Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಪ್ರತಿಭಟನಾ ಮೆರವಣಿಗೆಯ ವಿಡಿಯೊವನ್ನು, ‘RSS ದಾಳಿಗೆ ಹೆದರಿ ವಲಸೆ ಹೋಗುತ್ತಿರುವ ಮುಸ್ಲಿಮರು’ ಎಂದು ವೈರಲ್‌

ಫ್ಯಾಕ್ಟ್‌‌ಚೆಕ್: ಪ್ರತಿಭಟನಾ ಮೆರವಣಿಗೆಯ ವಿಡಿಯೊವನ್ನು, ‘RSS ದಾಳಿಗೆ ಹೆದರಿ ವಲಸೆ ಹೋಗುತ್ತಿರುವ ಮುಸ್ಲಿಮರು’ ಎಂದು ವೈರಲ್‌

- Advertisement -
- Advertisement -

ನಾಸಿಕ್‌ನ ಮುಸ್ಲಿಮರನ್ನು ಆರೆಸ್ಸೆಸ್‌‌ನವರು ಹೊರ ಹಾಕುತ್ತಿದ್ದಾರೆ ಎಂಬ ಸಂದೇಶದೊಂದಿಗೆ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ ಮಾತನಾಡುತ್ತಿರುವ ವ್ಯಕ್ತಿ, ‘‘ಆರೆಸ್ಸೆಸ್‌ನ ಕಾರ್ಯಕರ್ತರು ದಾಳಿ ಮಾಡಿರುವುದರಿಂದ ಊರಿನ ಮುಸ್ಲಿಮರು ವಲಸೆ ಹೋಗುತ್ತಿದ್ದಾರೆ. ಮುಸ್ಲಿಮರು ಮತ್ತು ಮಾಧ್ಯಮಗಳು ನಮಗೆ ಸಹಾಯ ಮಾಡಬೇಕು’’ ಎಂದು ವಿನಂತಿಸುತ್ತಾರೆ.

ಹೆಚ್ಚಾಗಿ ಈ ವಿಡಿಯೊ ವಾಟ್ಸಪ್‌‌‌ನಲ್ಲಿ ಹರಿದಾಡುತ್ತಿದೆ. “ನಾಸಿಕ್‌ನಲ್ಲಿ ಮುಸ್ಲಿಮರನ್ನು ಗ್ರಾಮದಿಂದ ಹೊರಹಾಕುತ್ತಿರುವ ಆರ್‌ಎಸ್‌ಎಸ್ ಭಯೋತ್ಪಾದಕರು. ನಿಮ್ಮ ಮನೆ ಬಾಗಿಲಿಗೂ ಆರ್‌ಎಸ್‌ಎಸ್‌ ಮತ್ತು ಸಂಘಪರಿವಾರದ ಗೂಂಡಾಗಳು ನುಗ್ಗುವ ಮುನ್ನ ಪ್ರತಿರೋಧಕ್ಕೆ ಸಿದ್ಧರಾಗಿ” ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊವನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ವಾಸ್ತವದಲ್ಲಿ, ವಿಡಿಯೊವನ್ನು ಗಮನವಿಟ್ಟು ಕೇಳಿಸಿಕೊಂಡರೆ ಅದರಲ್ಲಿ ಮಾತನಾಡುತ್ತಿರುವ ವ್ಯಕ್ತಿಯು ತನ್ನ ಹೆಸರು ‘ನಾಸಿರ್‌ ಶೇಕ್‌’ ಎಂದು ಹೇಳುತ್ತಿರುವುದು ಕೇಳುತ್ತದೆ. ಆದರೆ ಈ ವಿಡಿಯೊವನ್ನು ವೈರಲ್ ಮಾಡಿರುವವರು ಮತ್ತು ಇದರ ಬಗ್ಗೆ ತಪ್ಪಾದ ಸಂದೇಶ ಬರೆದವರು ಇದನ್ನು ಸರಿಯಾಗಿ ಕೇಳಿಸಿಕೊಳ್ಳದೆ, ಅದನ್ನು ‘ನಾಸಿಕ್‌’ ಎಂದು ಗ್ರಹಿಸಿ, ‘ನಾಸಿಕ್ ಮುಸ್ಲಿಮರು ಸಂಕಷ್ಟದಲ್ಲಿದ್ದಾರೆ’ ಎಂದು ವೈರಲ್ ಮಾಡಿದ್ದಾರೆ.

ವೈರಲ್ ವಿಡಿಯೊ

ವೈರಲ್ ವಿಡಿಯೋದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಮಾತನಾಡುತ್ತ  ಹೀಗೆ ಹೇಳುತ್ತಾರೆ: “ನಾನು ನಾಸಿರ್‌ ಶೇಕ್ , ಇಲ್ಲಿ ನೋಡಿ ಇಡೀ ಫಿರಾನಾ ಗ್ರಾಮವೇ ಭಯದಿಂದ ವಲಸೆ ಹೋಗ್ತಿದೆ. ಗ್ರಾಮದಲ್ಲಿರುವ ಒಂದು ದರ್ಗದ ಬಗ್ಗೆ ಮಾತಾಡ್ತಿದ್ದೀನಿ, ಇಲ್ಲಿ ಸುಮಾರು 300 ರಿಂದ 400 ಜನ RSS ಕಾರ್ಯಕರ್ತರು ಫಿರಾನ ಗ್ರಾಮದ ದರ್ಗಾ ವಿಚಾರವಾಗಿ ಅಲ್ಲಿಯ ಮುಸಲ್ಮಾನರ ಮೇಲೆ ದಾಳಿ ನಡೆಸಲು ಮುಂದಾದಾಗ ಗ್ರಾಮದ ಮುಸ್ಲಿಮರು ಹೆದರಿ ಊರನ್ನು ತೊರೆದು ಹೊರಹೋಗುತ್ತಿದ್ದಾರೆ. ನಾನು ಇಡೀ ಗುಜರಾತಿನ ನಾಗರಿಕರಿಗೆ ಮನವಿ ಮಾಡುತ್ತ ನಿಮ್ಮಲ್ಲಿ ಸಹಾಯ ಬೇಡುತ್ತಿದ್ದೇನೆ. ದಯಮಾಡಿ ನೀವು ನಮಗೆ ಸಹಾಯ ಮಾಡಿ” ಎಂದು ಹೇಳುತ್ತ ಈ ವಿಡಿಯೊವನ್ನು ಎಲ್ಲರೂ ಶೇರ್ ಮಾಡಿ ಎಂದು ಮನವಿ ಮಾಡುತ್ತಾರೆ.

ಫ್ಯಾಕ್ಟ್ ಚೆಕ್:

ಈ ವಿಡಿಯೊದ ಸತ್ಯಾಸತ್ಯತೆಯ ಬಗ್ಗೆ ಪರಿಶೀಲಿಸುವಂತೆ ‘ನಾನುಗೌರಿ.ಕಾಂ’ಗೆ ಕೋರಿಕೆಗಳು ಬಂದಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ವಿಡಿಯೊದ ಸ್ಕ್ರೀನ್‌ಶಾಟ್  ತೆಗೆದು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ವೈರಲ್  ಆದ ವಿಡಿಯೊ ಕೆಲವು ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡುಬಂದಿದೆ. ಕೀವರ್ಡ್‌ಗಳನ್ನು ಬಳಸಿಕೊಂಡು ಮತ್ತಷ್ಟು ಶೋಧ ನಡೆಸಿದಾಗ ಘಟನೆಗೆ ಸಂಬಂಧಿಸಿದಂತೆ ಸುದ್ದಿ ಪ್ರಸಾರವಾಗಿರುವ ವರದಿಗಳು ಲಭ್ಯವಾಗಿವೆ.

ವರದಿಗಳ ಪ್ರಕಾರ ಈ ಘಟನೆಯು ಗುಜರಾತಿನಲ್ಲಿ ನಡೆದಿದೆ. ಅಹಮದಾಬಾದ್‌ನಿಂದ 20 ಕಿಮೀ ದೂರದಲ್ಲಿರುವ ಪಿರಾನ್ಹಾ ಎಂಬ ಗ್ರಾಮದಲ್ಲಿ ಒಂದು ದರ್ಗಾ, ಮಸೀದಿ ಮತ್ತು  ಸ್ಮಶಾನ ಇದ್ದು, ಇದೀಗ ಈ ಸ್ಥಳದಲ್ಲಿ ವಿವಾದ ಏರ್ಪಟ್ಟಿದೆ. ಪೀರ್ ಇಮಾಮ್ ಶಾ ದರ್ಗಾ ಮತ್ತು ಮಸೀದಿ ನಡುವೆ ಗೋಡೆ ನಿರ್ಮಾಣ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಗೋಡೆ ನಿರ್ಮಾಣ ಮಾಡಬಾರದು ಎಂದು ಪಿರಾನ್ಹಾ ಗ್ರಾಮದ ನಿವಾಸಿಗಳು ಪ್ರತಿಭಟನೆ ಮಾಡಿದ್ದಾರೆ. 13 ವರ್ಷದ ಹಳೆಯದಾದ ಬೇಲಿ ತೆರವು ಮಾಡಿ ಅದೇ ಜಾಗದಲ್ಲಿ ಕಾಂಕ್ರೀಟ್ ಗೋಡೆ ನಿರ್ಮಾಣ ಮಾಡಲು ತಯಾರಿ ನಡೆಸಲಾಗಿತ್ತು. ಗೋಡೆ ನಿರ್ಮಾಣಕ್ಕೆ ಮುಸ್ಲಿಂ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದರು.

ಘಟನೆಗೆ ಸಂಬಂಧಿಸಿದ ವರದಿಯನ್ನು Indian express ಮತ್ತು  Times of Indiaನಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಗೋಡೆ ನಿರ್ಮಾಣದ ವಿರೋದಕ್ಕೆ ಕಾರಣ ಏನು?

ಒಂದೇ ಜಾಗಕ್ಕೆ ಹೊಂದಿಕೊಂಡಂತೆ ದರ್ಗಾ, ಮಸೀದಿ ಮತ್ತು ಸ್ಮಶಾನವಿದ್ದು, ದರ್ಗಾದಿಂದ ಮಸೀದಿ ಹಾಗೂ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುತ್ತದೆ. ಗೋಡೆಯ ನಿರ್ಮಾಣದಿಂದ ಆವರಣದಲ್ಲಿರುವ ಮಸೀದಿ ಮತ್ತು ಸ್ಮಶಾನದಿಂದ ದರ್ಗಾಕ್ಕೆ ಇರುವ ಪ್ರವೇಶ ದ್ವಾರವನ್ನು ಮುಚ್ಚಿದಂತಾಗುತ್ತದೆ ಎಂದು ಆರೋಪಿಸಿ ಪಿರಾನಾ ಗ್ರಾಮದ ನಿವಾಸಿಗಳು, ಹೆಚ್ಚಾಗಿ ಸೈಯದ್ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಸ್ಲಾಲಿ ಪೊಲೀಸರು 64 ಮಹಿಳೆಯರು ಸೇರಿದಂತೆ ಒಟ್ಟು 133 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ಗೋಡೆ ನಿರ್ಮಾಣ ವಿರೋಧಿಸಿ ಮುಸ್ಲಿಂ ಸಮುದಾಯದವರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸುತ್ತಿದ್ದ ವೇಳೆ ಸ್ಥಳದಲ್ಲಿದ್ದ ನಾಸಿರ್ ಶೇಕ್ ಎಂಬ ವ್ಯಕ್ತಿಯು ಮೆರವಣಿಗೆಯ ದೃಶ್ಯಗಳನ್ನು ಸೆರೆಹಿಡಿದು ಪ್ರತಿಭಟನಾ ಮರೆವಣಿಗೆಯನ್ನು ಸಾಮೂಹಿಕ ವಲಸೆ ಎಂದು ಹೇಳಿ ವಿಡಿಯೊವನ್ನು ಮಾಡಿದ್ದಾರೆ. ಆ ವಿಡಿಯೊದಲ್ಲಿ, “RSS ಕಾರ್ಯಕರ್ತರಿಂದ ಮುಸ್ಲಿಂ ಸಮುದಾಯದವರು ಗ್ರಾಮ ತೊರೆದು ವಲಸೆ ಹೋಗುತ್ತಿದ್ದಾರೆ” ಎಂದು ತಪ್ಪು ಹೇಳಿಕೆ ನೀಡಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಹಮದಾಬಾದ್‌ನ ಪಿರಾನಾ ಗ್ರಾಮದಲ್ಲಿ ಸಾಮೂಹಿಕ ವಲಸೆಯ ಕುರಿತು ನಕಲಿ ಟ್ವೀಟ್ ಆತಂಕ ಮೂಡಿಸಿತ್ತು. ಅಲ್ಲಿ ಮಾತನಾಡಿರುವ ವ್ಯಕ್ತಿಯು ‘ಹಿಂದೂ ಭಯೋತ್ಪಾದಕರಿಂದಾಗಿ ಮುಸ್ಲಿಮರು ವಲಸೆ ಹೋಗುತ್ತಿದ್ದಾರೆ’ ಎಂದು ಹೇಳಿ ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿದ್ದ ವಿಡಿಯೊ ವೈರಲ್ ಆಗಿತ್ತು.

ಇದರ ನಂತರ, ವೈರಲ್ ವಿಡಿಯೊದಲ್ಲಿ ನಾಸಿರ್ ಶೇಕ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, “ಕೋಮು ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆ” ಎಂದು ಪರಿಗಣಿಸಿ ಆತನನ್ನು ಬಂಧಿಸಿದ್ದರು. ನಂತರ ಆ ವ್ಯಕ್ತಿಯು ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾನೆ.  ಕ್ಷಮೆಯಾಚಿಸುವ ವೀಡಿಯೊವನ್ನು ಕೆಲವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೊದಲ್ಲಿ ತಾನು ಘಟನೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದನ್ನು ನಾಸಿರ್‌ ಶೇಕ್ ಒಪ್ಪಿಕೊಂಡಿದ್ದಾರೆ. ನಾಸಿರ್‌ ಶೇಕ್ ನನ್ನು ಪೊಲೀಸರು ಬಂಧಿಸಿದ ನಂತರ ಕ್ಷಮೆ ಕೇಳುತ್ತಿರುವ ವೀಡಿಯೋವನ್ನು ಕೆಳಗೆ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಇಷ್ಟೇ ಅಲ್ಲದೆ, ಘಟನೆಗೆ ಸಂಬಂಧಿಸಿದಂತೆ ಇಮಾಮ್ ಶಾಯಿ ಸದಾತ್ ಕಮಿಟಿಯು ಪತ್ರಿಕಾ ಹೇಳಿಕೆಯನ್ನು ಕೂಡಾ ಬಿಡುಗಡೆ ಮಾಡಿದೆ. ಅದರಲ್ಲಿ, “ಗೋಡೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಯದ್ ಟ್ರಸ್ಟ್ ಮತ್ತು ಸತ್ಪಂಥಿ ಟ್ರಸ್ಟ್ ನಡುವೆ ವ್ಯಾಜ್ಯ ಇದ್ದು ಇದನ್ನು ಹಿಂದೂ ಮುಸ್ಲಿಂ ಘರ್ಷಣೆ ಎಂದು ಬಿಂಬಿಸುವುದು ಬೇಡ. ಪಿರಾನ ಗ್ರಾಮದಲ್ಲಿ ಎಲ್ಲರೂ ಸಾಮರಸ್ಯದಿಂದ ಇದ್ದೇವೆ. ಸುಳ್ಳು ಸುದ್ದಿಗಳನ್ನು ಹರಡಬೇಡಿ” ಎಂದು ವಿನಂತಿಸಿದೆ.

ಒಟ್ಟಾರೆಯಾಗಿ ವೈರಲ್ ವಿಡಿಯೊದಲ್ಲಿ ಹೇಳಲಾಗಿರುವಂತೆ, RSS ಮತ್ತು ಸಂಘಪರಿವಾದ ಭಯೋತ್ಪಾಧಕ ಗೂಂಡಾಗಳಿಂದ ಪಿರಾನ ಗ್ರಾಮದವರನ್ನು ರಕ್ಷಿಸಿ ಎಂದು ಹೇಳಿರುವ ಈ ಹೇಳಿಕೆಯು ಸತ್ಯಕ್ಕೆ ದೂರವಾಗಿದೆ. ಘಟನೆಯು ದರ್ಗಾ ಮತ್ತು ಮಸೀದಿ ನಡುವೆ ಗೋಡೆ ನಿರ್ಮಾಣವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ.

ಕೋಮು ಸಾಮರಸ್ಯಕ್ಕೆ ದಕ್ಕೆಯುಂಟಾಗಿ ಅಶಾಂತಿಗೆ ಕಾರಣವಾಗಬಹುದು ಎಂಬ ಕಾರಣಕ್ಕೆ ನಾಸಿರ್ ಶೇಕ್‌‌ನನ್ನು ಬಂಧಿಸಲಾಗಿದೆ.  ನಂತರ ಆತ ಕ್ಷಮೆ ಯಾಚಿಸಿದ್ದಾನೆ. ಹಾಗಾಗಿ ವೈರಲ್ ವಿಡಿಯೊದಲ್ಲಿ ಪ್ರತಿಪಾದಿಸಲಾಗಿರುವ ಹೇಳಿಕೆ ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...