Homeಮುಖಪುಟಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

- Advertisement -
- Advertisement -

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೊದಲ ಹಂತದಲ್ಲಿ 264 ಪುರಸಭೆಗಳು ಮತ್ತು ನಗರ ಪಂಚಾಯತ್‌ಗಳ ಒಟ್ಟು 6,042 ಸದಸ್ಯ ಸ್ಥಾನಗಳು ಮತ್ತು 264 ಪುರಸಭೆಗಳ ಅಧ್ಯಕ್ಷರ ಹುದ್ದೆಗಳಿಗೆ ಚುನಾವಣೆ ನಡೆಯುತ್ತಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ, ಶಾಸಕ ಬಂಗಾರ್ ಮತಗಟ್ಟೆಗೆ ಪ್ರವೇಶಿಸಿ, ಮಹಿಳೆಯೊಬ್ಬರು ಮತ ಚಲಾಯಿಸುತ್ತಿರುವಾಗ ಆವರಣದೊಳಗೆ ಇಣುಕಿ ನೋಡುತ್ತಾ ಅವರೊಂದಿಗೆ ಮಾತನಾಡುತ್ತಿರುವುದು ಇದೆ ಎಂದು ಡಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಚುನಾವಣಾ ಅಧಿಕಾರಿಯೊಬ್ಬರು, “ನಾನು ವಿಡಿಯೋ ನೋಡಿದ್ದೇನೆ. ಆದರೆ, ಅದು ಅಪೂರ್ಣವಾಗಿದೆ. ಹಾಗಾಗಿ, ಈ ಕುರಿತು ವರದಿ ನೀಡುವಂತೆ ಬೂತ್‌ನಲ್ಲಿದ್ದ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದ್ದೇನೆ. ಏಕೆಂದರೆ ಅವರು ಸ್ಥಳದಲ್ಲಿದ್ದರು. ವರದಿಯ ಆಧಾರದ ಮೇಲೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಶಾಸಕ ಬಂಗಾರ್ ಅವರ ಕುಟುಂಬದ ಸದಸ್ಯರೊಬ್ಬರು ಹಿಂಗೋಲಿಯ ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆಂದು ಹೇಳಲಾಗಿದೆ.

ಮಜಲ್ಗಾಂವ್‌ನಲ್ಲಿ 6 ಲಕ್ಷ ರೂ. ವಶ

ಮತ್ತೊಂದು ಘಟನೆಯಲ್ಲಿ, ಬೀಡ್ ಜಿಲ್ಲೆಯ ಮಜಲ್ಗಾಂವ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಸೋಮವಾರ, ಅಧಿಕಾರಿಗಳು ಎಸ್‌ಯುವಿಯಿಂದ 6 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

“ಜೀಪಿನಲ್ಲಿ ಪತ್ತೆಯಾದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಸಂಬಂಧಪಟ್ಟ ವ್ಯಕ್ತಿಗೆ ಸರಿಯಾದ ಲೆಕ್ಕಪತ್ರ ವಿವರಗಳನ್ನು ಒದಗಿಸುವಂತೆ ಕೇಳಲಾಗಿದೆ” ಎಂದು ಮಜಲ್ಗಾಂವ್ ಪುರಸಭೆಯ ಮುಖ್ಯ ಅಧಿಕಾರಿ ಸುಂದರ್ ಬೊಂಡಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...