Homeಮುಖಪುಟವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್...

ವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್ ಬಿಚ್ಚಿಟ್ಟ ತುರ್ತು ಪರಿಸ್ಥಿತಿಯ ನೆನಪುಗಳು

- Advertisement -
- Advertisement -

ಜೂನ್ ಎಂದರೆ ತುರ್ತು ಪರಿಸ್ಥಿತಿಯ ಕರಾಳ ನೆನಪು. 1975 ಜೂನ್ 25 ರಂದು ಭಾರತದಲ್ಲಿ ಹೇರಿದ್ದ  ತುರ್ತು ಪರಿಸ್ಥಿತಿಯ ವಿರುದ್ಧ ವಾಶಿಂಗ್ಟನ್ ನಲ್ಲಿ ಅಂದು ನೆಲೆಸಿದ್ದ ಸಾಮಾಜಿಕ ಹೋರಾಟಗಾರ, ಸೆಂಟರ್‌ ಫಾರ್ ಡೆಮಾಕ್ರಸಿ ಅಧ್ಯಕ್ಷ ಎಸ್ ಆರ್ ಹಿರೇಮಠ್ ಅವರು ಪ್ರತಿಭಟಿಸಿದ್ದರು. ಈ ಪ್ರತಿಭಟನೆ ನಡೆಸಿದ್ದಕ್ಕೆ ಅಂದಿನ ಭಾರತ ಸರ್ಕಾರ ಹಿರೇಮಠ್ ಅವರ ಪಾಸ್ ಪೋರ್ಟ್ ಅನ್ನು ರದ್ದು ಮಾಡಿತ್ತು.

1975 ರ ಅಧಿಕೃತ ತುರ್ತು ಪರಿಸ್ಥಿತಿಯಲ್ಲಿ ಇದ್ದ ದಿನಗಳಿಗೆ ಹೋಲಿಸಿದರೆ ಇವತ್ತಿನ ದಿನಗಳು ಅದರ 20 ಪಟ್ಟು ಭೀಕರವಾಗಿವೆ ಎನ್ನುವ ಹಿರೇಮಠರ ಮಾತುಗಳು ಎಚ್ಚರಿಕೆ ಘಂಟೆಯಾಗಿವೆ. ಬುದ್ಧ ಬಸವ ಅಂಬೇಡ್ಕರ್ ಅವರ ಕಲ್ಪನೆಯ ಸಮಾನತೆಯ ಸಮಾಜವನ್ನು ನಾವು ಕಟ್ಟಲು ಮತ್ತೆ ಹೋರಾಟಕ್ಕೆ ಸಜ್ಜಾಗಬೇಕು ಅನ್ನುವ ಹಿರೇಮಠ್ ಅವರನ್ನು ಹಿರಿಯ ಲೇಖಕ- ಪ್ರಕಾಶಕ ಬಸವರಾಜ್ ಸೂಳಿಬಾವಿ ಸಂದರ್ಶನ ನಡೆಸಿದ್ದಾರೆ.

ಜಯಪ್ರಕಾಶ್ ನಾರಾಯಣ್ ಅವರು ಕನಸು ಕಂಡಿದ್ದ ಸಂಪೂರ್ಣ ಕ್ರಾಂತಿಗೆ ಮತ್ತೆ ಏನು ಮಾಡಬೇಕು? ಈ ದೇಶವನ್ನು ಹಿಂದಕ್ಕೆ ಒಯ್ಯುತ್ತಿರುವ ಸಂಗತಿಗಳು ಯಾವುವು? ಆರ್ಥಿಕ ಅಸಮಾನತೆಯ ಜನಕರು ಯಾರು? ಇದನ್ನು ಮುಂದುವರೆಸುತ್ತಿರುವವರು ಯಾರು? ಸಿಎಎ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ಇವುಗಳ ಅಪಾಯಗಳು ಏನು? ಶೂಮಾಕರ್ ಮತ್ತು ಗಾಂಧಿ ಆರ್ಥಿಕ ವ್ಯವಸ್ಥೆ – ಅಂಬೇಡ್ಕರ್ – ಜ್ಯೋತಿಭಾ ಫುಲೆ ಇವರ ಸಮಾನತೆಯ ಆಂದೋಲನಗಳನ್ನು ಹೇಗೆ ಮರುಕಟ್ಟಬೇಕು? ಇವೆಲ್ಲವನ್ನೂ ಹಿರೇಮಠ್ ಅವರು ತಮ್ಮ ಅಪಾರ ಹೋರಾಟದ ಅನುಭವ ಮತ್ತು ಚಿಂತನೆಯ ನೆಲೆಯಲ್ಲಿ ಚರ್ಚಿಸಿದ್ದಾರೆ.

ರಾಜಕೀಯ ಪಕ್ಷಗಳು ಜನರ ಭರವಸೆಯನ್ನು ಕಳೆದುಕೊಂಡಿರುವುದದರ ಬಗ್ಗೆ ಕಳವಳ ವ್ಯಕ್ತಪಡಿಸುವ ಹಿರೇಮಠ್ ಅವರು, ಎಲ್ಲ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ನಾಗರಿಕ ಸಮುದಾಯ ಹೋರಾಟ ಮಾಡುವುದು ಮುಖ್ಯ ಎಂದು ವಿವರಿಸುತ್ತಾರೆ. ಇದಕ್ಕೆ ಸಂವಿಧಾನದ ಪೀಠಿಕೆಯನ್ನು ಉದಾಹರಣೆ ಕೊಡುವ ಹಿರೇಮಠ್ ಅವರು ಮಧ್ಯಮ ವರ್ಗ ತಮ್ಮ ಸೌಲಭ್ಯ ಸೌಕರ್ಯಗಳನ್ನು ಕಡೆಗೆ ಮಾತ್ರ ಗಮನಿಸುವುದನ್ನು ಬಿಟ್ಟು ನಾಗರಿಕ ಸಮಾಜವಾಗಿ ಒಟ್ಟಾಗಿ ಹೋರಾಡಬೇಕು ಅನ್ನುತ್ತಾರೆ.

ಥಾಮಸ್ ಪಿಕೆಟ್ಟಿ ಉದಾಹರಣೆ ಕೊಟ್ಟು ಹೆಚ್ಚು ಜನಕ್ಕೆ ಸಂಪನ್ಮೂಲಗಳ ಹಂಚಿಕೆಯಾಗುವುದರ ಬಗ್ಗೆ ಮಾತಾಡುವ ಹಿರೇಮಠ್ ಇನ್ನೂ ಹತ್ತು ಹಲವು ಸಂಗತಿಗಳನ್ನು ಈ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ಪೂರ್ಣ ವಿಡಿಯೋವನ್ನು ಇಲ್ಲಿ ನೋಡಿ.


ಇದನ್ನೂ ಓದಿ: ಕೇರಳದ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ಹಿಂದುತ್ವವಾದಿಗಳ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಅವರನ್ನೇ ಇಟ್ಟು ಇನ್ನೂ ಮೂರು ಸಿನಿಮಾ ಮಾಡುವುದಾಗಿ ಘೋಷಿಸಿದ ನಿರ್ದೇಶಕರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...