Homeಕರ್ನಾಟಕವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿ ಸವರ್ಣೀಯರ ವಿರೋಧದ ನಡುವೆಯೇ ದಲಿತರು ದೇವಾಲಯ ಪ್ರವೇಶಿಸುವ ಕಾರ್ಯಕ್ರಮ ನಡೆಯಿತು.

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ತೊಳಸಮ್ಮ ದೇವಾಲಯವಿದ್ದು, ಈವರೆಗೆ ದಲಿತರ ಪ್ರವೇಶವಾಗಿರಲಿಲ್ಲ. ಅಲ್ಲದೇ ದೇವಾಲಯದ ಗೋಡೆಗೆ ಮುಜರಾಯಿ ಇಲಾಖೆ ಅಂಟಿಸಿದ್ದ ಸೂಚನಾ ಫಲಕ ಅಳಿಸಿ ಹಾಕುವ ಪ್ರಯತ್ನವನ್ನು ಕಿಡಿಗೇಡಿಗಳು ಮಾಡಿದ್ದರು.

“ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮ ಬೇಧವಿಲ್ಲದೆ ಪ್ರವೇಶಿಸಲು ಅವಕಾಶ ನೀಡಲಾಗಿದೆ” ಎಂದು ಹಾಕಲಾಗಿದ್ದ ಸೂಚನಾ ಫಲಕದಲ್ಲಿ ‘ಜಾತಿ, ಜನಾಂಗ’ ಇತ್ಯಾದಿ ಪದಗಳನ್ನು ಅಳಿಸಿ ಹಾಕಲಾಗಿತ್ತು.

ಈ ಕುರಿತು ‘ನಾನುಗೌರಿ.ಕಾಂ’ ವರದಿ ಮಾಡಿದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದರು. ಸೋಮವಾರ ಗ್ರಾಮಕ್ಕೆ ಭೇಟಿ ನೀಡಿರುವ ಕಂದಾಯ ನಿರೀಕ್ಷಕ ನಾಗಭೂಷಣ, ಗ್ರಾಮ ಲೆಕ್ಕಾಧಿಕಾರಿ ಶಶಿ ಕುಮಾರ್‌ ದೇವಾಲಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಆದರೆ ದಲಿತರು ದೇವಾಲಯ ಪ್ರವೇಶಿಸುವುದನ್ನು ತಡೆಯಲು ಸವರ್ಣೀಯ ಯುವಕರು ಯತ್ನಿಸಿದರು. ಇದರಿಂದ ಹೆದರಿದ ದಲಿತರು, ದೇವಾಲಯ ಪ್ರವೇಶಿಸಲು ಹಿಂದೇಟು ಹಾಕಿದರು. ಆದರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ ಒಬ್ಬರೇ ದೇವಾಲಯ ಪ್ರವೇಶಿಸುವ ಧೈರ್ಯ ತೋರಿದರು.

ದೇವಾಲಯ ಪ್ರವೇಶ ಸಂದರ್ಭದಲ್ಲಿ ಸೆರೆಹಿಡಿಯಲಾಗಿರುವ ವಿಡಿಯೋ ‘ನಾನುಗೌರಿ.ಕಾಂ’ಗೆ ಲಭ್ಯವಾಗಿದ್ದು, ಯಥಾಸ್ಥಿತಿಯನ್ನೇ ಮುಂದುವರಿಸಬೇಕೆಂದು ಸವರ್ಣೀಯರು ಪ್ರತಿಪಾದಿಸುತ್ತಿರುವುದನ್ನು ಕಾಣಬಹುದು.

“ಇವರಿಗೆ ಯಾವತ್ತಾದರೂ ಪ್ರಸಾದ ಕೊಡುವುದಿಲ್ಲ ಎಂದು ಹೇಳಿದ್ದೇವೆಯೇ? ನಮ್ಮ ಜೊತೆಯಲ್ಲೇ ಕುಳಿತು ನಮ್ಮ ಜನದಂತೆಯೇ ಪ್ರಸಾದ ತೆಗೆದುಕೊಂಡು ಹೋಗುತ್ತಾರೆ” ಎಂದು ಸರ್ವಣೀಯ ಯುವಕರು ಹೇಳುವುದನ್ನು ಕೇಳಬಹುದು.

ಅದಕ್ಕೆ ರೇಣುಕಪ್ಪ ಅವರು, “ಪಂಕ್ತಿಯಿಂದ ಎದ್ದು ಬಂದಿದ್ದೇನೆ” ಎಂದು ಹೇಳುತ್ತಾ ತಮಗಾಗಿರುವ ಜಾತಿ ತಾರತಮ್ಯವನ್ನು ಖಂಡಿಸಿರುವುದನ್ನು ಕಾಣಬಹುದು.

“ಬೋರ್ಡ್‌ ಬರೆಸುತ್ತೇವೆ ಬಿಡಪ್ಪ” ಎಂದು ಕಂದಾಯ ಅಧಿಕಾರಿ ಹೇಳುತ್ತಾರೆ. “ಸರ್‌, ಬೋರ್ಡ್ ಬರೆಸುವುದಷ್ಟೇ ಅಲ್ಲ, ದೇವಾಲಯದೊಳಗೆ ಪ್ರವೇಶವನ್ನೂ ಕೊಡಿಸಬೇಕು” ಎಂದು ಆಗ್ರಹಿಸುತ್ತಾರೆ.

ಸಿಟ್ಟಿಗೆದ್ದ ಸವರ್ಣೀಯರು ತಿರಸ್ಕಾರದಿಂದಲೇ, “ಹೋಗೋ ಪ್ರವೇಶ ಮಾಡು” ಎನ್ನುತ್ತಾರೆ. ರೇಣುಕಪ್ಪ ದೇವಾಲಯ ಪ್ರವೇಶಿಸಿದ್ದಾರೆ. ಅದನ್ನು ಸಹಿಸದ ಸವರ್ಣೀಯ ಯುವಕನೊಬ್ಬ, “ದೇವರು ಶಕ್ತಿ ಇದ್ದರೆ ನಿನ್ನನ್ನು ನೋಡಿಕೊಳ್ಳುತ್ತಾಳೆ” ಎಂದಿದ್ದಾನೆ.

ಬ್ಯಾಲಹಳ್ಳಿಯ ಹಾಲು ಉತ್ಪಾದಕರ ಸಂಘದಲ್ಲಿ ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡುತ್ತಿರಲಿಲ್ಲ. ಹಾಲು ನೀಡಲು ನಿರಾಕರಣೆ ಹಾಗೂ ದೇವಾಲಯದ ಬೋರ್ಡ್ ಅಳಿಸಿ ಹಾಕಿರುವ ಕುರಿತು ನಾನೂಗೌರಿ.ಕಾಂನಲ್ಲಿ ವರದಿ ಮಾಡಲಾಗಿತ್ತು. ಹಾಲಿನ ವಿಚಾರವನ್ನು ದಲಿತ ಮುಖಂಡ ಸಿದ್ದಲಿಂಗಯ್ಯ ಪ್ರಸ್ತಾಪಿಸಿರುವುದನ್ನು ಕಾಣಬಹುದು. “ದೇವಾಲಯ ಪ್ರವೇಶಿಸಿ ನಮಗೇನು ಕೋಟಿ ಎಂಬತ್ತು ಲಕ್ಷ ಬರುವುದಿಲ್ಲ. ಹಾಲನ್ನು ಕೊಡಲು ವ್ಯವಸ್ಥೆ ಮಾಡಿ” ಎಂದು ಸಿದ್ದಲಿಂಗಯ್ಯ ಅಧಿಕಾರಿಗೆ ಆಗ್ರಹಿಸುತ್ತಾರೆ.

“ನಾವು ಪೂಜೆ ಸಾಮಾನು ತಂದಾಗ ಎಲ್ಲರಿಗೂ ಪೂಜೆ ಮಾಡಿಕೊಟ್ಟಂತೆ ನಮಗೂ ಮಾಡಿಕೊಡಬೇಕು” ಎಂದು ರೇಣುಕಪ್ಪ ಆಗ್ರಹಿಸಿದಾಗ, “ಮಾಡಿಕೊಡುತ್ತೇವೆ” ಎಂದು ತಿರಸ್ಕಾರದಿಂದಲೇ ಸವರ್ಣೀಯರು ಒಪ್ಪಿಕೊಂಡಿದ್ದಾರೆ.

ಹಾಲು ಖರೀದಿಗೆ ಅವಕಾಶ: ಕಂದಾಯ ನಿರೀಕ್ಷಕರು ಹಾಲಿನ ಡೇರಿ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. “ಮಂಗಳವಾರದಿಂದ ದಲಿತರು ಹಾಲು ಖರೀದಿಸಲು ಅವಕಾಶ ನೀಡಿರುವುದು ಕೊಂಚ ಸಮಾಧಾನ ತಂದಿದೆ” ಎಂದು ದಲಿತರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...