Homeಮುಖಪುಟವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

ವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

- Advertisement -
- Advertisement -

ಕೊರೊನಾ ವೈರಸ್‌ ಇಡೀ ಜಗತ್ತಿನಾದ್ಯಂತ ತಾಂಡವವಾಡುತ್ತಿದೆ. ಬಡವರಿಂದ ಉಳ್ಳವರವರೆಗೂ ಎಲ್ಲರೂ ಕೊರೊನಾ ವೈರಸ್‌ನ ಆರ್ಭಟಕ್ಕೆ ಭೀತರಾಗಿ ಕುಳಿತಿದ್ದಾರೆ. ಭಾರತದಲ್ಲಿ 21 ದಿನಗಳ ಕಾಲ ಲಾಕ್‌ಔಟ್‌ ಘೋಷಿಸಿದ್ದು, ಯಾರೂ ಮನೆಯಿಂದ ಹೊರಬರುವಂತಿಲ್ಲ ಎಂದು ಆದೇಶಿಸಲಾಗಿದೆ.  ಈ ತುರ್ತು ಘೋಷಣೆಯಿಂದಾಗಿ ಹಲವಾರು ಜನರು ತಮಗೆ ಬೇಕಾದ ಅತ್ಯಾವಶ್ಯಕ ಸಾಮಗ್ರಿಗಳನ್ನು ಹೊಂದಿಸಿಕೊಳ್ಳಲಾಗದೆ, ಊರಿಂದೂರಿಗೆ ಗುಳೆ ಬಂದವರು ತಮ್ಮೂರಿಗೆ ಹಿಂದಿರಗಲೂ ಆಗದೆ ಪರದಾಡುತ್ತಿದ್ದಾರೆ.

ಕೆಲವರು ಏನಾದರೂ ಸಿಕ್ಕರೆ ಕೊಂಡು ತರಲು ಅಂಗಡಿಗಳನ್ನು ಹುಡುಕುತ್ತಿದ್ದರೆ, ಮತ್ತೂ ಕೆಲವರು ಊರ ಹಾದಿ ಹುಡುಕಿ ಹೊರಟಿದ್ದಾರೆ. ಹೀಗೆಲ್ಲಾ ಬೀದಿಗೆ ಬಂದವರನ್ನು ಪೋಲೀಸರು ಅಡ್ಡಗಟ್ಟಿ ತಮ್ಮ ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಮಕ್ಕಳಿದ್ದ ವಯಸ್ಸಾದ ವೃದ್ಧರವರೆಗೂ ಹಿಂದೆ ಮುಂದೆ ನೋಡದೇ ಬಾಸುಂಡೆಗಳ ಅವರ ಬೆನ್ನಮೇಲೆ ಕೊರೊನಾ ಸಂಕಷ್ಟದ ಗುರುತುಗಳನ್ನು ಮೂಡಿಸುತ್ತಿವೆ. ಪೊಲೀಸರೋ ಮಾನವೀಯತೆ ಎಂದರೇನು ಎಂಬುದನ್ನೇ ಮರೆತ ಮೃಗಗಳಂತೆ ವರ್ತಿಸುತ್ತಿದ್ದಾರೆ.

ಇಂತಹ ಪೊಲೀಸರ ಕ್ರೌರ್ಯದ ನಡುವೆಯೂ ಕೆಲವು ಮಾನವೀಯ ಪೊಲೀಸರು ನಿರ್ಗತಿಕರಿಗೆ, ನಿರಾಶ್ರಿತರಿಗೆ ಊಟ, ತಿಂಡಿ, ನೀರಿನ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ತಮ್ಮೊಳಗಿನ ಮಾನವೀಯತೆ ಜೊತೆಗೆ ತಮ್ಮ ಕರ್ತವ್ಯವೂ ಎಂಬಂತೆ ಬಡವರಿಗೆ ನೆರವಾಗುತ್ತಿದ್ದಾರೆ.

ಇದೆಲ್ಲದರ ನಡುವೆ ವಿಶೇಷ ಎಂಬಂತೆ ಕಾಣುತ್ತಿರುವುದು ತಮಿಳುನಾಡು ಪೊಲೀಸರ ಸೃಜನಾತ್ಮಕವಾಗಿ ಅರಿವು ಮೂಡಿಸುತ್ತಿರುವ ಕಲೆ. ರಸ್ತೆಯಲ್ಲಿ ಓಡಾಡುತ್ತಿರುವ, ಒಂದೂರಿಂದ ಮತ್ತೊಂದು ಊರಿಗೆ ಸಂಚರಿಸುತ್ತಿರುವ ದ್ವಿಚಕ್ರ ವಾಹನ ಸವಾರರಿಗೆ ಲಾಕ್‌ಡೌನ್‌ನ ಉದ್ದೇಶವನ್ನೂ, ಜನರು ಮನೆಯಿಂದ ಹೊರಬರದಂತೆ 21 ದಿನಗಳ ಕಾಲ ಮನೆಯಲ್ಲೇ ಉಳಿಯುವಂತೆ ಎಚ್ಚರಿಕೆಯ ಅರಿವು ಮೂಡಿಸಲು ಅದೇ ಕೊರೊನಾ ಹೆಲ್ಮೆಟ್‌ ಬಳಸಿ ಅಚ್ಚರಿಗೆ ಕಾರಣರಾಗಿದ್ದಾರೆ.

ಚೆನೈನ ಕಿಂಗ್‌ಗೌತಮ್ ಎಂಬ ಪೋಲೀಸ್‌ ಅಧಿಕಾರಿ ತಮ್ಮ ಹೆಲ್ಮೆಟ್‌ ಮೇಲೆ ಕೊರೊನಾ ವೈರಸ್‌ ರೀತಿಯಲ್ಲಿ ಡಿಸೈನ್‌ ಮಾಡಿಕೊಂಡು, ಆ ಹೆಲ್ಮೆಟ್‌ ಹಾಕಿಕೊಂಡು ರಸ್ತೆಯಲ್ಲಿ ನಿಂತು ಬರುವ ಬೈಕ್‌ ಸವಾರರನ್ನು ನಿಲ್ಲಿಸಿ, ತಾನು ಕೊರೊನಾ ನೀವು ಹೀಗೆ ರಸ್ತೆಯಲ್ಲಿ ಅಡ್ಡಾಡುತ್ತಿದ್ದರೆ, ಗುಂಪುಗುಂಪಾಗಿ ಓಡಾಡುತ್ತಿದ್ದರೆ, ನಾವು ನಿಮ್ಮ ಮೇಲೆ ದಾಳಿ ಮಾಡುತ್ತೇನೆ, ನಿಮ್ಮ ಆರೋಗ್ಯವನ್ನು ಕಿತ್ತುಕೊಂಡು, ಅನಾರೋಗ್ಯಕ್ಕೆ ಅವಕಾಶವಾಗುತ್ತದೆ. ನನ್ನಿಂದ ನಿಮ್ಮ ಜೀವಕ್ಕೂ ಅಪಾಯವಾದೀತು ಎಂದು ಕೊರೊನಾ ರೀತಿಯಲ್ಲೇ ಅರಿವು ಮೂಡಿಸುತ್ತಿದ್ದಾರೆ.

ಕ್ರೌರ್ಯವನ್ನು ಮೆರೆಯುತ್ತಿರುವ ಪೊಲೀಸರಿಗೆ ಇಂತಹ ಅಧಿಕಾರಿಗಳು ಮಾದರಿಯಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...