Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಪ್ರತಿಭಟನಾ ಮೆರವಣಿಗೆಯ ವಿಡಿಯೊವನ್ನು, ‘RSS ದಾಳಿಗೆ ಹೆದರಿ ವಲಸೆ ಹೋಗುತ್ತಿರುವ ಮುಸ್ಲಿಮರು’ ಎಂದು ವೈರಲ್‌

ಫ್ಯಾಕ್ಟ್‌‌ಚೆಕ್: ಪ್ರತಿಭಟನಾ ಮೆರವಣಿಗೆಯ ವಿಡಿಯೊವನ್ನು, ‘RSS ದಾಳಿಗೆ ಹೆದರಿ ವಲಸೆ ಹೋಗುತ್ತಿರುವ ಮುಸ್ಲಿಮರು’ ಎಂದು ವೈರಲ್‌

- Advertisement -
- Advertisement -

ನಾಸಿಕ್‌ನ ಮುಸ್ಲಿಮರನ್ನು ಆರೆಸ್ಸೆಸ್‌‌ನವರು ಹೊರ ಹಾಕುತ್ತಿದ್ದಾರೆ ಎಂಬ ಸಂದೇಶದೊಂದಿಗೆ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ ಮಾತನಾಡುತ್ತಿರುವ ವ್ಯಕ್ತಿ, ‘‘ಆರೆಸ್ಸೆಸ್‌ನ ಕಾರ್ಯಕರ್ತರು ದಾಳಿ ಮಾಡಿರುವುದರಿಂದ ಊರಿನ ಮುಸ್ಲಿಮರು ವಲಸೆ ಹೋಗುತ್ತಿದ್ದಾರೆ. ಮುಸ್ಲಿಮರು ಮತ್ತು ಮಾಧ್ಯಮಗಳು ನಮಗೆ ಸಹಾಯ ಮಾಡಬೇಕು’’ ಎಂದು ವಿನಂತಿಸುತ್ತಾರೆ.

ಹೆಚ್ಚಾಗಿ ಈ ವಿಡಿಯೊ ವಾಟ್ಸಪ್‌‌‌ನಲ್ಲಿ ಹರಿದಾಡುತ್ತಿದೆ. “ನಾಸಿಕ್‌ನಲ್ಲಿ ಮುಸ್ಲಿಮರನ್ನು ಗ್ರಾಮದಿಂದ ಹೊರಹಾಕುತ್ತಿರುವ ಆರ್‌ಎಸ್‌ಎಸ್ ಭಯೋತ್ಪಾದಕರು. ನಿಮ್ಮ ಮನೆ ಬಾಗಿಲಿಗೂ ಆರ್‌ಎಸ್‌ಎಸ್‌ ಮತ್ತು ಸಂಘಪರಿವಾರದ ಗೂಂಡಾಗಳು ನುಗ್ಗುವ ಮುನ್ನ ಪ್ರತಿರೋಧಕ್ಕೆ ಸಿದ್ಧರಾಗಿ” ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊವನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ವಾಸ್ತವದಲ್ಲಿ, ವಿಡಿಯೊವನ್ನು ಗಮನವಿಟ್ಟು ಕೇಳಿಸಿಕೊಂಡರೆ ಅದರಲ್ಲಿ ಮಾತನಾಡುತ್ತಿರುವ ವ್ಯಕ್ತಿಯು ತನ್ನ ಹೆಸರು ‘ನಾಸಿರ್‌ ಶೇಕ್‌’ ಎಂದು ಹೇಳುತ್ತಿರುವುದು ಕೇಳುತ್ತದೆ. ಆದರೆ ಈ ವಿಡಿಯೊವನ್ನು ವೈರಲ್ ಮಾಡಿರುವವರು ಮತ್ತು ಇದರ ಬಗ್ಗೆ ತಪ್ಪಾದ ಸಂದೇಶ ಬರೆದವರು ಇದನ್ನು ಸರಿಯಾಗಿ ಕೇಳಿಸಿಕೊಳ್ಳದೆ, ಅದನ್ನು ‘ನಾಸಿಕ್‌’ ಎಂದು ಗ್ರಹಿಸಿ, ‘ನಾಸಿಕ್ ಮುಸ್ಲಿಮರು ಸಂಕಷ್ಟದಲ್ಲಿದ್ದಾರೆ’ ಎಂದು ವೈರಲ್ ಮಾಡಿದ್ದಾರೆ.

ವೈರಲ್ ವಿಡಿಯೊ

ವೈರಲ್ ವಿಡಿಯೋದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಮಾತನಾಡುತ್ತ  ಹೀಗೆ ಹೇಳುತ್ತಾರೆ: “ನಾನು ನಾಸಿರ್‌ ಶೇಕ್ , ಇಲ್ಲಿ ನೋಡಿ ಇಡೀ ಫಿರಾನಾ ಗ್ರಾಮವೇ ಭಯದಿಂದ ವಲಸೆ ಹೋಗ್ತಿದೆ. ಗ್ರಾಮದಲ್ಲಿರುವ ಒಂದು ದರ್ಗದ ಬಗ್ಗೆ ಮಾತಾಡ್ತಿದ್ದೀನಿ, ಇಲ್ಲಿ ಸುಮಾರು 300 ರಿಂದ 400 ಜನ RSS ಕಾರ್ಯಕರ್ತರು ಫಿರಾನ ಗ್ರಾಮದ ದರ್ಗಾ ವಿಚಾರವಾಗಿ ಅಲ್ಲಿಯ ಮುಸಲ್ಮಾನರ ಮೇಲೆ ದಾಳಿ ನಡೆಸಲು ಮುಂದಾದಾಗ ಗ್ರಾಮದ ಮುಸ್ಲಿಮರು ಹೆದರಿ ಊರನ್ನು ತೊರೆದು ಹೊರಹೋಗುತ್ತಿದ್ದಾರೆ. ನಾನು ಇಡೀ ಗುಜರಾತಿನ ನಾಗರಿಕರಿಗೆ ಮನವಿ ಮಾಡುತ್ತ ನಿಮ್ಮಲ್ಲಿ ಸಹಾಯ ಬೇಡುತ್ತಿದ್ದೇನೆ. ದಯಮಾಡಿ ನೀವು ನಮಗೆ ಸಹಾಯ ಮಾಡಿ” ಎಂದು ಹೇಳುತ್ತ ಈ ವಿಡಿಯೊವನ್ನು ಎಲ್ಲರೂ ಶೇರ್ ಮಾಡಿ ಎಂದು ಮನವಿ ಮಾಡುತ್ತಾರೆ.

ಫ್ಯಾಕ್ಟ್ ಚೆಕ್:

ಈ ವಿಡಿಯೊದ ಸತ್ಯಾಸತ್ಯತೆಯ ಬಗ್ಗೆ ಪರಿಶೀಲಿಸುವಂತೆ ‘ನಾನುಗೌರಿ.ಕಾಂ’ಗೆ ಕೋರಿಕೆಗಳು ಬಂದಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ವಿಡಿಯೊದ ಸ್ಕ್ರೀನ್‌ಶಾಟ್  ತೆಗೆದು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ವೈರಲ್  ಆದ ವಿಡಿಯೊ ಕೆಲವು ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡುಬಂದಿದೆ. ಕೀವರ್ಡ್‌ಗಳನ್ನು ಬಳಸಿಕೊಂಡು ಮತ್ತಷ್ಟು ಶೋಧ ನಡೆಸಿದಾಗ ಘಟನೆಗೆ ಸಂಬಂಧಿಸಿದಂತೆ ಸುದ್ದಿ ಪ್ರಸಾರವಾಗಿರುವ ವರದಿಗಳು ಲಭ್ಯವಾಗಿವೆ.

ವರದಿಗಳ ಪ್ರಕಾರ ಈ ಘಟನೆಯು ಗುಜರಾತಿನಲ್ಲಿ ನಡೆದಿದೆ. ಅಹಮದಾಬಾದ್‌ನಿಂದ 20 ಕಿಮೀ ದೂರದಲ್ಲಿರುವ ಪಿರಾನ್ಹಾ ಎಂಬ ಗ್ರಾಮದಲ್ಲಿ ಒಂದು ದರ್ಗಾ, ಮಸೀದಿ ಮತ್ತು  ಸ್ಮಶಾನ ಇದ್ದು, ಇದೀಗ ಈ ಸ್ಥಳದಲ್ಲಿ ವಿವಾದ ಏರ್ಪಟ್ಟಿದೆ. ಪೀರ್ ಇಮಾಮ್ ಶಾ ದರ್ಗಾ ಮತ್ತು ಮಸೀದಿ ನಡುವೆ ಗೋಡೆ ನಿರ್ಮಾಣ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಗೋಡೆ ನಿರ್ಮಾಣ ಮಾಡಬಾರದು ಎಂದು ಪಿರಾನ್ಹಾ ಗ್ರಾಮದ ನಿವಾಸಿಗಳು ಪ್ರತಿಭಟನೆ ಮಾಡಿದ್ದಾರೆ. 13 ವರ್ಷದ ಹಳೆಯದಾದ ಬೇಲಿ ತೆರವು ಮಾಡಿ ಅದೇ ಜಾಗದಲ್ಲಿ ಕಾಂಕ್ರೀಟ್ ಗೋಡೆ ನಿರ್ಮಾಣ ಮಾಡಲು ತಯಾರಿ ನಡೆಸಲಾಗಿತ್ತು. ಗೋಡೆ ನಿರ್ಮಾಣಕ್ಕೆ ಮುಸ್ಲಿಂ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದರು.

ಘಟನೆಗೆ ಸಂಬಂಧಿಸಿದ ವರದಿಯನ್ನು Indian express ಮತ್ತು  Times of Indiaನಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಗೋಡೆ ನಿರ್ಮಾಣದ ವಿರೋದಕ್ಕೆ ಕಾರಣ ಏನು?

ಒಂದೇ ಜಾಗಕ್ಕೆ ಹೊಂದಿಕೊಂಡಂತೆ ದರ್ಗಾ, ಮಸೀದಿ ಮತ್ತು ಸ್ಮಶಾನವಿದ್ದು, ದರ್ಗಾದಿಂದ ಮಸೀದಿ ಹಾಗೂ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುತ್ತದೆ. ಗೋಡೆಯ ನಿರ್ಮಾಣದಿಂದ ಆವರಣದಲ್ಲಿರುವ ಮಸೀದಿ ಮತ್ತು ಸ್ಮಶಾನದಿಂದ ದರ್ಗಾಕ್ಕೆ ಇರುವ ಪ್ರವೇಶ ದ್ವಾರವನ್ನು ಮುಚ್ಚಿದಂತಾಗುತ್ತದೆ ಎಂದು ಆರೋಪಿಸಿ ಪಿರಾನಾ ಗ್ರಾಮದ ನಿವಾಸಿಗಳು, ಹೆಚ್ಚಾಗಿ ಸೈಯದ್ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಸ್ಲಾಲಿ ಪೊಲೀಸರು 64 ಮಹಿಳೆಯರು ಸೇರಿದಂತೆ ಒಟ್ಟು 133 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ಗೋಡೆ ನಿರ್ಮಾಣ ವಿರೋಧಿಸಿ ಮುಸ್ಲಿಂ ಸಮುದಾಯದವರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸುತ್ತಿದ್ದ ವೇಳೆ ಸ್ಥಳದಲ್ಲಿದ್ದ ನಾಸಿರ್ ಶೇಕ್ ಎಂಬ ವ್ಯಕ್ತಿಯು ಮೆರವಣಿಗೆಯ ದೃಶ್ಯಗಳನ್ನು ಸೆರೆಹಿಡಿದು ಪ್ರತಿಭಟನಾ ಮರೆವಣಿಗೆಯನ್ನು ಸಾಮೂಹಿಕ ವಲಸೆ ಎಂದು ಹೇಳಿ ವಿಡಿಯೊವನ್ನು ಮಾಡಿದ್ದಾರೆ. ಆ ವಿಡಿಯೊದಲ್ಲಿ, “RSS ಕಾರ್ಯಕರ್ತರಿಂದ ಮುಸ್ಲಿಂ ಸಮುದಾಯದವರು ಗ್ರಾಮ ತೊರೆದು ವಲಸೆ ಹೋಗುತ್ತಿದ್ದಾರೆ” ಎಂದು ತಪ್ಪು ಹೇಳಿಕೆ ನೀಡಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಹಮದಾಬಾದ್‌ನ ಪಿರಾನಾ ಗ್ರಾಮದಲ್ಲಿ ಸಾಮೂಹಿಕ ವಲಸೆಯ ಕುರಿತು ನಕಲಿ ಟ್ವೀಟ್ ಆತಂಕ ಮೂಡಿಸಿತ್ತು. ಅಲ್ಲಿ ಮಾತನಾಡಿರುವ ವ್ಯಕ್ತಿಯು ‘ಹಿಂದೂ ಭಯೋತ್ಪಾದಕರಿಂದಾಗಿ ಮುಸ್ಲಿಮರು ವಲಸೆ ಹೋಗುತ್ತಿದ್ದಾರೆ’ ಎಂದು ಹೇಳಿ ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿದ್ದ ವಿಡಿಯೊ ವೈರಲ್ ಆಗಿತ್ತು.

ಇದರ ನಂತರ, ವೈರಲ್ ವಿಡಿಯೊದಲ್ಲಿ ನಾಸಿರ್ ಶೇಕ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, “ಕೋಮು ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆ” ಎಂದು ಪರಿಗಣಿಸಿ ಆತನನ್ನು ಬಂಧಿಸಿದ್ದರು. ನಂತರ ಆ ವ್ಯಕ್ತಿಯು ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾನೆ.  ಕ್ಷಮೆಯಾಚಿಸುವ ವೀಡಿಯೊವನ್ನು ಕೆಲವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೊದಲ್ಲಿ ತಾನು ಘಟನೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದನ್ನು ನಾಸಿರ್‌ ಶೇಕ್ ಒಪ್ಪಿಕೊಂಡಿದ್ದಾರೆ. ನಾಸಿರ್‌ ಶೇಕ್ ನನ್ನು ಪೊಲೀಸರು ಬಂಧಿಸಿದ ನಂತರ ಕ್ಷಮೆ ಕೇಳುತ್ತಿರುವ ವೀಡಿಯೋವನ್ನು ಕೆಳಗೆ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಇಷ್ಟೇ ಅಲ್ಲದೆ, ಘಟನೆಗೆ ಸಂಬಂಧಿಸಿದಂತೆ ಇಮಾಮ್ ಶಾಯಿ ಸದಾತ್ ಕಮಿಟಿಯು ಪತ್ರಿಕಾ ಹೇಳಿಕೆಯನ್ನು ಕೂಡಾ ಬಿಡುಗಡೆ ಮಾಡಿದೆ. ಅದರಲ್ಲಿ, “ಗೋಡೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಯದ್ ಟ್ರಸ್ಟ್ ಮತ್ತು ಸತ್ಪಂಥಿ ಟ್ರಸ್ಟ್ ನಡುವೆ ವ್ಯಾಜ್ಯ ಇದ್ದು ಇದನ್ನು ಹಿಂದೂ ಮುಸ್ಲಿಂ ಘರ್ಷಣೆ ಎಂದು ಬಿಂಬಿಸುವುದು ಬೇಡ. ಪಿರಾನ ಗ್ರಾಮದಲ್ಲಿ ಎಲ್ಲರೂ ಸಾಮರಸ್ಯದಿಂದ ಇದ್ದೇವೆ. ಸುಳ್ಳು ಸುದ್ದಿಗಳನ್ನು ಹರಡಬೇಡಿ” ಎಂದು ವಿನಂತಿಸಿದೆ.

ಒಟ್ಟಾರೆಯಾಗಿ ವೈರಲ್ ವಿಡಿಯೊದಲ್ಲಿ ಹೇಳಲಾಗಿರುವಂತೆ, RSS ಮತ್ತು ಸಂಘಪರಿವಾದ ಭಯೋತ್ಪಾಧಕ ಗೂಂಡಾಗಳಿಂದ ಪಿರಾನ ಗ್ರಾಮದವರನ್ನು ರಕ್ಷಿಸಿ ಎಂದು ಹೇಳಿರುವ ಈ ಹೇಳಿಕೆಯು ಸತ್ಯಕ್ಕೆ ದೂರವಾಗಿದೆ. ಘಟನೆಯು ದರ್ಗಾ ಮತ್ತು ಮಸೀದಿ ನಡುವೆ ಗೋಡೆ ನಿರ್ಮಾಣವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ.

ಕೋಮು ಸಾಮರಸ್ಯಕ್ಕೆ ದಕ್ಕೆಯುಂಟಾಗಿ ಅಶಾಂತಿಗೆ ಕಾರಣವಾಗಬಹುದು ಎಂಬ ಕಾರಣಕ್ಕೆ ನಾಸಿರ್ ಶೇಕ್‌‌ನನ್ನು ಬಂಧಿಸಲಾಗಿದೆ.  ನಂತರ ಆತ ಕ್ಷಮೆ ಯಾಚಿಸಿದ್ದಾನೆ. ಹಾಗಾಗಿ ವೈರಲ್ ವಿಡಿಯೊದಲ್ಲಿ ಪ್ರತಿಪಾದಿಸಲಾಗಿರುವ ಹೇಳಿಕೆ ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...