Homeಕರ್ನಾಟಕವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿ ಸವರ್ಣೀಯರ ವಿರೋಧದ ನಡುವೆಯೇ ದಲಿತರು ದೇವಾಲಯ ಪ್ರವೇಶಿಸುವ ಕಾರ್ಯಕ್ರಮ ನಡೆಯಿತು.

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ತೊಳಸಮ್ಮ ದೇವಾಲಯವಿದ್ದು, ಈವರೆಗೆ ದಲಿತರ ಪ್ರವೇಶವಾಗಿರಲಿಲ್ಲ. ಅಲ್ಲದೇ ದೇವಾಲಯದ ಗೋಡೆಗೆ ಮುಜರಾಯಿ ಇಲಾಖೆ ಅಂಟಿಸಿದ್ದ ಸೂಚನಾ ಫಲಕ ಅಳಿಸಿ ಹಾಕುವ ಪ್ರಯತ್ನವನ್ನು ಕಿಡಿಗೇಡಿಗಳು ಮಾಡಿದ್ದರು.

“ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮ ಬೇಧವಿಲ್ಲದೆ ಪ್ರವೇಶಿಸಲು ಅವಕಾಶ ನೀಡಲಾಗಿದೆ” ಎಂದು ಹಾಕಲಾಗಿದ್ದ ಸೂಚನಾ ಫಲಕದಲ್ಲಿ ‘ಜಾತಿ, ಜನಾಂಗ’ ಇತ್ಯಾದಿ ಪದಗಳನ್ನು ಅಳಿಸಿ ಹಾಕಲಾಗಿತ್ತು.

ಈ ಕುರಿತು ‘ನಾನುಗೌರಿ.ಕಾಂ’ ವರದಿ ಮಾಡಿದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದರು. ಸೋಮವಾರ ಗ್ರಾಮಕ್ಕೆ ಭೇಟಿ ನೀಡಿರುವ ಕಂದಾಯ ನಿರೀಕ್ಷಕ ನಾಗಭೂಷಣ, ಗ್ರಾಮ ಲೆಕ್ಕಾಧಿಕಾರಿ ಶಶಿ ಕುಮಾರ್‌ ದೇವಾಲಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಆದರೆ ದಲಿತರು ದೇವಾಲಯ ಪ್ರವೇಶಿಸುವುದನ್ನು ತಡೆಯಲು ಸವರ್ಣೀಯ ಯುವಕರು ಯತ್ನಿಸಿದರು. ಇದರಿಂದ ಹೆದರಿದ ದಲಿತರು, ದೇವಾಲಯ ಪ್ರವೇಶಿಸಲು ಹಿಂದೇಟು ಹಾಕಿದರು. ಆದರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ ಒಬ್ಬರೇ ದೇವಾಲಯ ಪ್ರವೇಶಿಸುವ ಧೈರ್ಯ ತೋರಿದರು.

ದೇವಾಲಯ ಪ್ರವೇಶ ಸಂದರ್ಭದಲ್ಲಿ ಸೆರೆಹಿಡಿಯಲಾಗಿರುವ ವಿಡಿಯೋ ‘ನಾನುಗೌರಿ.ಕಾಂ’ಗೆ ಲಭ್ಯವಾಗಿದ್ದು, ಯಥಾಸ್ಥಿತಿಯನ್ನೇ ಮುಂದುವರಿಸಬೇಕೆಂದು ಸವರ್ಣೀಯರು ಪ್ರತಿಪಾದಿಸುತ್ತಿರುವುದನ್ನು ಕಾಣಬಹುದು.

“ಇವರಿಗೆ ಯಾವತ್ತಾದರೂ ಪ್ರಸಾದ ಕೊಡುವುದಿಲ್ಲ ಎಂದು ಹೇಳಿದ್ದೇವೆಯೇ? ನಮ್ಮ ಜೊತೆಯಲ್ಲೇ ಕುಳಿತು ನಮ್ಮ ಜನದಂತೆಯೇ ಪ್ರಸಾದ ತೆಗೆದುಕೊಂಡು ಹೋಗುತ್ತಾರೆ” ಎಂದು ಸರ್ವಣೀಯ ಯುವಕರು ಹೇಳುವುದನ್ನು ಕೇಳಬಹುದು.

ಅದಕ್ಕೆ ರೇಣುಕಪ್ಪ ಅವರು, “ಪಂಕ್ತಿಯಿಂದ ಎದ್ದು ಬಂದಿದ್ದೇನೆ” ಎಂದು ಹೇಳುತ್ತಾ ತಮಗಾಗಿರುವ ಜಾತಿ ತಾರತಮ್ಯವನ್ನು ಖಂಡಿಸಿರುವುದನ್ನು ಕಾಣಬಹುದು.

“ಬೋರ್ಡ್‌ ಬರೆಸುತ್ತೇವೆ ಬಿಡಪ್ಪ” ಎಂದು ಕಂದಾಯ ಅಧಿಕಾರಿ ಹೇಳುತ್ತಾರೆ. “ಸರ್‌, ಬೋರ್ಡ್ ಬರೆಸುವುದಷ್ಟೇ ಅಲ್ಲ, ದೇವಾಲಯದೊಳಗೆ ಪ್ರವೇಶವನ್ನೂ ಕೊಡಿಸಬೇಕು” ಎಂದು ಆಗ್ರಹಿಸುತ್ತಾರೆ.

ಸಿಟ್ಟಿಗೆದ್ದ ಸವರ್ಣೀಯರು ತಿರಸ್ಕಾರದಿಂದಲೇ, “ಹೋಗೋ ಪ್ರವೇಶ ಮಾಡು” ಎನ್ನುತ್ತಾರೆ. ರೇಣುಕಪ್ಪ ದೇವಾಲಯ ಪ್ರವೇಶಿಸಿದ್ದಾರೆ. ಅದನ್ನು ಸಹಿಸದ ಸವರ್ಣೀಯ ಯುವಕನೊಬ್ಬ, “ದೇವರು ಶಕ್ತಿ ಇದ್ದರೆ ನಿನ್ನನ್ನು ನೋಡಿಕೊಳ್ಳುತ್ತಾಳೆ” ಎಂದಿದ್ದಾನೆ.

ಬ್ಯಾಲಹಳ್ಳಿಯ ಹಾಲು ಉತ್ಪಾದಕರ ಸಂಘದಲ್ಲಿ ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡುತ್ತಿರಲಿಲ್ಲ. ಹಾಲು ನೀಡಲು ನಿರಾಕರಣೆ ಹಾಗೂ ದೇವಾಲಯದ ಬೋರ್ಡ್ ಅಳಿಸಿ ಹಾಕಿರುವ ಕುರಿತು ನಾನೂಗೌರಿ.ಕಾಂನಲ್ಲಿ ವರದಿ ಮಾಡಲಾಗಿತ್ತು. ಹಾಲಿನ ವಿಚಾರವನ್ನು ದಲಿತ ಮುಖಂಡ ಸಿದ್ದಲಿಂಗಯ್ಯ ಪ್ರಸ್ತಾಪಿಸಿರುವುದನ್ನು ಕಾಣಬಹುದು. “ದೇವಾಲಯ ಪ್ರವೇಶಿಸಿ ನಮಗೇನು ಕೋಟಿ ಎಂಬತ್ತು ಲಕ್ಷ ಬರುವುದಿಲ್ಲ. ಹಾಲನ್ನು ಕೊಡಲು ವ್ಯವಸ್ಥೆ ಮಾಡಿ” ಎಂದು ಸಿದ್ದಲಿಂಗಯ್ಯ ಅಧಿಕಾರಿಗೆ ಆಗ್ರಹಿಸುತ್ತಾರೆ.

“ನಾವು ಪೂಜೆ ಸಾಮಾನು ತಂದಾಗ ಎಲ್ಲರಿಗೂ ಪೂಜೆ ಮಾಡಿಕೊಟ್ಟಂತೆ ನಮಗೂ ಮಾಡಿಕೊಡಬೇಕು” ಎಂದು ರೇಣುಕಪ್ಪ ಆಗ್ರಹಿಸಿದಾಗ, “ಮಾಡಿಕೊಡುತ್ತೇವೆ” ಎಂದು ತಿರಸ್ಕಾರದಿಂದಲೇ ಸವರ್ಣೀಯರು ಒಪ್ಪಿಕೊಂಡಿದ್ದಾರೆ.

ಹಾಲು ಖರೀದಿಗೆ ಅವಕಾಶ: ಕಂದಾಯ ನಿರೀಕ್ಷಕರು ಹಾಲಿನ ಡೇರಿ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. “ಮಂಗಳವಾರದಿಂದ ದಲಿತರು ಹಾಲು ಖರೀದಿಸಲು ಅವಕಾಶ ನೀಡಿರುವುದು ಕೊಂಚ ಸಮಾಧಾನ ತಂದಿದೆ” ಎಂದು ದಲಿತರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....