Homeಫ್ಯಾಕ್ಟ್‌ಚೆಕ್ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು ನಿಜವೇ..?

ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು ನಿಜವೇ..?

- Advertisement -
- Advertisement -

ದೆಹಲಿಯ ರೈತ ಚಳುವಳಿಯನ್ನು ಮುನ್ನಡೆಸುತ್ತಿರುವವರಲ್ಲಿ ಒಬ್ಬರಾದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್‌ ಮುಸ್ಲಿಮರ ಸಹಾನುಭೂತಿ ಪಡೆಯಲು “ಅಲ್ಲಾಹು ಅಕ್ಬರ್” ಎಂದು ಘೋಷಣೆ ಕೂಗುತ್ತಿದ್ದಾರೆ ಎಂದಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ.

ರಾಕೇಶ್ ಟಿಕಾಯತ್‌ ಕೃಷಿ ಕಾನೂನುಗಳ ವಿರುದ್ಧದ ಸಾರ್ವಜನಿಕ ಸಭೆಯಲ್ಲಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದಾರೆ. ಅದೇ ಸಾರ್ವಜನಿಕ ಸಭೆಯಲ್ಲಿ ಹಿಂದೂ ರೈತರು ಕೋಪದಿಂದ ‘ಹರ ಹರ ಮಹಾದೇವ’ ಎಂದು ಘೋಷಣೆ ಕೂಗಿದ್ದಾರೆ ಎಂದು ವಿಡಿಯೊ ಹಂಚಿಕೊಳ್ಳಲಾಗುತ್ತಿದ್ದು, ಇದು ನಿಜವೇ ಎಂಬುದನ್ನು ಈ ಸುದ್ದಿಯಲ್ಲಿ ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ‘ಪಂಜಾಬ್ ತಕ್’ ಸುದ್ದಿ ಚಾನೆಲ್ ಲೋಗೋ ಇದೆ. ಈ ವಿಡಿಯೊಕ್ಕಾಗಿ ‘ಪಂಜಾಬ್ ತಕ್’ ನ ಅಧಿಕೃತ ಯೂಟ್ಯೂಬ್ ಚಾನೆಲ್ ನಲ್ಲಿ ಹುಡುಕಿದಾಗ, ‘ಪಂಜಾಬ್ ತಕ್’ ನ್ಯೂಸ್ ಚಾನೆಲ್ 05 ಸೆಪ್ಟೆಂಬರ್ 2021 ರಂದು ಇದನ್ನು ಪ್ರಕಟಿಸಿದೆ. ಈ ವಿಡಿಯೋ 05 ಸೆಪ್ಟೆಂಬರ್ 2021 ರಂದು ಮುಜಾಫರ್ ನಗರದಲ್ಲಿ ನಡೆದ ಕಿಸಾನ್ ಮಹಾ ಪಂಚಾಯತ್ ಕಾರ್ಯಕ್ರಮದ ನೇರ ದೃಶ್ಯಗಳನ್ನು ವಿವರಿಸುತ್ತದೆ.

ಇದನ್ನೂ ಓದಿ: ‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

‘ಪಂಜಾಬ್ ತಕ್’ ಸುದ್ದಿ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ 11:06 ನಿಮಿಷದಲ್ಲಿ, ರಾಕೇಶ್ ಟಿಕಾಯತ್ ಮಾತನಾಡಿರುವುದು ಇದು. “ಇಂತಹ (ಬಿಜೆಪಿ) ಸರ್ಕಾರಗಳು ದೇಶದಲ್ಲಿ ಮುಂದುವರಿದರೆ, ದೇಶದಲ್ಲಿ ಗಲಭೆಗಳನ್ನು ಸೃಷ್ಟಿಸುವುದನ್ನು ಮುಂದುವರಿಸುತ್ತಾರೆ. ಹಿಂದೆ, ಟಿಕಾಯತ್ (ರಾಕೇಶ್ ಟಿಕಾಯತ್ ತಂದೆ ಮತ್ತು ಬಿಕೆಯು ಮಾಜಿ ಅಧ್ಯಕ್ಷ ಮಹೇಂದ್ರ ಸಿಂಗ್ ಟಿಕಾಯತ್) ಸಮಯದಲ್ಲಿ ಘೋಷಣೆಗಳನ್ನು ಕೂಗಲಾಗುತ್ತಿತ್ತು. ‘ಅಲ್ಲಾಹು ಅಕ್ಬರ್’ (ತಕ್ಷಣ ಜನರ ಗುಂಪು ‘ಹರ ಹರ ಮಹಾದೇವ’ ಎಂದು ಕೂಗುತ್ತದೆ), ‘ಅಲ್ಲಾಹು ಅಕ್ಬರ್ (ಮತ್ತೆ ಜನರ ಗುಂಪು ‘ಹರ ಹರ ಮಹಾದೇವ’ ಎಂದು ಕೂಗಿತ್ತದೆ). ಈ ‘ಅಲ್ಲಾಹು ಅಕ್ಬರ್-ಹರ ಹರ ಮಹಾದೇವ್’ ಘೋಷಣೆಗಳು ದೇಶದಲ್ಲಿ ಇದುವರೆಗೆ ನಡೆದ ಚಳುವಳಿಗಳಲ್ಲಿ ಘೋಷಿಸಲಾಗಿದೆ. ಭವಿಷ್ಯದಲ್ಲಿ ನಡೆಯುವ ಚಳುವಳಿಗಳಲ್ಲಿಯೂ ಈ ಘೋಷಣೆಗಳನ್ನು ಕೂಗಲಾಗುತ್ತದೆ. ನಮ್ಮ ಬಳಿ ಗಲಭೆಗಳು ಉದ್ಭವಿಸುವುದಿಲ್ಲ. ಅವರು ಜನರನ್ನು ಬೇರ್ಪಡಿಸಲು ಪ್ರಯತ್ನಿಸಿದರೆ, ನಾವು ಒಂದಾಗಲು ಪ್ರಯತ್ನಿಸುತ್ತೇವೆ. ಸುಳ್ಳು ಪ್ರಚಾರದಿಂದ ಜನರು ಮೋಸ ಹೋಗಬಾರದು” ಎಂದು ಹೇಳಿದ್ದಾರೆ.

ಇತರ ಕೆಲವು ಸುದ್ದಿ ವಾಹಿನಿಗಳು ರಾಕೇಶ್ ಟಿಕಾಯತ್ ಕಿಸಾನ್ ಮಹಾ ಪಂಚಾಯತ್ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೀಡಿಯೋವನ್ನು ಪ್ರಕಟಿಸಿವೆ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ಭಾಷಣ ಮಾಡಿದ ರಾಕೇಶ್ ಟಿಕಾಯತ್ ವಿಡಿಯೊವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ.

ರಾಕೇಶ್ ಟಿಕಾಯತ್ ಅವರ ಅಲ್ಲಾ ಹೋ ಅಕ್ಬರ್ ‘ಘೋಷಣೆಯ ಕುರಿತು ಸಂಪೂರ್ಣ ಸ್ಪಷ್ಟತೆಯೊಂದಿಗೆ 07 ಸೆಪ್ಟೆಂಬರ್ 2021 ರಂದು ‘ಬಿಬಿಸಿ ನ್ಯೂಸ್ ಹಿಂದಿ’ಯಲ್ಲಿ’ ವಿಡಿಯೊವನ್ನು ಪ್ರಕಟಿಸಿದ್ದಾರೆ. ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ಹಳುವಂತೆ, ರಾಕೇಶ್ ಟಿಕಾಯತ್ ಮುಸ್ಲಿಮರ ಸಹಾನುಭೂತಿಗಾಗಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಲಿಲ್ಲ ಎಂದು ಹೇಳಬಹುದಾಗಿದೆ.

ಪ್ರತಿಪಾದನೆ: ರೈತ ಚಳುವಳಿಯ ನಾಯಕ ರಾಕೇಶ್ ಟಿಕಾಯತ್, ಮುಸ್ಲಿಮರ ಸಹಾನುಭೂತಿಗಾಗಿ ‘ಅಲ್ಲಾ ಹು ಅಕ್ಬರ್’ ಎಂದು ಘೋಷಣೆ ಕೂಗಿದರೆ, ಹಿಂದೂ ರೈತರು ಕೋಪದಿಂದ ‘ಹರಹರ ಮಹಾದೇವ್’ ಎಂದು ಘೋಷಣೆ ಕೂಗಿದ್ದಾರೆ.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಲಾಗಿರುವ ವಿಡಿಯೊವನ್ನು ಎಡಿಟ್ ಮಾಡಲಾಗಿದೆ. ರಾಕೇಶ್ ಟಿಕಾಯತ್ ಮುಜಾಫರ್ ನಗರದಲ್ಲಿ 05 ಸೆಪ್ಟೆಂಬರ್ 2021 ರಂದು ನಡೆದ ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ‘ಅಲ್ಲಾಹು ಅಕ್ಬರ್’ ಘೋಷಣೆಯನ್ನು ಕೂಗಿದ್ದು ನಿಜ. ಭಾರತದ ಏಕತೆಯನ್ನು ತಿಳಿಸಲು ರಾಕೇಶ್ ಟಿಕಾಯತ್ ‘ಅಲ್ಲಾಹು ಅಕ್ಬರ್’ಎಂದು ಘೋಷಣೆ ಕೂಗಿ, ರೈತರನ್ನು ‘ಹರ ಹರ ಮಹಾದೇವ್’ ಎಂದು ಕೂಗಲು ಪ್ರೇರೆಪಿಸಿದ್ದಾರೆ. ರೈತರು ಕೋಪದಿಂದ ‘ಹರಹರ ಮಹಾದೇವ್’ ಎಂದು ಘೋಷಣೆ ಕೂಗಿಲ್ಲ. ಅವರು ಮನಃಪೂರ್ವಕವಾಗಿ ಒಪ್ಪಿ ಕೂಗಿದ್ದಾರೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಹಕ್ಕು ತಪ್ಪಾಗಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...