Homeಮುಖಪುಟವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

ವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

- Advertisement -
- Advertisement -

ಕೊರೊನಾ ವೈರಸ್‌ ಇಡೀ ಜಗತ್ತಿನಾದ್ಯಂತ ತಾಂಡವವಾಡುತ್ತಿದೆ. ಬಡವರಿಂದ ಉಳ್ಳವರವರೆಗೂ ಎಲ್ಲರೂ ಕೊರೊನಾ ವೈರಸ್‌ನ ಆರ್ಭಟಕ್ಕೆ ಭೀತರಾಗಿ ಕುಳಿತಿದ್ದಾರೆ. ಭಾರತದಲ್ಲಿ 21 ದಿನಗಳ ಕಾಲ ಲಾಕ್‌ಔಟ್‌ ಘೋಷಿಸಿದ್ದು, ಯಾರೂ ಮನೆಯಿಂದ ಹೊರಬರುವಂತಿಲ್ಲ ಎಂದು ಆದೇಶಿಸಲಾಗಿದೆ.  ಈ ತುರ್ತು ಘೋಷಣೆಯಿಂದಾಗಿ ಹಲವಾರು ಜನರು ತಮಗೆ ಬೇಕಾದ ಅತ್ಯಾವಶ್ಯಕ ಸಾಮಗ್ರಿಗಳನ್ನು ಹೊಂದಿಸಿಕೊಳ್ಳಲಾಗದೆ, ಊರಿಂದೂರಿಗೆ ಗುಳೆ ಬಂದವರು ತಮ್ಮೂರಿಗೆ ಹಿಂದಿರಗಲೂ ಆಗದೆ ಪರದಾಡುತ್ತಿದ್ದಾರೆ.

ಕೆಲವರು ಏನಾದರೂ ಸಿಕ್ಕರೆ ಕೊಂಡು ತರಲು ಅಂಗಡಿಗಳನ್ನು ಹುಡುಕುತ್ತಿದ್ದರೆ, ಮತ್ತೂ ಕೆಲವರು ಊರ ಹಾದಿ ಹುಡುಕಿ ಹೊರಟಿದ್ದಾರೆ. ಹೀಗೆಲ್ಲಾ ಬೀದಿಗೆ ಬಂದವರನ್ನು ಪೋಲೀಸರು ಅಡ್ಡಗಟ್ಟಿ ತಮ್ಮ ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಮಕ್ಕಳಿದ್ದ ವಯಸ್ಸಾದ ವೃದ್ಧರವರೆಗೂ ಹಿಂದೆ ಮುಂದೆ ನೋಡದೇ ಬಾಸುಂಡೆಗಳ ಅವರ ಬೆನ್ನಮೇಲೆ ಕೊರೊನಾ ಸಂಕಷ್ಟದ ಗುರುತುಗಳನ್ನು ಮೂಡಿಸುತ್ತಿವೆ. ಪೊಲೀಸರೋ ಮಾನವೀಯತೆ ಎಂದರೇನು ಎಂಬುದನ್ನೇ ಮರೆತ ಮೃಗಗಳಂತೆ ವರ್ತಿಸುತ್ತಿದ್ದಾರೆ.

ಇಂತಹ ಪೊಲೀಸರ ಕ್ರೌರ್ಯದ ನಡುವೆಯೂ ಕೆಲವು ಮಾನವೀಯ ಪೊಲೀಸರು ನಿರ್ಗತಿಕರಿಗೆ, ನಿರಾಶ್ರಿತರಿಗೆ ಊಟ, ತಿಂಡಿ, ನೀರಿನ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ತಮ್ಮೊಳಗಿನ ಮಾನವೀಯತೆ ಜೊತೆಗೆ ತಮ್ಮ ಕರ್ತವ್ಯವೂ ಎಂಬಂತೆ ಬಡವರಿಗೆ ನೆರವಾಗುತ್ತಿದ್ದಾರೆ.

ಇದೆಲ್ಲದರ ನಡುವೆ ವಿಶೇಷ ಎಂಬಂತೆ ಕಾಣುತ್ತಿರುವುದು ತಮಿಳುನಾಡು ಪೊಲೀಸರ ಸೃಜನಾತ್ಮಕವಾಗಿ ಅರಿವು ಮೂಡಿಸುತ್ತಿರುವ ಕಲೆ. ರಸ್ತೆಯಲ್ಲಿ ಓಡಾಡುತ್ತಿರುವ, ಒಂದೂರಿಂದ ಮತ್ತೊಂದು ಊರಿಗೆ ಸಂಚರಿಸುತ್ತಿರುವ ದ್ವಿಚಕ್ರ ವಾಹನ ಸವಾರರಿಗೆ ಲಾಕ್‌ಡೌನ್‌ನ ಉದ್ದೇಶವನ್ನೂ, ಜನರು ಮನೆಯಿಂದ ಹೊರಬರದಂತೆ 21 ದಿನಗಳ ಕಾಲ ಮನೆಯಲ್ಲೇ ಉಳಿಯುವಂತೆ ಎಚ್ಚರಿಕೆಯ ಅರಿವು ಮೂಡಿಸಲು ಅದೇ ಕೊರೊನಾ ಹೆಲ್ಮೆಟ್‌ ಬಳಸಿ ಅಚ್ಚರಿಗೆ ಕಾರಣರಾಗಿದ್ದಾರೆ.

ಚೆನೈನ ಕಿಂಗ್‌ಗೌತಮ್ ಎಂಬ ಪೋಲೀಸ್‌ ಅಧಿಕಾರಿ ತಮ್ಮ ಹೆಲ್ಮೆಟ್‌ ಮೇಲೆ ಕೊರೊನಾ ವೈರಸ್‌ ರೀತಿಯಲ್ಲಿ ಡಿಸೈನ್‌ ಮಾಡಿಕೊಂಡು, ಆ ಹೆಲ್ಮೆಟ್‌ ಹಾಕಿಕೊಂಡು ರಸ್ತೆಯಲ್ಲಿ ನಿಂತು ಬರುವ ಬೈಕ್‌ ಸವಾರರನ್ನು ನಿಲ್ಲಿಸಿ, ತಾನು ಕೊರೊನಾ ನೀವು ಹೀಗೆ ರಸ್ತೆಯಲ್ಲಿ ಅಡ್ಡಾಡುತ್ತಿದ್ದರೆ, ಗುಂಪುಗುಂಪಾಗಿ ಓಡಾಡುತ್ತಿದ್ದರೆ, ನಾವು ನಿಮ್ಮ ಮೇಲೆ ದಾಳಿ ಮಾಡುತ್ತೇನೆ, ನಿಮ್ಮ ಆರೋಗ್ಯವನ್ನು ಕಿತ್ತುಕೊಂಡು, ಅನಾರೋಗ್ಯಕ್ಕೆ ಅವಕಾಶವಾಗುತ್ತದೆ. ನನ್ನಿಂದ ನಿಮ್ಮ ಜೀವಕ್ಕೂ ಅಪಾಯವಾದೀತು ಎಂದು ಕೊರೊನಾ ರೀತಿಯಲ್ಲೇ ಅರಿವು ಮೂಡಿಸುತ್ತಿದ್ದಾರೆ.

ಕ್ರೌರ್ಯವನ್ನು ಮೆರೆಯುತ್ತಿರುವ ಪೊಲೀಸರಿಗೆ ಇಂತಹ ಅಧಿಕಾರಿಗಳು ಮಾದರಿಯಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...