Homeಕರ್ನಾಟಕವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿ ಸವರ್ಣೀಯರ ವಿರೋಧದ ನಡುವೆಯೇ ದಲಿತರು ದೇವಾಲಯ ಪ್ರವೇಶಿಸುವ ಕಾರ್ಯಕ್ರಮ ನಡೆಯಿತು.

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ತೊಳಸಮ್ಮ ದೇವಾಲಯವಿದ್ದು, ಈವರೆಗೆ ದಲಿತರ ಪ್ರವೇಶವಾಗಿರಲಿಲ್ಲ. ಅಲ್ಲದೇ ದೇವಾಲಯದ ಗೋಡೆಗೆ ಮುಜರಾಯಿ ಇಲಾಖೆ ಅಂಟಿಸಿದ್ದ ಸೂಚನಾ ಫಲಕ ಅಳಿಸಿ ಹಾಕುವ ಪ್ರಯತ್ನವನ್ನು ಕಿಡಿಗೇಡಿಗಳು ಮಾಡಿದ್ದರು.

“ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮ ಬೇಧವಿಲ್ಲದೆ ಪ್ರವೇಶಿಸಲು ಅವಕಾಶ ನೀಡಲಾಗಿದೆ” ಎಂದು ಹಾಕಲಾಗಿದ್ದ ಸೂಚನಾ ಫಲಕದಲ್ಲಿ ‘ಜಾತಿ, ಜನಾಂಗ’ ಇತ್ಯಾದಿ ಪದಗಳನ್ನು ಅಳಿಸಿ ಹಾಕಲಾಗಿತ್ತು.

ಈ ಕುರಿತು ‘ನಾನುಗೌರಿ.ಕಾಂ’ ವರದಿ ಮಾಡಿದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದರು. ಸೋಮವಾರ ಗ್ರಾಮಕ್ಕೆ ಭೇಟಿ ನೀಡಿರುವ ಕಂದಾಯ ನಿರೀಕ್ಷಕ ನಾಗಭೂಷಣ, ಗ್ರಾಮ ಲೆಕ್ಕಾಧಿಕಾರಿ ಶಶಿ ಕುಮಾರ್‌ ದೇವಾಲಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಆದರೆ ದಲಿತರು ದೇವಾಲಯ ಪ್ರವೇಶಿಸುವುದನ್ನು ತಡೆಯಲು ಸವರ್ಣೀಯ ಯುವಕರು ಯತ್ನಿಸಿದರು. ಇದರಿಂದ ಹೆದರಿದ ದಲಿತರು, ದೇವಾಲಯ ಪ್ರವೇಶಿಸಲು ಹಿಂದೇಟು ಹಾಕಿದರು. ಆದರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ ಒಬ್ಬರೇ ದೇವಾಲಯ ಪ್ರವೇಶಿಸುವ ಧೈರ್ಯ ತೋರಿದರು.

ದೇವಾಲಯ ಪ್ರವೇಶ ಸಂದರ್ಭದಲ್ಲಿ ಸೆರೆಹಿಡಿಯಲಾಗಿರುವ ವಿಡಿಯೋ ‘ನಾನುಗೌರಿ.ಕಾಂ’ಗೆ ಲಭ್ಯವಾಗಿದ್ದು, ಯಥಾಸ್ಥಿತಿಯನ್ನೇ ಮುಂದುವರಿಸಬೇಕೆಂದು ಸವರ್ಣೀಯರು ಪ್ರತಿಪಾದಿಸುತ್ತಿರುವುದನ್ನು ಕಾಣಬಹುದು.

“ಇವರಿಗೆ ಯಾವತ್ತಾದರೂ ಪ್ರಸಾದ ಕೊಡುವುದಿಲ್ಲ ಎಂದು ಹೇಳಿದ್ದೇವೆಯೇ? ನಮ್ಮ ಜೊತೆಯಲ್ಲೇ ಕುಳಿತು ನಮ್ಮ ಜನದಂತೆಯೇ ಪ್ರಸಾದ ತೆಗೆದುಕೊಂಡು ಹೋಗುತ್ತಾರೆ” ಎಂದು ಸರ್ವಣೀಯ ಯುವಕರು ಹೇಳುವುದನ್ನು ಕೇಳಬಹುದು.

ಅದಕ್ಕೆ ರೇಣುಕಪ್ಪ ಅವರು, “ಪಂಕ್ತಿಯಿಂದ ಎದ್ದು ಬಂದಿದ್ದೇನೆ” ಎಂದು ಹೇಳುತ್ತಾ ತಮಗಾಗಿರುವ ಜಾತಿ ತಾರತಮ್ಯವನ್ನು ಖಂಡಿಸಿರುವುದನ್ನು ಕಾಣಬಹುದು.

“ಬೋರ್ಡ್‌ ಬರೆಸುತ್ತೇವೆ ಬಿಡಪ್ಪ” ಎಂದು ಕಂದಾಯ ಅಧಿಕಾರಿ ಹೇಳುತ್ತಾರೆ. “ಸರ್‌, ಬೋರ್ಡ್ ಬರೆಸುವುದಷ್ಟೇ ಅಲ್ಲ, ದೇವಾಲಯದೊಳಗೆ ಪ್ರವೇಶವನ್ನೂ ಕೊಡಿಸಬೇಕು” ಎಂದು ಆಗ್ರಹಿಸುತ್ತಾರೆ.

ಸಿಟ್ಟಿಗೆದ್ದ ಸವರ್ಣೀಯರು ತಿರಸ್ಕಾರದಿಂದಲೇ, “ಹೋಗೋ ಪ್ರವೇಶ ಮಾಡು” ಎನ್ನುತ್ತಾರೆ. ರೇಣುಕಪ್ಪ ದೇವಾಲಯ ಪ್ರವೇಶಿಸಿದ್ದಾರೆ. ಅದನ್ನು ಸಹಿಸದ ಸವರ್ಣೀಯ ಯುವಕನೊಬ್ಬ, “ದೇವರು ಶಕ್ತಿ ಇದ್ದರೆ ನಿನ್ನನ್ನು ನೋಡಿಕೊಳ್ಳುತ್ತಾಳೆ” ಎಂದಿದ್ದಾನೆ.

ಬ್ಯಾಲಹಳ್ಳಿಯ ಹಾಲು ಉತ್ಪಾದಕರ ಸಂಘದಲ್ಲಿ ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡುತ್ತಿರಲಿಲ್ಲ. ಹಾಲು ನೀಡಲು ನಿರಾಕರಣೆ ಹಾಗೂ ದೇವಾಲಯದ ಬೋರ್ಡ್ ಅಳಿಸಿ ಹಾಕಿರುವ ಕುರಿತು ನಾನೂಗೌರಿ.ಕಾಂನಲ್ಲಿ ವರದಿ ಮಾಡಲಾಗಿತ್ತು. ಹಾಲಿನ ವಿಚಾರವನ್ನು ದಲಿತ ಮುಖಂಡ ಸಿದ್ದಲಿಂಗಯ್ಯ ಪ್ರಸ್ತಾಪಿಸಿರುವುದನ್ನು ಕಾಣಬಹುದು. “ದೇವಾಲಯ ಪ್ರವೇಶಿಸಿ ನಮಗೇನು ಕೋಟಿ ಎಂಬತ್ತು ಲಕ್ಷ ಬರುವುದಿಲ್ಲ. ಹಾಲನ್ನು ಕೊಡಲು ವ್ಯವಸ್ಥೆ ಮಾಡಿ” ಎಂದು ಸಿದ್ದಲಿಂಗಯ್ಯ ಅಧಿಕಾರಿಗೆ ಆಗ್ರಹಿಸುತ್ತಾರೆ.

“ನಾವು ಪೂಜೆ ಸಾಮಾನು ತಂದಾಗ ಎಲ್ಲರಿಗೂ ಪೂಜೆ ಮಾಡಿಕೊಟ್ಟಂತೆ ನಮಗೂ ಮಾಡಿಕೊಡಬೇಕು” ಎಂದು ರೇಣುಕಪ್ಪ ಆಗ್ರಹಿಸಿದಾಗ, “ಮಾಡಿಕೊಡುತ್ತೇವೆ” ಎಂದು ತಿರಸ್ಕಾರದಿಂದಲೇ ಸವರ್ಣೀಯರು ಒಪ್ಪಿಕೊಂಡಿದ್ದಾರೆ.

ಹಾಲು ಖರೀದಿಗೆ ಅವಕಾಶ: ಕಂದಾಯ ನಿರೀಕ್ಷಕರು ಹಾಲಿನ ಡೇರಿ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. “ಮಂಗಳವಾರದಿಂದ ದಲಿತರು ಹಾಲು ಖರೀದಿಸಲು ಅವಕಾಶ ನೀಡಿರುವುದು ಕೊಂಚ ಸಮಾಧಾನ ತಂದಿದೆ” ಎಂದು ದಲಿತರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...