Homeಮುಖಪುಟವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್...

ವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್ ಬಿಚ್ಚಿಟ್ಟ ತುರ್ತು ಪರಿಸ್ಥಿತಿಯ ನೆನಪುಗಳು

- Advertisement -
- Advertisement -

ಜೂನ್ ಎಂದರೆ ತುರ್ತು ಪರಿಸ್ಥಿತಿಯ ಕರಾಳ ನೆನಪು. 1975 ಜೂನ್ 25 ರಂದು ಭಾರತದಲ್ಲಿ ಹೇರಿದ್ದ  ತುರ್ತು ಪರಿಸ್ಥಿತಿಯ ವಿರುದ್ಧ ವಾಶಿಂಗ್ಟನ್ ನಲ್ಲಿ ಅಂದು ನೆಲೆಸಿದ್ದ ಸಾಮಾಜಿಕ ಹೋರಾಟಗಾರ, ಸೆಂಟರ್‌ ಫಾರ್ ಡೆಮಾಕ್ರಸಿ ಅಧ್ಯಕ್ಷ ಎಸ್ ಆರ್ ಹಿರೇಮಠ್ ಅವರು ಪ್ರತಿಭಟಿಸಿದ್ದರು. ಈ ಪ್ರತಿಭಟನೆ ನಡೆಸಿದ್ದಕ್ಕೆ ಅಂದಿನ ಭಾರತ ಸರ್ಕಾರ ಹಿರೇಮಠ್ ಅವರ ಪಾಸ್ ಪೋರ್ಟ್ ಅನ್ನು ರದ್ದು ಮಾಡಿತ್ತು.

1975 ರ ಅಧಿಕೃತ ತುರ್ತು ಪರಿಸ್ಥಿತಿಯಲ್ಲಿ ಇದ್ದ ದಿನಗಳಿಗೆ ಹೋಲಿಸಿದರೆ ಇವತ್ತಿನ ದಿನಗಳು ಅದರ 20 ಪಟ್ಟು ಭೀಕರವಾಗಿವೆ ಎನ್ನುವ ಹಿರೇಮಠರ ಮಾತುಗಳು ಎಚ್ಚರಿಕೆ ಘಂಟೆಯಾಗಿವೆ. ಬುದ್ಧ ಬಸವ ಅಂಬೇಡ್ಕರ್ ಅವರ ಕಲ್ಪನೆಯ ಸಮಾನತೆಯ ಸಮಾಜವನ್ನು ನಾವು ಕಟ್ಟಲು ಮತ್ತೆ ಹೋರಾಟಕ್ಕೆ ಸಜ್ಜಾಗಬೇಕು ಅನ್ನುವ ಹಿರೇಮಠ್ ಅವರನ್ನು ಹಿರಿಯ ಲೇಖಕ- ಪ್ರಕಾಶಕ ಬಸವರಾಜ್ ಸೂಳಿಬಾವಿ ಸಂದರ್ಶನ ನಡೆಸಿದ್ದಾರೆ.

ಜಯಪ್ರಕಾಶ್ ನಾರಾಯಣ್ ಅವರು ಕನಸು ಕಂಡಿದ್ದ ಸಂಪೂರ್ಣ ಕ್ರಾಂತಿಗೆ ಮತ್ತೆ ಏನು ಮಾಡಬೇಕು? ಈ ದೇಶವನ್ನು ಹಿಂದಕ್ಕೆ ಒಯ್ಯುತ್ತಿರುವ ಸಂಗತಿಗಳು ಯಾವುವು? ಆರ್ಥಿಕ ಅಸಮಾನತೆಯ ಜನಕರು ಯಾರು? ಇದನ್ನು ಮುಂದುವರೆಸುತ್ತಿರುವವರು ಯಾರು? ಸಿಎಎ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ಇವುಗಳ ಅಪಾಯಗಳು ಏನು? ಶೂಮಾಕರ್ ಮತ್ತು ಗಾಂಧಿ ಆರ್ಥಿಕ ವ್ಯವಸ್ಥೆ – ಅಂಬೇಡ್ಕರ್ – ಜ್ಯೋತಿಭಾ ಫುಲೆ ಇವರ ಸಮಾನತೆಯ ಆಂದೋಲನಗಳನ್ನು ಹೇಗೆ ಮರುಕಟ್ಟಬೇಕು? ಇವೆಲ್ಲವನ್ನೂ ಹಿರೇಮಠ್ ಅವರು ತಮ್ಮ ಅಪಾರ ಹೋರಾಟದ ಅನುಭವ ಮತ್ತು ಚಿಂತನೆಯ ನೆಲೆಯಲ್ಲಿ ಚರ್ಚಿಸಿದ್ದಾರೆ.

ರಾಜಕೀಯ ಪಕ್ಷಗಳು ಜನರ ಭರವಸೆಯನ್ನು ಕಳೆದುಕೊಂಡಿರುವುದದರ ಬಗ್ಗೆ ಕಳವಳ ವ್ಯಕ್ತಪಡಿಸುವ ಹಿರೇಮಠ್ ಅವರು, ಎಲ್ಲ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ನಾಗರಿಕ ಸಮುದಾಯ ಹೋರಾಟ ಮಾಡುವುದು ಮುಖ್ಯ ಎಂದು ವಿವರಿಸುತ್ತಾರೆ. ಇದಕ್ಕೆ ಸಂವಿಧಾನದ ಪೀಠಿಕೆಯನ್ನು ಉದಾಹರಣೆ ಕೊಡುವ ಹಿರೇಮಠ್ ಅವರು ಮಧ್ಯಮ ವರ್ಗ ತಮ್ಮ ಸೌಲಭ್ಯ ಸೌಕರ್ಯಗಳನ್ನು ಕಡೆಗೆ ಮಾತ್ರ ಗಮನಿಸುವುದನ್ನು ಬಿಟ್ಟು ನಾಗರಿಕ ಸಮಾಜವಾಗಿ ಒಟ್ಟಾಗಿ ಹೋರಾಡಬೇಕು ಅನ್ನುತ್ತಾರೆ.

ಥಾಮಸ್ ಪಿಕೆಟ್ಟಿ ಉದಾಹರಣೆ ಕೊಟ್ಟು ಹೆಚ್ಚು ಜನಕ್ಕೆ ಸಂಪನ್ಮೂಲಗಳ ಹಂಚಿಕೆಯಾಗುವುದರ ಬಗ್ಗೆ ಮಾತಾಡುವ ಹಿರೇಮಠ್ ಇನ್ನೂ ಹತ್ತು ಹಲವು ಸಂಗತಿಗಳನ್ನು ಈ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ಪೂರ್ಣ ವಿಡಿಯೋವನ್ನು ಇಲ್ಲಿ ನೋಡಿ.


ಇದನ್ನೂ ಓದಿ: ಕೇರಳದ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ಹಿಂದುತ್ವವಾದಿಗಳ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಅವರನ್ನೇ ಇಟ್ಟು ಇನ್ನೂ ಮೂರು ಸಿನಿಮಾ ಮಾಡುವುದಾಗಿ ಘೋಷಿಸಿದ ನಿರ್ದೇಶಕರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...