Homeಕರ್ನಾಟಕವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿ ಸವರ್ಣೀಯರ ವಿರೋಧದ ನಡುವೆಯೇ ದಲಿತರು ದೇವಾಲಯ ಪ್ರವೇಶಿಸುವ ಕಾರ್ಯಕ್ರಮ ನಡೆಯಿತು.

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ತೊಳಸಮ್ಮ ದೇವಾಲಯವಿದ್ದು, ಈವರೆಗೆ ದಲಿತರ ಪ್ರವೇಶವಾಗಿರಲಿಲ್ಲ. ಅಲ್ಲದೇ ದೇವಾಲಯದ ಗೋಡೆಗೆ ಮುಜರಾಯಿ ಇಲಾಖೆ ಅಂಟಿಸಿದ್ದ ಸೂಚನಾ ಫಲಕ ಅಳಿಸಿ ಹಾಕುವ ಪ್ರಯತ್ನವನ್ನು ಕಿಡಿಗೇಡಿಗಳು ಮಾಡಿದ್ದರು.

“ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮ ಬೇಧವಿಲ್ಲದೆ ಪ್ರವೇಶಿಸಲು ಅವಕಾಶ ನೀಡಲಾಗಿದೆ” ಎಂದು ಹಾಕಲಾಗಿದ್ದ ಸೂಚನಾ ಫಲಕದಲ್ಲಿ ‘ಜಾತಿ, ಜನಾಂಗ’ ಇತ್ಯಾದಿ ಪದಗಳನ್ನು ಅಳಿಸಿ ಹಾಕಲಾಗಿತ್ತು.

ಈ ಕುರಿತು ‘ನಾನುಗೌರಿ.ಕಾಂ’ ವರದಿ ಮಾಡಿದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದರು. ಸೋಮವಾರ ಗ್ರಾಮಕ್ಕೆ ಭೇಟಿ ನೀಡಿರುವ ಕಂದಾಯ ನಿರೀಕ್ಷಕ ನಾಗಭೂಷಣ, ಗ್ರಾಮ ಲೆಕ್ಕಾಧಿಕಾರಿ ಶಶಿ ಕುಮಾರ್‌ ದೇವಾಲಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಆದರೆ ದಲಿತರು ದೇವಾಲಯ ಪ್ರವೇಶಿಸುವುದನ್ನು ತಡೆಯಲು ಸವರ್ಣೀಯ ಯುವಕರು ಯತ್ನಿಸಿದರು. ಇದರಿಂದ ಹೆದರಿದ ದಲಿತರು, ದೇವಾಲಯ ಪ್ರವೇಶಿಸಲು ಹಿಂದೇಟು ಹಾಕಿದರು. ಆದರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ ಒಬ್ಬರೇ ದೇವಾಲಯ ಪ್ರವೇಶಿಸುವ ಧೈರ್ಯ ತೋರಿದರು.

ದೇವಾಲಯ ಪ್ರವೇಶ ಸಂದರ್ಭದಲ್ಲಿ ಸೆರೆಹಿಡಿಯಲಾಗಿರುವ ವಿಡಿಯೋ ‘ನಾನುಗೌರಿ.ಕಾಂ’ಗೆ ಲಭ್ಯವಾಗಿದ್ದು, ಯಥಾಸ್ಥಿತಿಯನ್ನೇ ಮುಂದುವರಿಸಬೇಕೆಂದು ಸವರ್ಣೀಯರು ಪ್ರತಿಪಾದಿಸುತ್ತಿರುವುದನ್ನು ಕಾಣಬಹುದು.

“ಇವರಿಗೆ ಯಾವತ್ತಾದರೂ ಪ್ರಸಾದ ಕೊಡುವುದಿಲ್ಲ ಎಂದು ಹೇಳಿದ್ದೇವೆಯೇ? ನಮ್ಮ ಜೊತೆಯಲ್ಲೇ ಕುಳಿತು ನಮ್ಮ ಜನದಂತೆಯೇ ಪ್ರಸಾದ ತೆಗೆದುಕೊಂಡು ಹೋಗುತ್ತಾರೆ” ಎಂದು ಸರ್ವಣೀಯ ಯುವಕರು ಹೇಳುವುದನ್ನು ಕೇಳಬಹುದು.

ಅದಕ್ಕೆ ರೇಣುಕಪ್ಪ ಅವರು, “ಪಂಕ್ತಿಯಿಂದ ಎದ್ದು ಬಂದಿದ್ದೇನೆ” ಎಂದು ಹೇಳುತ್ತಾ ತಮಗಾಗಿರುವ ಜಾತಿ ತಾರತಮ್ಯವನ್ನು ಖಂಡಿಸಿರುವುದನ್ನು ಕಾಣಬಹುದು.

“ಬೋರ್ಡ್‌ ಬರೆಸುತ್ತೇವೆ ಬಿಡಪ್ಪ” ಎಂದು ಕಂದಾಯ ಅಧಿಕಾರಿ ಹೇಳುತ್ತಾರೆ. “ಸರ್‌, ಬೋರ್ಡ್ ಬರೆಸುವುದಷ್ಟೇ ಅಲ್ಲ, ದೇವಾಲಯದೊಳಗೆ ಪ್ರವೇಶವನ್ನೂ ಕೊಡಿಸಬೇಕು” ಎಂದು ಆಗ್ರಹಿಸುತ್ತಾರೆ.

ಸಿಟ್ಟಿಗೆದ್ದ ಸವರ್ಣೀಯರು ತಿರಸ್ಕಾರದಿಂದಲೇ, “ಹೋಗೋ ಪ್ರವೇಶ ಮಾಡು” ಎನ್ನುತ್ತಾರೆ. ರೇಣುಕಪ್ಪ ದೇವಾಲಯ ಪ್ರವೇಶಿಸಿದ್ದಾರೆ. ಅದನ್ನು ಸಹಿಸದ ಸವರ್ಣೀಯ ಯುವಕನೊಬ್ಬ, “ದೇವರು ಶಕ್ತಿ ಇದ್ದರೆ ನಿನ್ನನ್ನು ನೋಡಿಕೊಳ್ಳುತ್ತಾಳೆ” ಎಂದಿದ್ದಾನೆ.

ಬ್ಯಾಲಹಳ್ಳಿಯ ಹಾಲು ಉತ್ಪಾದಕರ ಸಂಘದಲ್ಲಿ ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡುತ್ತಿರಲಿಲ್ಲ. ಹಾಲು ನೀಡಲು ನಿರಾಕರಣೆ ಹಾಗೂ ದೇವಾಲಯದ ಬೋರ್ಡ್ ಅಳಿಸಿ ಹಾಕಿರುವ ಕುರಿತು ನಾನೂಗೌರಿ.ಕಾಂನಲ್ಲಿ ವರದಿ ಮಾಡಲಾಗಿತ್ತು. ಹಾಲಿನ ವಿಚಾರವನ್ನು ದಲಿತ ಮುಖಂಡ ಸಿದ್ದಲಿಂಗಯ್ಯ ಪ್ರಸ್ತಾಪಿಸಿರುವುದನ್ನು ಕಾಣಬಹುದು. “ದೇವಾಲಯ ಪ್ರವೇಶಿಸಿ ನಮಗೇನು ಕೋಟಿ ಎಂಬತ್ತು ಲಕ್ಷ ಬರುವುದಿಲ್ಲ. ಹಾಲನ್ನು ಕೊಡಲು ವ್ಯವಸ್ಥೆ ಮಾಡಿ” ಎಂದು ಸಿದ್ದಲಿಂಗಯ್ಯ ಅಧಿಕಾರಿಗೆ ಆಗ್ರಹಿಸುತ್ತಾರೆ.

“ನಾವು ಪೂಜೆ ಸಾಮಾನು ತಂದಾಗ ಎಲ್ಲರಿಗೂ ಪೂಜೆ ಮಾಡಿಕೊಟ್ಟಂತೆ ನಮಗೂ ಮಾಡಿಕೊಡಬೇಕು” ಎಂದು ರೇಣುಕಪ್ಪ ಆಗ್ರಹಿಸಿದಾಗ, “ಮಾಡಿಕೊಡುತ್ತೇವೆ” ಎಂದು ತಿರಸ್ಕಾರದಿಂದಲೇ ಸವರ್ಣೀಯರು ಒಪ್ಪಿಕೊಂಡಿದ್ದಾರೆ.

ಹಾಲು ಖರೀದಿಗೆ ಅವಕಾಶ: ಕಂದಾಯ ನಿರೀಕ್ಷಕರು ಹಾಲಿನ ಡೇರಿ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. “ಮಂಗಳವಾರದಿಂದ ದಲಿತರು ಹಾಲು ಖರೀದಿಸಲು ಅವಕಾಶ ನೀಡಿರುವುದು ಕೊಂಚ ಸಮಾಧಾನ ತಂದಿದೆ” ಎಂದು ದಲಿತರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...