Homeಕರ್ನಾಟಕಕರ್ತವ್ಯದ ನಡುವೆ ಮದ್ಯ ಸೇವಿಸಿದ್ದ ಪೊಲೀಸರ ವೀಡಿಯೋ ವೈರಲ್: ಅಮಾನತು

ಕರ್ತವ್ಯದ ನಡುವೆ ಮದ್ಯ ಸೇವಿಸಿದ್ದ ಪೊಲೀಸರ ವೀಡಿಯೋ ವೈರಲ್: ಅಮಾನತು

ಸಾರ್ವಜನಿಕವಾಗಿ ಹೆಂಡ ಕುಡಿದು ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರನ್ನು ಪ್ರಶ್ನೆ ಮಾಡಿದ್ದಕ್ಕೆ, ಠಾಣೆಗೆ ಎಳೆದುಕೊಂಡು ಹೋಗಿ ತೀವ್ರ ದೌರ್ಜನ್ಯ ಎಸಗಿದ ಕುಣಿಗಲ್ ಠಾಣೆಯ ಸಿಬ್ಬಂದಿಯನ್ನು ಈ ಕೂಡಲೇ ಅಮಾನತು ಮಾಡಿ ಎಂದು ರವಿಕೃಷ್ಣಾ ರೆಡ್ಡಿ ಆಗ್ರಹಿಸಿದ್ದರು.

- Advertisement -
- Advertisement -

ಪೊಲೀಸರು ಕರ್ತವ್ಯ ಮತ್ತು ಸಮವಸ್ತ್ರದಲ್ಲಿಕೊಂಡೇ ಮದ್ಯ ಸೇವಿಸಿದ್ದಾರೆ ಎಂದು ಆರೋಪಿಸಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಬುಧವಾರ ವೈರಲ್ ಆಗಿತ್ತು. ಈ ವಿಷಯ ರಾಜ್ಯದಾದ್ಯಂತ ಹರಡುತ್ತಿದ್ದಂತೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಚಿಕ್ಕನಾಯಕನಹಳ್ಳಿ ಠಾಣೆಯ ಎಎಸ್‌ಐ ಶ್ರೀನಿವಾಸ್, ತುರುವೇಕೆರೆ ತಾಲ್ಲೂಕು ದಂಡಿನಶಿವರ ಠಾಣೆಯ ಕಾನ್‌ಸ್ಟೆಬಲ್‌ ಪರಮೇಶ್ ಮತ್ತು ಸಂತೋಷ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಕೆಲಸದಿಂದ ಅಮಾನತುಗೊಳಿಸಿದ್ದಾರೆ.

ಇದನ್ನೂ ಓದಿ: ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ: ಕೊರೊನಾ ಮಾರ್ಗಸೂಚಿ ಪಾಲಿಸಿ ಎಂದ ತಮಿಳುನಾಡು ಸರ್ಕಾರ

ಈ ಮೂರೂ ಅಧಿಕಾರಿಗಳು ತಾಲ್ಲೂಕಿನಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದರು. ಚುನಾವಣಾ ಕೆಲಸ ಮುಗಿಸಿ ರಾತ್ರಿ ಮನೆಗೆ ಹೊರಟಿದ್ದರು. ಈ ವೇಳೆ 112 ಹೊಯ್ಸಳ ವಾಹನದಲ್ಲಿಯೇ ಕುಳಿತು ಮದ್ಯ ಸೇವಿಸಿದ್ದಾರೆ. ಆಗ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ಮತ್ತು ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ರಘು, ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಈ ಬಗ್ಗೆ ವಿಚಾರಣೆ ನಡೆಸಲು ರಘು ಅವರನ್ನು ಕುಣಿಗಲ್ ಪೊಲೀಸರು ಠಾಣೆಗೆ ಕರೆ ತಂದಿದ್ದರು. ಸ್ಥಳಕ್ಕೆ ಬಂದ ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣಾರೆಡ್ಡಿ, ಠಾಣೆ ಎದುರು ಪ್ರತಿಭಟಿಸಲು ಮುಂದಾದರು. ಆಗ ಪೊಲೀಸರು ಮತ್ತು ಸಮಿತಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆಯಿತು. ಡಿವೈಎಸ್‌ಪಿ ಜಗದೀಶ್ ಪ್ರತಿಭಟನಕಾರರ ಜತೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ರವಿಕೃಷ್ಣಾ ರೆಡ್ಡಿ, “ಮಾನ್ಯ ಗೃಹಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರೇ, ಕುಣಿಗಲ್ ಪಟ್ಟಣದಲ್ಲಿ ನಿನ್ನೆ ಸಂಜೆ ಖಾಕಿ ಸಮವಸ್ತ್ರದಲ್ಲಿದ್ದಾಗಲೆ ಸಾರ್ವಜನಿಕವಾಗಿ ಹೆಂಡ ಕುಡಿದು ಪಾನಮತ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರನ್ನು ಪ್ರಶ್ನೆ ಮಾಡಿದ್ದಕ್ಕೆ, ಠಾಣೆಗೆ ಎಳೆದುಕೊಂಡು ಹೋಗಿ ತೀವ್ರ ದೌರ್ಜನ್ಯ ಎಸಗಿದ ಕುಣಿಗಲ್ ಠಾಣೆಯ ಸಿಬ್ಬಂದಿಯನ್ನು ಈ ಕೂಡಲೇ ಅಮಾನತು ಮಾಡಿ” ಎಂದು ಆಗ್ರಹಿಸಿದ್ದರು.

“ತಾವು ಈ ಮೇಲಿನ ವಿಚಾರವಾಗಿ ಇಂದು ಬೆಳಗ್ಗೆ 10:30ರ ಒಳಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ಇಲ್ಲವಾದಲ್ಲಿ ನಾವು ಕುಣಿಗಲ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡುವುದು ಅನಿವಾರ್ಯ ಆಗುತ್ತದೆ” ಎಂದು ಎಚ್ಚರಿಸಿದ್ದರು.


ಇದನ್ನೂ ಓದಿ: ಕೊರೊನಾ ಲಸಿಕೆ: ಭಾರತದಲ್ಲಿ ಮುಂದಿನ ವಾರ ಅಸ್ಟ್ರಾಜೆನೆಕಾಗೆ ಅನುಮತಿ ಸಾಧ್ಯತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...