Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕದಲ್ಲಿ ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿರುವ ವಿಡಿಯೋ ಹಳೆಯದು

FACT CHECK : ಕರ್ನಾಟಕದಲ್ಲಿ ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿರುವ ವಿಡಿಯೋ ಹಳೆಯದು

- Advertisement -
- Advertisement -

ಮತದಾನ ಮಾಡಲು ಮತಗಟ್ಟೆಗೆ ಬಂದ ವ್ಯಕ್ತಿಯೊಬ್ಬರು ಇವಿಎಂ ಕಂಟ್ರೋಲ್ ಯೂನಿಟ್ ಅನ್ನು ಏಕಾಏಕಿ ನೆಲಕ್ಕೆ ಬಡಿದಿರುವ ವಿಡಿಯೋವೊಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ದಿನವಾದ ಏಪ್ರಿಲ್ 26, 2024ರಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ.

ಬಲಪಂಥೀಯ ಎಕ್ಸ್ ಖಾತೆ Megh Updates(@MeghUpdates)ವಿಡಿಯೋ ಹಂಚಿಕೊಂಡಿದ್ದು, “ಚುನಾವಣಾಧಿಕಾರಿಗಳು, ಭದ್ರತಾ ಸಿಬ್ಬಂದಿ ಎಚ್ಚರವಾಗಿರಬೇಕು ಮತ್ತು ಜಾಗರೂಕರಾಗಿರಬೇಕು. ಸೋಲಿನ ಭಯದಿಂದ ಅವರು ಏನು ಬೇಕಾದರೂ ಮಾಡಬಹುದು” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ರಾಷ್ಟ್ರವಾದಿ ಕಿಸಾನ್ (@rashtrawadi_aks)ಎಂಬ ಹಿಂದಿ ಹೆಸರಿನ ಮತ್ತೊಂದು ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಚುನಾವಣಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಸೋಲಿನ ಭಯದಿಂದ ಈ ಇಂಡಿ ಅಲಯನ್ಸ್ ನವರು ಏನು ಬೇಕಾದರೂ ಮಾಡಬಹುದು” ಎಂದು ಬರದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ಎಕ್ಸ್ ಖಾತೆಗಳಲ್ಲಿ ಹಂಚಿಕೊಂಡ ವಿಡಿಯೋ ಕುರಿತು ನಾವು ಪರಿಶೀಲನೆ ನಡೆಸಿದಾಗ ಅದು, ಮೇ 10, 2023ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಮೈಸೂರಿನಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ.

ಮೇ 12, 2023ರಂದು ದಿ ಹಿಂದೂ.ಕಾಂ ಈ ಘಟನೆಯ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿಯಲ್ಲಿ “ಮೇ, 10ರಂದು ಮೈಸೂರಿನಲ್ಲಿ ಮತದಾನ ಮಾಡಲು ಬಂದ ವ್ಯಕ್ತಿಯೊಬ್ಬರು ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿದ್ದಾರೆ. ಪೊಲೀಸರು ಆ ವ್ಯಕ್ತಿಯನ್ನು ಮಾನಸಿಕ ಅನಾರೋಗ್ಯ ಇರುವವರು ಎಂದು ಶಂಕಿಸಿದ್ದಾರೆ. ಮತದಾನ ಮಾಡಲು ಬಂದ ವ್ಯಕ್ತಿಯು ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿದ ವಿಡಿಯೋ ತಡವಾಗಿ ಬಹಿರಂಗಗೊಂಡಿದ್ದು, ವೈರಲ್ ಆಗಿದೆ” ಎಂದು ಹೇಳಲಾಗಿತ್ತು.

ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿದ ವ್ಯಕ್ತಿಯನ್ನು 48 ವರ್ಷದ ಶಿವಮೂರ್ತಿ ಎಂದು ಗುರುತಿಸಲಾಗಿದೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೂಟಗಳ್ಳಿ ಮತಗಟ್ಟೆಯಲ್ಲಿ ಘಟನೆ ನಡೆದಿದೆ ಎಂದು ತಿಳಿಸಲಾಗಿತ್ತು.

ದಿ ಹಿಂದೂ.ಕಾಂ ಉಪ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಮುತ್ತುರಾಜ್ ಅವರನ್ನು ಮಾತನಾಡಿಸಿದ್ದು, “ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿರುವ ವ್ಯಕ್ತಿ ಮಾನಸಿಕ ಅನಾರೋಗ್ಯ ಹೊಂದಿರುವವರಂತೆ ಕಾಣುತ್ತಿದ್ದಾರೆ. ಐಪಿಸಿ ಸೆಕ್ಷನ್ 84ರ ಅಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ದ ಕ್ರಮ ಕೈಗೊಳ್ಳುವ ಮುನ್ನ ಮಾನಸಿಕ ಆರೋಗ್ಯದ ಕುರಿತು ತಪಾಸಣೆ ನಡೆಸುವುದಾಗಿ ತಿಳಿಸಿದ್ದಾರೆ” ಎಂದು ವರದಿಯಲ್ಲಿ ಹೇಳಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಲೋಕಸಭೆ ಚುನಾವಣೆಯ ಮತದಾನದ ದಿನ ಎಕ್ಸ್‌ ಖಾತೆಗಳಲ್ಲಿ ಹಂಚಿಕೊಂಡ ವಿಡಿಯೋ ಹಳೆಯದ್ದಾಗಿದ್ದು, ಅದಕ್ಕೂ ಈ ಚುನಾವಣೆಗೂ ಸಂಬಂಧವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಬಲಪಂಥೀಯ ಎಕ್ಸ್‌ ಖಾತೆಗಳಲ್ಲಿ ಉದ್ದೇಶಪೂರ್ಕವಾಗಿ ಹಳೆಯ ವಿಡಿಯೋ ಹಂಚಿಕೊಂಡು ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡಲಾಗಿದೆ.

ಇದನ್ನೂ ಓದಿ : FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...