Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕದಲ್ಲಿ ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿರುವ ವಿಡಿಯೋ ಹಳೆಯದು

FACT CHECK : ಕರ್ನಾಟಕದಲ್ಲಿ ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿರುವ ವಿಡಿಯೋ ಹಳೆಯದು

- Advertisement -
- Advertisement -

ಮತದಾನ ಮಾಡಲು ಮತಗಟ್ಟೆಗೆ ಬಂದ ವ್ಯಕ್ತಿಯೊಬ್ಬರು ಇವಿಎಂ ಕಂಟ್ರೋಲ್ ಯೂನಿಟ್ ಅನ್ನು ಏಕಾಏಕಿ ನೆಲಕ್ಕೆ ಬಡಿದಿರುವ ವಿಡಿಯೋವೊಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ದಿನವಾದ ಏಪ್ರಿಲ್ 26, 2024ರಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ.

ಬಲಪಂಥೀಯ ಎಕ್ಸ್ ಖಾತೆ Megh Updates(@MeghUpdates)ವಿಡಿಯೋ ಹಂಚಿಕೊಂಡಿದ್ದು, “ಚುನಾವಣಾಧಿಕಾರಿಗಳು, ಭದ್ರತಾ ಸಿಬ್ಬಂದಿ ಎಚ್ಚರವಾಗಿರಬೇಕು ಮತ್ತು ಜಾಗರೂಕರಾಗಿರಬೇಕು. ಸೋಲಿನ ಭಯದಿಂದ ಅವರು ಏನು ಬೇಕಾದರೂ ಮಾಡಬಹುದು” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ರಾಷ್ಟ್ರವಾದಿ ಕಿಸಾನ್ (@rashtrawadi_aks)ಎಂಬ ಹಿಂದಿ ಹೆಸರಿನ ಮತ್ತೊಂದು ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಚುನಾವಣಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಸೋಲಿನ ಭಯದಿಂದ ಈ ಇಂಡಿ ಅಲಯನ್ಸ್ ನವರು ಏನು ಬೇಕಾದರೂ ಮಾಡಬಹುದು” ಎಂದು ಬರದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ಎಕ್ಸ್ ಖಾತೆಗಳಲ್ಲಿ ಹಂಚಿಕೊಂಡ ವಿಡಿಯೋ ಕುರಿತು ನಾವು ಪರಿಶೀಲನೆ ನಡೆಸಿದಾಗ ಅದು, ಮೇ 10, 2023ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಮೈಸೂರಿನಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ.

ಮೇ 12, 2023ರಂದು ದಿ ಹಿಂದೂ.ಕಾಂ ಈ ಘಟನೆಯ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿಯಲ್ಲಿ “ಮೇ, 10ರಂದು ಮೈಸೂರಿನಲ್ಲಿ ಮತದಾನ ಮಾಡಲು ಬಂದ ವ್ಯಕ್ತಿಯೊಬ್ಬರು ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿದ್ದಾರೆ. ಪೊಲೀಸರು ಆ ವ್ಯಕ್ತಿಯನ್ನು ಮಾನಸಿಕ ಅನಾರೋಗ್ಯ ಇರುವವರು ಎಂದು ಶಂಕಿಸಿದ್ದಾರೆ. ಮತದಾನ ಮಾಡಲು ಬಂದ ವ್ಯಕ್ತಿಯು ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿದ ವಿಡಿಯೋ ತಡವಾಗಿ ಬಹಿರಂಗಗೊಂಡಿದ್ದು, ವೈರಲ್ ಆಗಿದೆ” ಎಂದು ಹೇಳಲಾಗಿತ್ತು.

ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿದ ವ್ಯಕ್ತಿಯನ್ನು 48 ವರ್ಷದ ಶಿವಮೂರ್ತಿ ಎಂದು ಗುರುತಿಸಲಾಗಿದೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೂಟಗಳ್ಳಿ ಮತಗಟ್ಟೆಯಲ್ಲಿ ಘಟನೆ ನಡೆದಿದೆ ಎಂದು ತಿಳಿಸಲಾಗಿತ್ತು.

ದಿ ಹಿಂದೂ.ಕಾಂ ಉಪ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಮುತ್ತುರಾಜ್ ಅವರನ್ನು ಮಾತನಾಡಿಸಿದ್ದು, “ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿರುವ ವ್ಯಕ್ತಿ ಮಾನಸಿಕ ಅನಾರೋಗ್ಯ ಹೊಂದಿರುವವರಂತೆ ಕಾಣುತ್ತಿದ್ದಾರೆ. ಐಪಿಸಿ ಸೆಕ್ಷನ್ 84ರ ಅಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ದ ಕ್ರಮ ಕೈಗೊಳ್ಳುವ ಮುನ್ನ ಮಾನಸಿಕ ಆರೋಗ್ಯದ ಕುರಿತು ತಪಾಸಣೆ ನಡೆಸುವುದಾಗಿ ತಿಳಿಸಿದ್ದಾರೆ” ಎಂದು ವರದಿಯಲ್ಲಿ ಹೇಳಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಲೋಕಸಭೆ ಚುನಾವಣೆಯ ಮತದಾನದ ದಿನ ಎಕ್ಸ್‌ ಖಾತೆಗಳಲ್ಲಿ ಹಂಚಿಕೊಂಡ ವಿಡಿಯೋ ಹಳೆಯದ್ದಾಗಿದ್ದು, ಅದಕ್ಕೂ ಈ ಚುನಾವಣೆಗೂ ಸಂಬಂಧವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಬಲಪಂಥೀಯ ಎಕ್ಸ್‌ ಖಾತೆಗಳಲ್ಲಿ ಉದ್ದೇಶಪೂರ್ಕವಾಗಿ ಹಳೆಯ ವಿಡಿಯೋ ಹಂಚಿಕೊಂಡು ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡಲಾಗಿದೆ.

ಇದನ್ನೂ ಓದಿ : FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...