Homeಮುಖಪುಟವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್...

ವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್ ಬಿಚ್ಚಿಟ್ಟ ತುರ್ತು ಪರಿಸ್ಥಿತಿಯ ನೆನಪುಗಳು

- Advertisement -
- Advertisement -

ಜೂನ್ ಎಂದರೆ ತುರ್ತು ಪರಿಸ್ಥಿತಿಯ ಕರಾಳ ನೆನಪು. 1975 ಜೂನ್ 25 ರಂದು ಭಾರತದಲ್ಲಿ ಹೇರಿದ್ದ  ತುರ್ತು ಪರಿಸ್ಥಿತಿಯ ವಿರುದ್ಧ ವಾಶಿಂಗ್ಟನ್ ನಲ್ಲಿ ಅಂದು ನೆಲೆಸಿದ್ದ ಸಾಮಾಜಿಕ ಹೋರಾಟಗಾರ, ಸೆಂಟರ್‌ ಫಾರ್ ಡೆಮಾಕ್ರಸಿ ಅಧ್ಯಕ್ಷ ಎಸ್ ಆರ್ ಹಿರೇಮಠ್ ಅವರು ಪ್ರತಿಭಟಿಸಿದ್ದರು. ಈ ಪ್ರತಿಭಟನೆ ನಡೆಸಿದ್ದಕ್ಕೆ ಅಂದಿನ ಭಾರತ ಸರ್ಕಾರ ಹಿರೇಮಠ್ ಅವರ ಪಾಸ್ ಪೋರ್ಟ್ ಅನ್ನು ರದ್ದು ಮಾಡಿತ್ತು.

1975 ರ ಅಧಿಕೃತ ತುರ್ತು ಪರಿಸ್ಥಿತಿಯಲ್ಲಿ ಇದ್ದ ದಿನಗಳಿಗೆ ಹೋಲಿಸಿದರೆ ಇವತ್ತಿನ ದಿನಗಳು ಅದರ 20 ಪಟ್ಟು ಭೀಕರವಾಗಿವೆ ಎನ್ನುವ ಹಿರೇಮಠರ ಮಾತುಗಳು ಎಚ್ಚರಿಕೆ ಘಂಟೆಯಾಗಿವೆ. ಬುದ್ಧ ಬಸವ ಅಂಬೇಡ್ಕರ್ ಅವರ ಕಲ್ಪನೆಯ ಸಮಾನತೆಯ ಸಮಾಜವನ್ನು ನಾವು ಕಟ್ಟಲು ಮತ್ತೆ ಹೋರಾಟಕ್ಕೆ ಸಜ್ಜಾಗಬೇಕು ಅನ್ನುವ ಹಿರೇಮಠ್ ಅವರನ್ನು ಹಿರಿಯ ಲೇಖಕ- ಪ್ರಕಾಶಕ ಬಸವರಾಜ್ ಸೂಳಿಬಾವಿ ಸಂದರ್ಶನ ನಡೆಸಿದ್ದಾರೆ.

ಜಯಪ್ರಕಾಶ್ ನಾರಾಯಣ್ ಅವರು ಕನಸು ಕಂಡಿದ್ದ ಸಂಪೂರ್ಣ ಕ್ರಾಂತಿಗೆ ಮತ್ತೆ ಏನು ಮಾಡಬೇಕು? ಈ ದೇಶವನ್ನು ಹಿಂದಕ್ಕೆ ಒಯ್ಯುತ್ತಿರುವ ಸಂಗತಿಗಳು ಯಾವುವು? ಆರ್ಥಿಕ ಅಸಮಾನತೆಯ ಜನಕರು ಯಾರು? ಇದನ್ನು ಮುಂದುವರೆಸುತ್ತಿರುವವರು ಯಾರು? ಸಿಎಎ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ಇವುಗಳ ಅಪಾಯಗಳು ಏನು? ಶೂಮಾಕರ್ ಮತ್ತು ಗಾಂಧಿ ಆರ್ಥಿಕ ವ್ಯವಸ್ಥೆ – ಅಂಬೇಡ್ಕರ್ – ಜ್ಯೋತಿಭಾ ಫುಲೆ ಇವರ ಸಮಾನತೆಯ ಆಂದೋಲನಗಳನ್ನು ಹೇಗೆ ಮರುಕಟ್ಟಬೇಕು? ಇವೆಲ್ಲವನ್ನೂ ಹಿರೇಮಠ್ ಅವರು ತಮ್ಮ ಅಪಾರ ಹೋರಾಟದ ಅನುಭವ ಮತ್ತು ಚಿಂತನೆಯ ನೆಲೆಯಲ್ಲಿ ಚರ್ಚಿಸಿದ್ದಾರೆ.

ರಾಜಕೀಯ ಪಕ್ಷಗಳು ಜನರ ಭರವಸೆಯನ್ನು ಕಳೆದುಕೊಂಡಿರುವುದದರ ಬಗ್ಗೆ ಕಳವಳ ವ್ಯಕ್ತಪಡಿಸುವ ಹಿರೇಮಠ್ ಅವರು, ಎಲ್ಲ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ನಾಗರಿಕ ಸಮುದಾಯ ಹೋರಾಟ ಮಾಡುವುದು ಮುಖ್ಯ ಎಂದು ವಿವರಿಸುತ್ತಾರೆ. ಇದಕ್ಕೆ ಸಂವಿಧಾನದ ಪೀಠಿಕೆಯನ್ನು ಉದಾಹರಣೆ ಕೊಡುವ ಹಿರೇಮಠ್ ಅವರು ಮಧ್ಯಮ ವರ್ಗ ತಮ್ಮ ಸೌಲಭ್ಯ ಸೌಕರ್ಯಗಳನ್ನು ಕಡೆಗೆ ಮಾತ್ರ ಗಮನಿಸುವುದನ್ನು ಬಿಟ್ಟು ನಾಗರಿಕ ಸಮಾಜವಾಗಿ ಒಟ್ಟಾಗಿ ಹೋರಾಡಬೇಕು ಅನ್ನುತ್ತಾರೆ.

ಥಾಮಸ್ ಪಿಕೆಟ್ಟಿ ಉದಾಹರಣೆ ಕೊಟ್ಟು ಹೆಚ್ಚು ಜನಕ್ಕೆ ಸಂಪನ್ಮೂಲಗಳ ಹಂಚಿಕೆಯಾಗುವುದರ ಬಗ್ಗೆ ಮಾತಾಡುವ ಹಿರೇಮಠ್ ಇನ್ನೂ ಹತ್ತು ಹಲವು ಸಂಗತಿಗಳನ್ನು ಈ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ಪೂರ್ಣ ವಿಡಿಯೋವನ್ನು ಇಲ್ಲಿ ನೋಡಿ.


ಇದನ್ನೂ ಓದಿ: ಕೇರಳದ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ಹಿಂದುತ್ವವಾದಿಗಳ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಅವರನ್ನೇ ಇಟ್ಟು ಇನ್ನೂ ಮೂರು ಸಿನಿಮಾ ಮಾಡುವುದಾಗಿ ಘೋಷಿಸಿದ ನಿರ್ದೇಶಕರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...