ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡಿದ ವಿಡಿಯೋವೊಂದು ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ.
ಕಳೆದ ಬುಧವಾರ ನಡೆದ ರಾಮನವಮಿಯ ಮೆರವಣಿಗೆ ಸಂದರ್ಭದಲ್ಲಿ ಹೈದರಾಬಾದ್ನ ಓಲ್ಡ್ ಸಿಟಿಯಲ್ಲಿರುವ ಸಿದ್ದಿಯಂಬರ್ ಬಜಾರ್ ಮಸೀದಿಯತ್ತ ಮಾಧವಿ ಲತಾ ಅವರು ಬಾಣ ಬಿಟ್ಟಂತೆ ಸನ್ನೆ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಲತಾ ಅವರು ಕೇಸರಿ ಶಾಲು ಧರಿಸಿ ವಾಹನವೊಂದರ ಮೇಲೆ ನಿಂತು ಮಸೀದಿಯತ್ತ ಬಾಣ ಬಿಟ್ಟಂತೆ ಸನ್ನೆ ಮಾಡಿರುವುದು ಮತ್ತು ಸುತ್ತಲು ಕೇಸರಿ ಧ್ವಜ ಹಿಡಿದು ನಿಂತಿದ್ದ ನೂರಾರು ಜನರು ಚಪ್ಪಾಳೆ ತಟ್ಟಿ ಹರ್ಷೋದ್ಘಾರ ಮೊಳಗಿಸಿದ್ದು ವೈರಲ್ ವಿಡಿಯೋದಲ್ಲಿದೆ.
Model code of conduct is a jokepic.twitter.com/7UiXjfFWYS
— Rana Ayyub (@RanaAyyub) April 19, 2024
ಈ ಕುರಿತು ಸುದ್ದಿ ಸಂಸ್ಥೆ ಎಎನ್ಐಗೆ ಪ್ರತಿಕ್ರಿಯಿಸಿದ್ದ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ” ಹೈದರಾಬಾದ್ನ ಜನರು ಬಿಜೆಪಿಯ ಉದ್ದೇಶ ಏನೆಂದು ನೋಡಿದ್ದಾರೆ. ಬಿಜೆಪಿ ಮತ್ತು ಆರೆಸ್ಸೆಸ್ನ ಅಸಭ್ಯ ಮತ್ತು ಪ್ರಚೋದನಕಾರಿ ಚಟುವಟಿಕೆಗಳನ್ನು ಸ್ವೀಕರಿಸುವುದಿಲ್ಲ. ಬಿಜೆಪಿಯವರು ಹೇಳುತ್ತಿರುವ ವಿಕಸಿತ ಭಾರತ ಇದೇನಾ? ಚುನಾವಣೆಗಿಂತ ಹೈದರಾಬಾದ್ನಲ್ಲಿ ಶಾಂತಿ ನೆಲೆಸುವುದು ಮುಖ್ಯ. ತೆಲಂಗಾಣದ ಶಾಂತಿ, ಸಾಮರಸ್ಯಕ್ಕೆ ವಿರುದ್ದವಾಗಿರುವ ಬಿಜೆಪಿ ವಿರುದ್ದ ಜನರು ಮನ ಹಾಕಲಿದ್ದಾರೆ ಎಂಬ ವಿಶ್ವಾಸ ನನಗಿದೆ” ಎಂದು ಹೇಳಿದ್ದಾರೆ.
Hyderabad | On a video showing Hyderabad BJP candidate Madhavi Latha allegedly pretending to shoot an arrow at the mosque in Hyderabad during Ram Navami yatra, AIMIM chief Asaduddin Owaisi says, "People of Hyderabad had seen BJP's intentions. They will not acept BJP-RSS' vulgar… pic.twitter.com/UGMS9nqWZ9
— ANI (@ANI) April 18, 2024
ವಿಡಿಯೋ ವೈರಲ್ ಆಗಿ ವಿವಾದಕ್ಕೀಡಾಗುತ್ತಿದ್ದಂತೆ ಮಾಧವಿ ಲತಾ ಅವರು ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ತಪ್ಪು ಭಾವನೆ ಮೂಡಿಸಲು ನನ್ನ ವಿಡಿಯೋವೊಂದನ್ನು ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅಪೂರ್ಣ ವಿಡಿಯೋ ಎಂಬುವುದನ್ನು ನಾನು ಸ್ಪಷ್ಟಪಡಿಸಲು ಇಚ್ಚಿಸುತ್ತೇನೆ. ಈ ವಿಡಿಯೋದಿಂದ ಯಾರ ಭಾವನೆಗಾದರು ಧಕ್ಕೆಯಾಗಿದ್ದರೆ, ನಾನು ಎಲ್ಲರನ್ನು ಗೌರವಿಸುವವಳಾಗಿ ಕ್ಷಮೆ ಯಾಚಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
मेरे संज्ञान में आया है कि मेरा एक वीडियो मीडिया में नकारात्मकता पैदा करने के लिए प्रसारित किया जा रहा है।
मैं स्पष्ट करना चाहती हूँ कि यह एक अधूरा वीडियो है और ऐसे वीडियो के कारण भी अगर किसी की भावनाएं आहत होती हैं तो मैं माफी मांगना चाहूंगी क्योंकि मैं सभी का सम्मान करती हूँ।— Kompella Madhavi Latha (Modi Ka Parivar) (@Kompella_MLatha) April 18, 2024
ಇದನ್ನೂ ಓದಿ : ದ್ವೇಷವನ್ನು ಸೋಲಿಸುವ ಮೂಲಕ ‘ಮೊಹಬ್ಬತ್ ಕಿ ದುಕಾನ್’ ತೆರೆಯಿರಿ: ರಾಹುಲ್ ಗಾಂಧಿ