Homeಮುಖಪುಟವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್...

ವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್ ಬಿಚ್ಚಿಟ್ಟ ತುರ್ತು ಪರಿಸ್ಥಿತಿಯ ನೆನಪುಗಳು

- Advertisement -
- Advertisement -

ಜೂನ್ ಎಂದರೆ ತುರ್ತು ಪರಿಸ್ಥಿತಿಯ ಕರಾಳ ನೆನಪು. 1975 ಜೂನ್ 25 ರಂದು ಭಾರತದಲ್ಲಿ ಹೇರಿದ್ದ  ತುರ್ತು ಪರಿಸ್ಥಿತಿಯ ವಿರುದ್ಧ ವಾಶಿಂಗ್ಟನ್ ನಲ್ಲಿ ಅಂದು ನೆಲೆಸಿದ್ದ ಸಾಮಾಜಿಕ ಹೋರಾಟಗಾರ, ಸೆಂಟರ್‌ ಫಾರ್ ಡೆಮಾಕ್ರಸಿ ಅಧ್ಯಕ್ಷ ಎಸ್ ಆರ್ ಹಿರೇಮಠ್ ಅವರು ಪ್ರತಿಭಟಿಸಿದ್ದರು. ಈ ಪ್ರತಿಭಟನೆ ನಡೆಸಿದ್ದಕ್ಕೆ ಅಂದಿನ ಭಾರತ ಸರ್ಕಾರ ಹಿರೇಮಠ್ ಅವರ ಪಾಸ್ ಪೋರ್ಟ್ ಅನ್ನು ರದ್ದು ಮಾಡಿತ್ತು.

1975 ರ ಅಧಿಕೃತ ತುರ್ತು ಪರಿಸ್ಥಿತಿಯಲ್ಲಿ ಇದ್ದ ದಿನಗಳಿಗೆ ಹೋಲಿಸಿದರೆ ಇವತ್ತಿನ ದಿನಗಳು ಅದರ 20 ಪಟ್ಟು ಭೀಕರವಾಗಿವೆ ಎನ್ನುವ ಹಿರೇಮಠರ ಮಾತುಗಳು ಎಚ್ಚರಿಕೆ ಘಂಟೆಯಾಗಿವೆ. ಬುದ್ಧ ಬಸವ ಅಂಬೇಡ್ಕರ್ ಅವರ ಕಲ್ಪನೆಯ ಸಮಾನತೆಯ ಸಮಾಜವನ್ನು ನಾವು ಕಟ್ಟಲು ಮತ್ತೆ ಹೋರಾಟಕ್ಕೆ ಸಜ್ಜಾಗಬೇಕು ಅನ್ನುವ ಹಿರೇಮಠ್ ಅವರನ್ನು ಹಿರಿಯ ಲೇಖಕ- ಪ್ರಕಾಶಕ ಬಸವರಾಜ್ ಸೂಳಿಬಾವಿ ಸಂದರ್ಶನ ನಡೆಸಿದ್ದಾರೆ.

ಜಯಪ್ರಕಾಶ್ ನಾರಾಯಣ್ ಅವರು ಕನಸು ಕಂಡಿದ್ದ ಸಂಪೂರ್ಣ ಕ್ರಾಂತಿಗೆ ಮತ್ತೆ ಏನು ಮಾಡಬೇಕು? ಈ ದೇಶವನ್ನು ಹಿಂದಕ್ಕೆ ಒಯ್ಯುತ್ತಿರುವ ಸಂಗತಿಗಳು ಯಾವುವು? ಆರ್ಥಿಕ ಅಸಮಾನತೆಯ ಜನಕರು ಯಾರು? ಇದನ್ನು ಮುಂದುವರೆಸುತ್ತಿರುವವರು ಯಾರು? ಸಿಎಎ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ಇವುಗಳ ಅಪಾಯಗಳು ಏನು? ಶೂಮಾಕರ್ ಮತ್ತು ಗಾಂಧಿ ಆರ್ಥಿಕ ವ್ಯವಸ್ಥೆ – ಅಂಬೇಡ್ಕರ್ – ಜ್ಯೋತಿಭಾ ಫುಲೆ ಇವರ ಸಮಾನತೆಯ ಆಂದೋಲನಗಳನ್ನು ಹೇಗೆ ಮರುಕಟ್ಟಬೇಕು? ಇವೆಲ್ಲವನ್ನೂ ಹಿರೇಮಠ್ ಅವರು ತಮ್ಮ ಅಪಾರ ಹೋರಾಟದ ಅನುಭವ ಮತ್ತು ಚಿಂತನೆಯ ನೆಲೆಯಲ್ಲಿ ಚರ್ಚಿಸಿದ್ದಾರೆ.

ರಾಜಕೀಯ ಪಕ್ಷಗಳು ಜನರ ಭರವಸೆಯನ್ನು ಕಳೆದುಕೊಂಡಿರುವುದದರ ಬಗ್ಗೆ ಕಳವಳ ವ್ಯಕ್ತಪಡಿಸುವ ಹಿರೇಮಠ್ ಅವರು, ಎಲ್ಲ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ನಾಗರಿಕ ಸಮುದಾಯ ಹೋರಾಟ ಮಾಡುವುದು ಮುಖ್ಯ ಎಂದು ವಿವರಿಸುತ್ತಾರೆ. ಇದಕ್ಕೆ ಸಂವಿಧಾನದ ಪೀಠಿಕೆಯನ್ನು ಉದಾಹರಣೆ ಕೊಡುವ ಹಿರೇಮಠ್ ಅವರು ಮಧ್ಯಮ ವರ್ಗ ತಮ್ಮ ಸೌಲಭ್ಯ ಸೌಕರ್ಯಗಳನ್ನು ಕಡೆಗೆ ಮಾತ್ರ ಗಮನಿಸುವುದನ್ನು ಬಿಟ್ಟು ನಾಗರಿಕ ಸಮಾಜವಾಗಿ ಒಟ್ಟಾಗಿ ಹೋರಾಡಬೇಕು ಅನ್ನುತ್ತಾರೆ.

ಥಾಮಸ್ ಪಿಕೆಟ್ಟಿ ಉದಾಹರಣೆ ಕೊಟ್ಟು ಹೆಚ್ಚು ಜನಕ್ಕೆ ಸಂಪನ್ಮೂಲಗಳ ಹಂಚಿಕೆಯಾಗುವುದರ ಬಗ್ಗೆ ಮಾತಾಡುವ ಹಿರೇಮಠ್ ಇನ್ನೂ ಹತ್ತು ಹಲವು ಸಂಗತಿಗಳನ್ನು ಈ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ಪೂರ್ಣ ವಿಡಿಯೋವನ್ನು ಇಲ್ಲಿ ನೋಡಿ.


ಇದನ್ನೂ ಓದಿ: ಕೇರಳದ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ಹಿಂದುತ್ವವಾದಿಗಳ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಅವರನ್ನೇ ಇಟ್ಟು ಇನ್ನೂ ಮೂರು ಸಿನಿಮಾ ಮಾಡುವುದಾಗಿ ಘೋಷಿಸಿದ ನಿರ್ದೇಶಕರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...