Homeಫ್ಯಾಕ್ಟ್‌ಚೆಕ್ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು ನಿಜವೇ..?

ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು ನಿಜವೇ..?

- Advertisement -
- Advertisement -

ದೆಹಲಿಯ ರೈತ ಚಳುವಳಿಯನ್ನು ಮುನ್ನಡೆಸುತ್ತಿರುವವರಲ್ಲಿ ಒಬ್ಬರಾದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್‌ ಮುಸ್ಲಿಮರ ಸಹಾನುಭೂತಿ ಪಡೆಯಲು “ಅಲ್ಲಾಹು ಅಕ್ಬರ್” ಎಂದು ಘೋಷಣೆ ಕೂಗುತ್ತಿದ್ದಾರೆ ಎಂದಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ.

ರಾಕೇಶ್ ಟಿಕಾಯತ್‌ ಕೃಷಿ ಕಾನೂನುಗಳ ವಿರುದ್ಧದ ಸಾರ್ವಜನಿಕ ಸಭೆಯಲ್ಲಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದಾರೆ. ಅದೇ ಸಾರ್ವಜನಿಕ ಸಭೆಯಲ್ಲಿ ಹಿಂದೂ ರೈತರು ಕೋಪದಿಂದ ‘ಹರ ಹರ ಮಹಾದೇವ’ ಎಂದು ಘೋಷಣೆ ಕೂಗಿದ್ದಾರೆ ಎಂದು ವಿಡಿಯೊ ಹಂಚಿಕೊಳ್ಳಲಾಗುತ್ತಿದ್ದು, ಇದು ನಿಜವೇ ಎಂಬುದನ್ನು ಈ ಸುದ್ದಿಯಲ್ಲಿ ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ‘ಪಂಜಾಬ್ ತಕ್’ ಸುದ್ದಿ ಚಾನೆಲ್ ಲೋಗೋ ಇದೆ. ಈ ವಿಡಿಯೊಕ್ಕಾಗಿ ‘ಪಂಜಾಬ್ ತಕ್’ ನ ಅಧಿಕೃತ ಯೂಟ್ಯೂಬ್ ಚಾನೆಲ್ ನಲ್ಲಿ ಹುಡುಕಿದಾಗ, ‘ಪಂಜಾಬ್ ತಕ್’ ನ್ಯೂಸ್ ಚಾನೆಲ್ 05 ಸೆಪ್ಟೆಂಬರ್ 2021 ರಂದು ಇದನ್ನು ಪ್ರಕಟಿಸಿದೆ. ಈ ವಿಡಿಯೋ 05 ಸೆಪ್ಟೆಂಬರ್ 2021 ರಂದು ಮುಜಾಫರ್ ನಗರದಲ್ಲಿ ನಡೆದ ಕಿಸಾನ್ ಮಹಾ ಪಂಚಾಯತ್ ಕಾರ್ಯಕ್ರಮದ ನೇರ ದೃಶ್ಯಗಳನ್ನು ವಿವರಿಸುತ್ತದೆ.

ಇದನ್ನೂ ಓದಿ: ‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

‘ಪಂಜಾಬ್ ತಕ್’ ಸುದ್ದಿ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ 11:06 ನಿಮಿಷದಲ್ಲಿ, ರಾಕೇಶ್ ಟಿಕಾಯತ್ ಮಾತನಾಡಿರುವುದು ಇದು. “ಇಂತಹ (ಬಿಜೆಪಿ) ಸರ್ಕಾರಗಳು ದೇಶದಲ್ಲಿ ಮುಂದುವರಿದರೆ, ದೇಶದಲ್ಲಿ ಗಲಭೆಗಳನ್ನು ಸೃಷ್ಟಿಸುವುದನ್ನು ಮುಂದುವರಿಸುತ್ತಾರೆ. ಹಿಂದೆ, ಟಿಕಾಯತ್ (ರಾಕೇಶ್ ಟಿಕಾಯತ್ ತಂದೆ ಮತ್ತು ಬಿಕೆಯು ಮಾಜಿ ಅಧ್ಯಕ್ಷ ಮಹೇಂದ್ರ ಸಿಂಗ್ ಟಿಕಾಯತ್) ಸಮಯದಲ್ಲಿ ಘೋಷಣೆಗಳನ್ನು ಕೂಗಲಾಗುತ್ತಿತ್ತು. ‘ಅಲ್ಲಾಹು ಅಕ್ಬರ್’ (ತಕ್ಷಣ ಜನರ ಗುಂಪು ‘ಹರ ಹರ ಮಹಾದೇವ’ ಎಂದು ಕೂಗುತ್ತದೆ), ‘ಅಲ್ಲಾಹು ಅಕ್ಬರ್ (ಮತ್ತೆ ಜನರ ಗುಂಪು ‘ಹರ ಹರ ಮಹಾದೇವ’ ಎಂದು ಕೂಗಿತ್ತದೆ). ಈ ‘ಅಲ್ಲಾಹು ಅಕ್ಬರ್-ಹರ ಹರ ಮಹಾದೇವ್’ ಘೋಷಣೆಗಳು ದೇಶದಲ್ಲಿ ಇದುವರೆಗೆ ನಡೆದ ಚಳುವಳಿಗಳಲ್ಲಿ ಘೋಷಿಸಲಾಗಿದೆ. ಭವಿಷ್ಯದಲ್ಲಿ ನಡೆಯುವ ಚಳುವಳಿಗಳಲ್ಲಿಯೂ ಈ ಘೋಷಣೆಗಳನ್ನು ಕೂಗಲಾಗುತ್ತದೆ. ನಮ್ಮ ಬಳಿ ಗಲಭೆಗಳು ಉದ್ಭವಿಸುವುದಿಲ್ಲ. ಅವರು ಜನರನ್ನು ಬೇರ್ಪಡಿಸಲು ಪ್ರಯತ್ನಿಸಿದರೆ, ನಾವು ಒಂದಾಗಲು ಪ್ರಯತ್ನಿಸುತ್ತೇವೆ. ಸುಳ್ಳು ಪ್ರಚಾರದಿಂದ ಜನರು ಮೋಸ ಹೋಗಬಾರದು” ಎಂದು ಹೇಳಿದ್ದಾರೆ.

ಇತರ ಕೆಲವು ಸುದ್ದಿ ವಾಹಿನಿಗಳು ರಾಕೇಶ್ ಟಿಕಾಯತ್ ಕಿಸಾನ್ ಮಹಾ ಪಂಚಾಯತ್ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೀಡಿಯೋವನ್ನು ಪ್ರಕಟಿಸಿವೆ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ಭಾಷಣ ಮಾಡಿದ ರಾಕೇಶ್ ಟಿಕಾಯತ್ ವಿಡಿಯೊವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ.

ರಾಕೇಶ್ ಟಿಕಾಯತ್ ಅವರ ಅಲ್ಲಾ ಹೋ ಅಕ್ಬರ್ ‘ಘೋಷಣೆಯ ಕುರಿತು ಸಂಪೂರ್ಣ ಸ್ಪಷ್ಟತೆಯೊಂದಿಗೆ 07 ಸೆಪ್ಟೆಂಬರ್ 2021 ರಂದು ‘ಬಿಬಿಸಿ ನ್ಯೂಸ್ ಹಿಂದಿ’ಯಲ್ಲಿ’ ವಿಡಿಯೊವನ್ನು ಪ್ರಕಟಿಸಿದ್ದಾರೆ. ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ಹಳುವಂತೆ, ರಾಕೇಶ್ ಟಿಕಾಯತ್ ಮುಸ್ಲಿಮರ ಸಹಾನುಭೂತಿಗಾಗಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಲಿಲ್ಲ ಎಂದು ಹೇಳಬಹುದಾಗಿದೆ.

ಪ್ರತಿಪಾದನೆ: ರೈತ ಚಳುವಳಿಯ ನಾಯಕ ರಾಕೇಶ್ ಟಿಕಾಯತ್, ಮುಸ್ಲಿಮರ ಸಹಾನುಭೂತಿಗಾಗಿ ‘ಅಲ್ಲಾ ಹು ಅಕ್ಬರ್’ ಎಂದು ಘೋಷಣೆ ಕೂಗಿದರೆ, ಹಿಂದೂ ರೈತರು ಕೋಪದಿಂದ ‘ಹರಹರ ಮಹಾದೇವ್’ ಎಂದು ಘೋಷಣೆ ಕೂಗಿದ್ದಾರೆ.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಲಾಗಿರುವ ವಿಡಿಯೊವನ್ನು ಎಡಿಟ್ ಮಾಡಲಾಗಿದೆ. ರಾಕೇಶ್ ಟಿಕಾಯತ್ ಮುಜಾಫರ್ ನಗರದಲ್ಲಿ 05 ಸೆಪ್ಟೆಂಬರ್ 2021 ರಂದು ನಡೆದ ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ‘ಅಲ್ಲಾಹು ಅಕ್ಬರ್’ ಘೋಷಣೆಯನ್ನು ಕೂಗಿದ್ದು ನಿಜ. ಭಾರತದ ಏಕತೆಯನ್ನು ತಿಳಿಸಲು ರಾಕೇಶ್ ಟಿಕಾಯತ್ ‘ಅಲ್ಲಾಹು ಅಕ್ಬರ್’ಎಂದು ಘೋಷಣೆ ಕೂಗಿ, ರೈತರನ್ನು ‘ಹರ ಹರ ಮಹಾದೇವ್’ ಎಂದು ಕೂಗಲು ಪ್ರೇರೆಪಿಸಿದ್ದಾರೆ. ರೈತರು ಕೋಪದಿಂದ ‘ಹರಹರ ಮಹಾದೇವ್’ ಎಂದು ಘೋಷಣೆ ಕೂಗಿಲ್ಲ. ಅವರು ಮನಃಪೂರ್ವಕವಾಗಿ ಒಪ್ಪಿ ಕೂಗಿದ್ದಾರೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಹಕ್ಕು ತಪ್ಪಾಗಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....