Homeಕರ್ನಾಟಕವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿ ಸವರ್ಣೀಯರ ವಿರೋಧದ ನಡುವೆಯೇ ದಲಿತರು ದೇವಾಲಯ ಪ್ರವೇಶಿಸುವ ಕಾರ್ಯಕ್ರಮ ನಡೆಯಿತು.

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ತೊಳಸಮ್ಮ ದೇವಾಲಯವಿದ್ದು, ಈವರೆಗೆ ದಲಿತರ ಪ್ರವೇಶವಾಗಿರಲಿಲ್ಲ. ಅಲ್ಲದೇ ದೇವಾಲಯದ ಗೋಡೆಗೆ ಮುಜರಾಯಿ ಇಲಾಖೆ ಅಂಟಿಸಿದ್ದ ಸೂಚನಾ ಫಲಕ ಅಳಿಸಿ ಹಾಕುವ ಪ್ರಯತ್ನವನ್ನು ಕಿಡಿಗೇಡಿಗಳು ಮಾಡಿದ್ದರು.

“ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮ ಬೇಧವಿಲ್ಲದೆ ಪ್ರವೇಶಿಸಲು ಅವಕಾಶ ನೀಡಲಾಗಿದೆ” ಎಂದು ಹಾಕಲಾಗಿದ್ದ ಸೂಚನಾ ಫಲಕದಲ್ಲಿ ‘ಜಾತಿ, ಜನಾಂಗ’ ಇತ್ಯಾದಿ ಪದಗಳನ್ನು ಅಳಿಸಿ ಹಾಕಲಾಗಿತ್ತು.

ಈ ಕುರಿತು ‘ನಾನುಗೌರಿ.ಕಾಂ’ ವರದಿ ಮಾಡಿದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದರು. ಸೋಮವಾರ ಗ್ರಾಮಕ್ಕೆ ಭೇಟಿ ನೀಡಿರುವ ಕಂದಾಯ ನಿರೀಕ್ಷಕ ನಾಗಭೂಷಣ, ಗ್ರಾಮ ಲೆಕ್ಕಾಧಿಕಾರಿ ಶಶಿ ಕುಮಾರ್‌ ದೇವಾಲಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಆದರೆ ದಲಿತರು ದೇವಾಲಯ ಪ್ರವೇಶಿಸುವುದನ್ನು ತಡೆಯಲು ಸವರ್ಣೀಯ ಯುವಕರು ಯತ್ನಿಸಿದರು. ಇದರಿಂದ ಹೆದರಿದ ದಲಿತರು, ದೇವಾಲಯ ಪ್ರವೇಶಿಸಲು ಹಿಂದೇಟು ಹಾಕಿದರು. ಆದರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ ಒಬ್ಬರೇ ದೇವಾಲಯ ಪ್ರವೇಶಿಸುವ ಧೈರ್ಯ ತೋರಿದರು.

ದೇವಾಲಯ ಪ್ರವೇಶ ಸಂದರ್ಭದಲ್ಲಿ ಸೆರೆಹಿಡಿಯಲಾಗಿರುವ ವಿಡಿಯೋ ‘ನಾನುಗೌರಿ.ಕಾಂ’ಗೆ ಲಭ್ಯವಾಗಿದ್ದು, ಯಥಾಸ್ಥಿತಿಯನ್ನೇ ಮುಂದುವರಿಸಬೇಕೆಂದು ಸವರ್ಣೀಯರು ಪ್ರತಿಪಾದಿಸುತ್ತಿರುವುದನ್ನು ಕಾಣಬಹುದು.

“ಇವರಿಗೆ ಯಾವತ್ತಾದರೂ ಪ್ರಸಾದ ಕೊಡುವುದಿಲ್ಲ ಎಂದು ಹೇಳಿದ್ದೇವೆಯೇ? ನಮ್ಮ ಜೊತೆಯಲ್ಲೇ ಕುಳಿತು ನಮ್ಮ ಜನದಂತೆಯೇ ಪ್ರಸಾದ ತೆಗೆದುಕೊಂಡು ಹೋಗುತ್ತಾರೆ” ಎಂದು ಸರ್ವಣೀಯ ಯುವಕರು ಹೇಳುವುದನ್ನು ಕೇಳಬಹುದು.

ಅದಕ್ಕೆ ರೇಣುಕಪ್ಪ ಅವರು, “ಪಂಕ್ತಿಯಿಂದ ಎದ್ದು ಬಂದಿದ್ದೇನೆ” ಎಂದು ಹೇಳುತ್ತಾ ತಮಗಾಗಿರುವ ಜಾತಿ ತಾರತಮ್ಯವನ್ನು ಖಂಡಿಸಿರುವುದನ್ನು ಕಾಣಬಹುದು.

“ಬೋರ್ಡ್‌ ಬರೆಸುತ್ತೇವೆ ಬಿಡಪ್ಪ” ಎಂದು ಕಂದಾಯ ಅಧಿಕಾರಿ ಹೇಳುತ್ತಾರೆ. “ಸರ್‌, ಬೋರ್ಡ್ ಬರೆಸುವುದಷ್ಟೇ ಅಲ್ಲ, ದೇವಾಲಯದೊಳಗೆ ಪ್ರವೇಶವನ್ನೂ ಕೊಡಿಸಬೇಕು” ಎಂದು ಆಗ್ರಹಿಸುತ್ತಾರೆ.

ಸಿಟ್ಟಿಗೆದ್ದ ಸವರ್ಣೀಯರು ತಿರಸ್ಕಾರದಿಂದಲೇ, “ಹೋಗೋ ಪ್ರವೇಶ ಮಾಡು” ಎನ್ನುತ್ತಾರೆ. ರೇಣುಕಪ್ಪ ದೇವಾಲಯ ಪ್ರವೇಶಿಸಿದ್ದಾರೆ. ಅದನ್ನು ಸಹಿಸದ ಸವರ್ಣೀಯ ಯುವಕನೊಬ್ಬ, “ದೇವರು ಶಕ್ತಿ ಇದ್ದರೆ ನಿನ್ನನ್ನು ನೋಡಿಕೊಳ್ಳುತ್ತಾಳೆ” ಎಂದಿದ್ದಾನೆ.

ಬ್ಯಾಲಹಳ್ಳಿಯ ಹಾಲು ಉತ್ಪಾದಕರ ಸಂಘದಲ್ಲಿ ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡುತ್ತಿರಲಿಲ್ಲ. ಹಾಲು ನೀಡಲು ನಿರಾಕರಣೆ ಹಾಗೂ ದೇವಾಲಯದ ಬೋರ್ಡ್ ಅಳಿಸಿ ಹಾಕಿರುವ ಕುರಿತು ನಾನೂಗೌರಿ.ಕಾಂನಲ್ಲಿ ವರದಿ ಮಾಡಲಾಗಿತ್ತು. ಹಾಲಿನ ವಿಚಾರವನ್ನು ದಲಿತ ಮುಖಂಡ ಸಿದ್ದಲಿಂಗಯ್ಯ ಪ್ರಸ್ತಾಪಿಸಿರುವುದನ್ನು ಕಾಣಬಹುದು. “ದೇವಾಲಯ ಪ್ರವೇಶಿಸಿ ನಮಗೇನು ಕೋಟಿ ಎಂಬತ್ತು ಲಕ್ಷ ಬರುವುದಿಲ್ಲ. ಹಾಲನ್ನು ಕೊಡಲು ವ್ಯವಸ್ಥೆ ಮಾಡಿ” ಎಂದು ಸಿದ್ದಲಿಂಗಯ್ಯ ಅಧಿಕಾರಿಗೆ ಆಗ್ರಹಿಸುತ್ತಾರೆ.

“ನಾವು ಪೂಜೆ ಸಾಮಾನು ತಂದಾಗ ಎಲ್ಲರಿಗೂ ಪೂಜೆ ಮಾಡಿಕೊಟ್ಟಂತೆ ನಮಗೂ ಮಾಡಿಕೊಡಬೇಕು” ಎಂದು ರೇಣುಕಪ್ಪ ಆಗ್ರಹಿಸಿದಾಗ, “ಮಾಡಿಕೊಡುತ್ತೇವೆ” ಎಂದು ತಿರಸ್ಕಾರದಿಂದಲೇ ಸವರ್ಣೀಯರು ಒಪ್ಪಿಕೊಂಡಿದ್ದಾರೆ.

ಹಾಲು ಖರೀದಿಗೆ ಅವಕಾಶ: ಕಂದಾಯ ನಿರೀಕ್ಷಕರು ಹಾಲಿನ ಡೇರಿ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. “ಮಂಗಳವಾರದಿಂದ ದಲಿತರು ಹಾಲು ಖರೀದಿಸಲು ಅವಕಾಶ ನೀಡಿರುವುದು ಕೊಂಚ ಸಮಾಧಾನ ತಂದಿದೆ” ಎಂದು ದಲಿತರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...