Homeಕರೋನಾ ತಲ್ಲಣಉತ್ತರ ಪ್ರದೇಶದ ಕೊರೊನಾ ರೋಗಿಯ ವೀಡಿಯೋ: ಆತನ ಸಾವಿನ ನಂತರ ವೈರಲ್!

ಉತ್ತರ ಪ್ರದೇಶದ ಕೊರೊನಾ ರೋಗಿಯ ವೀಡಿಯೋ: ಆತನ ಸಾವಿನ ನಂತರ ವೈರಲ್!

52 ಸೆಕೆಂಡುಗಳ ವಿಡಿಯೋವನ್ನು ಸೋಮವಾರ ಝಾನ್ಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕೋವಿಡ್ ವಾರ್ಡ್‌ಗೆ ಸಂಬಂಧಿಸಿದ್ದಾಗಿದೆ. ಈ ವಿಡಿಯೋ ಅವರು ಉಸಿರಾಡುವಾಗ ಹೆಣಗಾಡುತ್ತಿರುವದನ್ನು ತೋರಿಸುತ್ತದೆ.  ಅವರ ಉಡುಪನ್ನು ರಕ್ತದಲ್ಲಿ ನೆನೆದಿರುವಂತೆ ಕಂಡುಬರುತ್ತದೆ.

- Advertisement -
- Advertisement -

ಉತ್ತರ ಪ್ರದೇಶದ ಝಾನ್ಸಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿಯೊಬ್ಬರು ಚಿತ್ರೀಕರಿಸಿದ ವಿಡಿಯೋ , ಸೋಮವಾರ ಅವರ ಮರಣದ ನಂತರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲ್ಪಟ್ಟಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳಿಗಿರುವ ಕೆಟ್ಟ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಟೀಕೆಗಳು ಕೇಳಿಬಂದಿವೆ.

52 ಸೆಕೆಂಡುಗಳ ವಿಡಿಯೋ ಝಾನ್ಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕೋವಿಡ್ ವಾರ್ಡ್‌ಗೆ ಸಂಬಂಧಿಸಿದ್ದಾಗಿದೆ. ಈ ವಿಡಿಯೋ ಅವರು ಉಸಿರಾಡುವಾಗ ಹೆಣಗಾಡುತ್ತಿರುವದನ್ನು ತೋರಿಸುತ್ತದೆ. ಅವರ ಬಟ್ಟೆ ರಕ್ತದಲ್ಲಿ ನೆನೆದಿರುವಂತೆ ಕಂಡುಬರುತ್ತದೆ.

“ಇಲ್ಲಿ ನೀರಿಗಾಗಿ ಯಾವುದೇ ವ್ಯವಸ್ಥೆ ಇಲ್ಲ. ನನಗೆ ತುಂಬಾ ತೊಂದರೆಯಾಗಿದೆ. ಇಲ್ಲಿ ಯಾರೂ ಕಾಳಜಿ ತೋರುವುದಿಲ್ಲ, ಸಂಪೂರ್ಣ ನಿರ್ಲಕ್ಷ್ಯವಿದೆ. ಹಾಗಾಗಿ ನನ್ನನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸಿ” ಎಂದು ವ್ಯಕ್ತಿ ಹೇಳುತ್ತಿರುವುದು ದಾಖಲಾಗಿದೆ. ಕೊರೊನಾ ವಾರ್ಡ್ ತೋರಿಸಲು ಅವನು ಕ್ಯಾಮೆರಾವನ್ನು ತಿರುಗಿಸಿದಾಗ, ಆಸ್ಪತ್ರೆಯಲ್ಲಿ ಅವನ ಸುತ್ತ ಹಾಸಿಗೆಗಳ ಮೇಲೆ ರೋಗಿಗಳು ಮಲಗಿರುವುದನ್ನು ಕಾಣಬಹುದು.

ವಿಡಿಯೋ ಚಿತ್ರೀಕರಣ ಮತ್ತು ಅವರ ಸಾವಿನ ನಡುವಿನ ಸಮಯದ ಅಂತರ ಇನ್ನೂ ಸ್ಪಷ್ಟವಾಗಿಲ್ಲ. “ಅವರ ಪತ್ನಿ ಮತ್ತು ಮಗಳು ಸಹ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರನ್ನು ಝಾನ್ಸಿಯಲ್ಲಿರುವ ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಝಾನ್ಸಿಯ ಮುಖ್ಯ ವೈದ್ಯಾಧಿಕಾರಿ ಜಿಕೆ ನಿಗಮ್ ಸೋಮವಾರ ಸಂಜೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಡಿಯೋದಲ್ಲಿ ಮಾಡಿದ ಆರೋಪಗಳಿಗೆ  ಮುಖ್ಯ ವೈದ್ಯಕೀಯ ಅಧಿಕಾರಿ ಪ್ರತಿಕ್ರಿಯಿಸಲಿಲ್ಲ. ಯುಪಿಯಲ್ಲಿ ಸರ್ಕಾರ ನಡೆಸುವ ಕೊರೊನಾ ಆರೈಕೆ ಕೇಂದ್ರಗಳಲ್ಲಿ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪದ ಸರಣಿ ವಿಡಿಯೋದಲ್ಲಿ ಇದು ಇತ್ತೀಚಿನದಾಗಿದೆ.

ಮತ್ತೊಂದು ಪ್ರಕರಣದಲ್ಲಿ, 57 ವರ್ಷ ವಯಸ್ಸಿನ ಕೊರೊನಾ ವೈರಸ್ ರೋಗಿಯೊಬ್ಬರು ಪ್ರಯಾಗರಾಜ್ ನಗರದ ಸರ್ಕಾರಿ ಆಸ್ಪತ್ರೆಯ ಹೊರಗಡೆ ಕ್ಯಾಮರಾದಲ್ಲಿ ಸಿಕ್ಕಿಬಿದ್ದಿದ್ದು, ಈ ಆಸ್ಪತ್ರೆಗೆ ದಾಖಲಾದ 24 ಗಂಟೆಗಳ ನಂತರ ಭಾನುವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ. ಆಸ್ಪತ್ರೆಯಿಂದ ಕೇವಲ 500 ಮೀಟರ್ ದೂರದಲ್ಲಿರುವ ಪೊದೆಗಳಲ್ಲಿ ಅವರ ಶವ ಪತ್ತೆಯಾಗಿದೆ. ಅವರ ಕುಟುಂಬವು ಆಸ್ಪತ್ರೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಿದೆ.

ಉಸಿರಾಟದ ತೊಂದರೆಯಿರುವ ಅವರನ್ನು ಶುಕ್ರವಾರ ಸಂಜೆ ಪ್ರಯಾಗರಾಜ್‌ನ ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯಿಂದ ತಪ್ಪಿಸಿಕೊಳ್ಳುವ ಕೆಲವು ಗಂಟೆಗಳ ಮೊದಲು, ಶನಿವಾರ ಬೆಳಿಗ್ಗೆ ರೋಗಿಯು ತನಗೆ ತೊಂದರೆಯಾಗುತ್ತಿದೆ ಎಂದು ವೈದ್ಯರಿಗೆ ತಿಳಿಸಿದ್ದಾನೆ ಎಂದು ಅವರ ಕುಟುಂಬವು ಆಡಿಯೊ ಕ್ಲಿಪ್ ಅನ್ನು ಬಿಡುಗಡೆ ಮಾಡಿತು. ಆಸ್ಪತ್ರೆಯಲ್ಲಿ ಅವರ ದೂರುಗಳನ್ನು ತೆಗೆದುಕೊಂಡಿಲ್ಲ ಎಂದು ವರದಿಯಾಗಿದೆ.

“ರಾತ್ರಿಯಿಡೀ ನನ್ನ ಬಾಯಿ ಒಣಗಿತ್ತು. ನಾನು ವೆಂಟಿಲೇಟರ್‌ನಿಂದಾಗಿ ಉಸಿರುಗಟ್ಟಿದೆ ಎಂದು ಭಾವಿಸಿದೆ. ಸಹಾಯ ಮಾಡಲು ನಾನು ಇಲ್ಲಿ ಕೆಲವರಿಗೆ ಹೇಳಲು ಪ್ರಯತ್ನಿಸಿದೆ ಆದರೆ ಯಾರೂ ಕೇಳಿಸಿಕೊಳ್ಳಲಿಲ್ಲ” ಎಂದು ವ್ಯಕ್ತಿಯು ತನ್ನ ಸಂಭಾಷಣೆಯ ಉದ್ದೇಶಿತ ಆಡಿಯೊ ರೆಕಾರ್ಡಿಂಗ್‌ನಲ್ಲಿ ಹೇಳುವುದನ್ನು ಕೇಳಬಹುದು. ಕುಟುಂಬವು ಇದನ್ನು ಭಾನುವಾರ ಬಿಡುಗಡೆ ಮಾಡಿದೆ.


ಇದನ್ನೂ ಓದಿ: ರಾಜಸ್ಥಾನ: ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ, ಇಲ್ಲ ಪಕ್ಷದ ಸದಸ್ಯತ್ವ ರದ್ದು – ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...