಭವ ಮತ್ತು ಚಿಂತನೆಯ ನೆಲೆಯಲ್ಲಿ ಚರ್ಚಿಸಿದ್ದಾರೆ.

ರಾಜಕೀಯ ಪಕ್ಷಗಳು ಜನರ ಭರವಸೆಯನ್ನು ಕಳೆದುಕೊಂಡಿರುವುದದರ ಬಗ್ಗೆ ಕಳವಳ ವ್ಯಕ್ತಪಡಿಸುವ ಹಿರೇಮಠ್ ಅವರು, ಎಲ್ಲ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ನಾಗರಿಕ ಸಮುದಾಯ ಹೋರಾಟ ಮಾಡುವುದು ಮುಖ್ಯ ಎಂದು ವಿವರಿಸುತ್ತಾರೆ. ಇದಕ್ಕೆ ಸಂವಿಧಾನದ ಪೀಠಿಕೆಯನ್ನು ಉದಾಹರಣೆ ಕೊಡುವ ಹಿರೇಮಠ್ ಅವರು ಮಧ್ಯಮ ವರ್ಗ ತಮ್ಮ ಸೌಲಭ್ಯ ಸೌಕರ್ಯಗಳನ್ನು ಕಡೆಗೆ ಮಾತ್ರ ಗಮನಿಸುವುದನ್ನು ಬಿಟ್ಟು ನಾಗರಿಕ ಸಮಾಜವಾಗಿ ಒಟ್ಟಾಗಿ ಹೋರಾಡಬೇಕು ಅನ್ನುತ್ತಾರೆ.

ಥಾಮಸ್ ಪಿಕೆಟ್ಟಿ ಉದಾಹರಣೆ ಕೊಟ್ಟು ಹೆಚ್ಚು ಜನಕ್ಕೆ ಸಂಪನ್ಮೂಲಗಳ ಹಂಚಿಕೆಯಾಗುವುದರ ಬಗ್ಗೆ ಮಾತಾಡುವ ಹಿರೇಮಠ್ ಇನ್ನೂ ಹತ್ತು ಹಲವು ಸಂಗತಿಗಳನ್ನು ಈ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ಪೂರ್ಣ ವಿಡಿಯೋವನ್ನು ಇಲ್ಲಿ ನೋಡಿ.


ಇದನ್ನೂ ಓದಿ: ಕೇರಳದ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ಹಿಂದುತ್ವವಾದಿಗಳ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಅವರನ್ನೇ ಇಟ್ಟು ಇನ್ನೂ ಮೂರು ಸಿನಿಮಾ ಮಾಡುವುದಾಗಿ ಘೋಷಿಸಿದ ನಿರ್ದೇಶಕರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...