Homeಫ್ಯಾಕ್ಟ್‌ಚೆಕ್FACT CHECK : ಗೋವಾ-ಮಂಗಳೂರು ಹೆದ್ದಾರಿಯಲ್ಲಿ ಅನಿಲ ಟ್ಯಾಂಕರ್ ಸ್ಪೋಟ ಎಂದು ಬ್ರೆಝಿಲ್‌ನ ವಿಡಿಯೋ ಹಂಚಿಕೆ

FACT CHECK : ಗೋವಾ-ಮಂಗಳೂರು ಹೆದ್ದಾರಿಯಲ್ಲಿ ಅನಿಲ ಟ್ಯಾಂಕರ್ ಸ್ಪೋಟ ಎಂದು ಬ್ರೆಝಿಲ್‌ನ ವಿಡಿಯೋ ಹಂಚಿಕೆ

- Advertisement -
- Advertisement -

ಗೋವಾ- ಮಂಗಳೂರು ಹೆದ್ದಾರಿಯಲ್ಲಿ ಅನಿಲ ಟ್ಯಾಂಕರ್ ಸ್ಪೋಟದಿಂದ ದುರಂತ ಸಂಭವಿಸಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಜ್ ಮಾಡಿದಾಗ “ಜುಲೈ 4,2024ರಂದು ‘ಉಪುಕ್‌ನ್ಯೂಸ್‌’ ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ. ವಿಡಿಯೋ ಜೊತೆಗೆ “ಬ್ರೆಝಿಲ್‌ನ ಪ್ಯಾರಾ ಪ್ರದೇಶದಲ್ಲಿ ಟ್ಯಾಂಕರ್ ಸ್ಫೋಟಗೊಂಡ ನೇರಾ ದೃಶ್ಯಾವಳಿ” ಬರೆಯಲಾಗಿದೆ.

ನಾವು ಈ ಬಗ್ಗೆ ಇನ್ನಷ್ಟು ಮಾಹಿತಿ ಹುಡುಕಿದಾಗ ಬ್ರೆಝಿಲ್‌ನಲ್ಲಿ ಗ್ಯಾಸ್ ಟ್ಯಾಂಕರ್ ಸ್ಪೋಟಗೊಂಡ ಬಗ್ಗೆ ಮಾಧ್ಯಮ ವರದಿಗಳು ಲಭ್ಯವಾಗಿದೆ. ಜುಲೈ 4, 2024ರಂದು ‘ಎಲ್ ಡೈರಿಯೋಮ್ಯಾಕ್ಸ್‘ ಎಂಬ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ವರದಿಯ ಪ್ರಕಾರ, “ಬ್ರೆಝಿಲ್‌ನ ಪ್ಯಾರಾ ರಾಜ್ಯದಲ್ಲಿ ಪ್ಯಾರಾಗೊಮಿನಾಸ್ ಮತ್ತು ಉಲಿಯಾನೊಪೊಲಿಸ್ ನಡುವಿನ ಹೆದ್ದಾರಿಯಲ್ಲಿ ಅನಿಲ ಸಾಗಿಸುವ ಟ್ಯಾಂಕರ್ ಸ್ಫೋಟಗೊಂಡಿದ್ದು , ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕ್ಯಾಮರಾಮ್ಯಾನ್, ವರದಿಗಾರ ಮತ್ತು ತಂತ್ರಜ್ಞರು ಒಳಗೊಂಡಿದ್ದು. ಅವರು ಘಟನೆಯನ್ನು ವರದಿ ಮಾಡಲು ಸ್ಥಳಕ್ಕೆ ಬಂದಿದ್ದರು. ಸ್ಫೋಟಕ್ಕೆ ಕೆಲವೇ ಕ್ಷಣಗಳ ಮೊದಲು , ವಾಹನವು ಅಪಘಾತಕ್ಕೀಡಾಗಿತ್ತು ಎಂದು” ಉಲ್ಲೇಖಿಸಲಾಗಿದೆ.

ಜುಲೈ 4,2024ರಂದು ‘ರಿಯಲಿಡೇಡ್ಸ್‘ ಎಂಬ ವೆಬ್‌ಸೈಟ್‌ ಪ್ರಕಟಿಸಿದ ವರದಿ ಪ್ರಕಾರ, “ಹೆದ್ದಾರಿಯಲ್ಲಿ ಟ್ಯಾಂಕರ್ ಸ್ಫೋಟದ ಬಗ್ಗೆ ವರದಿ ತೆರಳಿದ್ದ ಮೂವರು ಮಾಧ್ಯಮ ಪ್ರತಿನಿಧಿಗಳು ಮತ್ತು ಮೂವರು ಮಿಲಿಟರಿ ಅಗ್ನಿಶಾಮಕ ಸಿಬ್ಬಂದಿಗೆ ಸುಟ್ಟಗಾಯಗಳಾಗಿವೆ. ಉತ್ತರ ಬ್ರೆಝಿಲ್‌ನ ಪ್ಯಾರಾದಲ್ಲಿ ಹೆದ್ದಾರಿಯಲ್ಲಿ ಘಟನೆ ನಡೆದಿದೆ” ಎಂದು ತಿಳಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಉತ್ತರ ಬ್ರೆಝಿಲ್‌ನ ಪ್ಯಾರಾದ ಹೆದ್ದಾರಿಯಲ್ಲಿ 4 ಜುಲೈ , 2024ರಂದು ಅನಿಲ ಸಾಗಿಸುವ ಟ್ಯಾಂಕರ್ ಸ್ಫೋಟಗೊಂಡ ಘಟನೆಯನ್ನು ಗೋವಾ-ಮಂಗಳೂರು ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್‌ವೊಂದು ಸ್ಫೋಟಗೊಂಡಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...