Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕದಲ್ಲಿ ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿರುವ ವಿಡಿಯೋ ಹಳೆಯದು

FACT CHECK : ಕರ್ನಾಟಕದಲ್ಲಿ ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿರುವ ವಿಡಿಯೋ ಹಳೆಯದು

- Advertisement -
- Advertisement -

ಮತದಾನ ಮಾಡಲು ಮತಗಟ್ಟೆಗೆ ಬಂದ ವ್ಯಕ್ತಿಯೊಬ್ಬರು ಇವಿಎಂ ಕಂಟ್ರೋಲ್ ಯೂನಿಟ್ ಅನ್ನು ಏಕಾಏಕಿ ನೆಲಕ್ಕೆ ಬಡಿದಿರುವ ವಿಡಿಯೋವೊಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ದಿನವಾದ ಏಪ್ರಿಲ್ 26, 2024ರಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ.

ಬಲಪಂಥೀಯ ಎಕ್ಸ್ ಖಾತೆ Megh Updates(@MeghUpdates)ವಿಡಿಯೋ ಹಂಚಿಕೊಂಡಿದ್ದು, “ಚುನಾವಣಾಧಿಕಾರಿಗಳು, ಭದ್ರತಾ ಸಿಬ್ಬಂದಿ ಎಚ್ಚರವಾಗಿರಬೇಕು ಮತ್ತು ಜಾಗರೂಕರಾಗಿರಬೇಕು. ಸೋಲಿನ ಭಯದಿಂದ ಅವರು ಏನು ಬೇಕಾದರೂ ಮಾಡಬಹುದು” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ರಾಷ್ಟ್ರವಾದಿ ಕಿಸಾನ್ (@rashtrawadi_aks)ಎಂಬ ಹಿಂದಿ ಹೆಸರಿನ ಮತ್ತೊಂದು ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಚುನಾವಣಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಸೋಲಿನ ಭಯದಿಂದ ಈ ಇಂಡಿ ಅಲಯನ್ಸ್ ನವರು ಏನು ಬೇಕಾದರೂ ಮಾಡಬಹುದು” ಎಂದು ಬರದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ಎಕ್ಸ್ ಖಾತೆಗಳಲ್ಲಿ ಹಂಚಿಕೊಂಡ ವಿಡಿಯೋ ಕುರಿತು ನಾವು ಪರಿಶೀಲನೆ ನಡೆಸಿದಾಗ ಅದು, ಮೇ 10, 2023ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಮೈಸೂರಿನಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ.

ಮೇ 12, 2023ರಂದು ದಿ ಹಿಂದೂ.ಕಾಂ ಈ ಘಟನೆಯ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿಯಲ್ಲಿ “ಮೇ, 10ರಂದು ಮೈಸೂರಿನಲ್ಲಿ ಮತದಾನ ಮಾಡಲು ಬಂದ ವ್ಯಕ್ತಿಯೊಬ್ಬರು ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿದ್ದಾರೆ. ಪೊಲೀಸರು ಆ ವ್ಯಕ್ತಿಯನ್ನು ಮಾನಸಿಕ ಅನಾರೋಗ್ಯ ಇರುವವರು ಎಂದು ಶಂಕಿಸಿದ್ದಾರೆ. ಮತದಾನ ಮಾಡಲು ಬಂದ ವ್ಯಕ್ತಿಯು ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿದ ವಿಡಿಯೋ ತಡವಾಗಿ ಬಹಿರಂಗಗೊಂಡಿದ್ದು, ವೈರಲ್ ಆಗಿದೆ” ಎಂದು ಹೇಳಲಾಗಿತ್ತು.

ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿದ ವ್ಯಕ್ತಿಯನ್ನು 48 ವರ್ಷದ ಶಿವಮೂರ್ತಿ ಎಂದು ಗುರುತಿಸಲಾಗಿದೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೂಟಗಳ್ಳಿ ಮತಗಟ್ಟೆಯಲ್ಲಿ ಘಟನೆ ನಡೆದಿದೆ ಎಂದು ತಿಳಿಸಲಾಗಿತ್ತು.

ದಿ ಹಿಂದೂ.ಕಾಂ ಉಪ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಮುತ್ತುರಾಜ್ ಅವರನ್ನು ಮಾತನಾಡಿಸಿದ್ದು, “ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿರುವ ವ್ಯಕ್ತಿ ಮಾನಸಿಕ ಅನಾರೋಗ್ಯ ಹೊಂದಿರುವವರಂತೆ ಕಾಣುತ್ತಿದ್ದಾರೆ. ಐಪಿಸಿ ಸೆಕ್ಷನ್ 84ರ ಅಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ದ ಕ್ರಮ ಕೈಗೊಳ್ಳುವ ಮುನ್ನ ಮಾನಸಿಕ ಆರೋಗ್ಯದ ಕುರಿತು ತಪಾಸಣೆ ನಡೆಸುವುದಾಗಿ ತಿಳಿಸಿದ್ದಾರೆ” ಎಂದು ವರದಿಯಲ್ಲಿ ಹೇಳಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಲೋಕಸಭೆ ಚುನಾವಣೆಯ ಮತದಾನದ ದಿನ ಎಕ್ಸ್‌ ಖಾತೆಗಳಲ್ಲಿ ಹಂಚಿಕೊಂಡ ವಿಡಿಯೋ ಹಳೆಯದ್ದಾಗಿದ್ದು, ಅದಕ್ಕೂ ಈ ಚುನಾವಣೆಗೂ ಸಂಬಂಧವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಬಲಪಂಥೀಯ ಎಕ್ಸ್‌ ಖಾತೆಗಳಲ್ಲಿ ಉದ್ದೇಶಪೂರ್ಕವಾಗಿ ಹಳೆಯ ವಿಡಿಯೋ ಹಂಚಿಕೊಂಡು ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡಲಾಗಿದೆ.

ಇದನ್ನೂ ಓದಿ : FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...