Homeಮುಖಪುಟವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

ವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

- Advertisement -
- Advertisement -

ಕೊರೊನಾ ವೈರಸ್‌ ಇಡೀ ಜಗತ್ತಿನಾದ್ಯಂತ ತಾಂಡವವಾಡುತ್ತಿದೆ. ಬಡವರಿಂದ ಉಳ್ಳವರವರೆಗೂ ಎಲ್ಲರೂ ಕೊರೊನಾ ವೈರಸ್‌ನ ಆರ್ಭಟಕ್ಕೆ ಭೀತರಾಗಿ ಕುಳಿತಿದ್ದಾರೆ. ಭಾರತದಲ್ಲಿ 21 ದಿನಗಳ ಕಾಲ ಲಾಕ್‌ಔಟ್‌ ಘೋಷಿಸಿದ್ದು, ಯಾರೂ ಮನೆಯಿಂದ ಹೊರಬರುವಂತಿಲ್ಲ ಎಂದು ಆದೇಶಿಸಲಾಗಿದೆ.  ಈ ತುರ್ತು ಘೋಷಣೆಯಿಂದಾಗಿ ಹಲವಾರು ಜನರು ತಮಗೆ ಬೇಕಾದ ಅತ್ಯಾವಶ್ಯಕ ಸಾಮಗ್ರಿಗಳನ್ನು ಹೊಂದಿಸಿಕೊಳ್ಳಲಾಗದೆ, ಊರಿಂದೂರಿಗೆ ಗುಳೆ ಬಂದವರು ತಮ್ಮೂರಿಗೆ ಹಿಂದಿರಗಲೂ ಆಗದೆ ಪರದಾಡುತ್ತಿದ್ದಾರೆ.

ಕೆಲವರು ಏನಾದರೂ ಸಿಕ್ಕರೆ ಕೊಂಡು ತರಲು ಅಂಗಡಿಗಳನ್ನು ಹುಡುಕುತ್ತಿದ್ದರೆ, ಮತ್ತೂ ಕೆಲವರು ಊರ ಹಾದಿ ಹುಡುಕಿ ಹೊರಟಿದ್ದಾರೆ. ಹೀಗೆಲ್ಲಾ ಬೀದಿಗೆ ಬಂದವರನ್ನು ಪೋಲೀಸರು ಅಡ್ಡಗಟ್ಟಿ ತಮ್ಮ ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಮಕ್ಕಳಿದ್ದ ವಯಸ್ಸಾದ ವೃದ್ಧರವರೆಗೂ ಹಿಂದೆ ಮುಂದೆ ನೋಡದೇ ಬಾಸುಂಡೆಗಳ ಅವರ ಬೆನ್ನಮೇಲೆ ಕೊರೊನಾ ಸಂಕಷ್ಟದ ಗುರುತುಗಳನ್ನು ಮೂಡಿಸುತ್ತಿವೆ. ಪೊಲೀಸರೋ ಮಾನವೀಯತೆ ಎಂದರೇನು ಎಂಬುದನ್ನೇ ಮರೆತ ಮೃಗಗಳಂತೆ ವರ್ತಿಸುತ್ತಿದ್ದಾರೆ.

ಇಂತಹ ಪೊಲೀಸರ ಕ್ರೌರ್ಯದ ನಡುವೆಯೂ ಕೆಲವು ಮಾನವೀಯ ಪೊಲೀಸರು ನಿರ್ಗತಿಕರಿಗೆ, ನಿರಾಶ್ರಿತರಿಗೆ ಊಟ, ತಿಂಡಿ, ನೀರಿನ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ತಮ್ಮೊಳಗಿನ ಮಾನವೀಯತೆ ಜೊತೆಗೆ ತಮ್ಮ ಕರ್ತವ್ಯವೂ ಎಂಬಂತೆ ಬಡವರಿಗೆ ನೆರವಾಗುತ್ತಿದ್ದಾರೆ.

ಇದೆಲ್ಲದರ ನಡುವೆ ವಿಶೇಷ ಎಂಬಂತೆ ಕಾಣುತ್ತಿರುವುದು ತಮಿಳುನಾಡು ಪೊಲೀಸರ ಸೃಜನಾತ್ಮಕವಾಗಿ ಅರಿವು ಮೂಡಿಸುತ್ತಿರುವ ಕಲೆ. ರಸ್ತೆಯಲ್ಲಿ ಓಡಾಡುತ್ತಿರುವ, ಒಂದೂರಿಂದ ಮತ್ತೊಂದು ಊರಿಗೆ ಸಂಚರಿಸುತ್ತಿರುವ ದ್ವಿಚಕ್ರ ವಾಹನ ಸವಾರರಿಗೆ ಲಾಕ್‌ಡೌನ್‌ನ ಉದ್ದೇಶವನ್ನೂ, ಜನರು ಮನೆಯಿಂದ ಹೊರಬರದಂತೆ 21 ದಿನಗಳ ಕಾಲ ಮನೆಯಲ್ಲೇ ಉಳಿಯುವಂತೆ ಎಚ್ಚರಿಕೆಯ ಅರಿವು ಮೂಡಿಸಲು ಅದೇ ಕೊರೊನಾ ಹೆಲ್ಮೆಟ್‌ ಬಳಸಿ ಅಚ್ಚರಿಗೆ ಕಾರಣರಾಗಿದ್ದಾರೆ.

ಚೆನೈನ ಕಿಂಗ್‌ಗೌತಮ್ ಎಂಬ ಪೋಲೀಸ್‌ ಅಧಿಕಾರಿ ತಮ್ಮ ಹೆಲ್ಮೆಟ್‌ ಮೇಲೆ ಕೊರೊನಾ ವೈರಸ್‌ ರೀತಿಯಲ್ಲಿ ಡಿಸೈನ್‌ ಮಾಡಿಕೊಂಡು, ಆ ಹೆಲ್ಮೆಟ್‌ ಹಾಕಿಕೊಂಡು ರಸ್ತೆಯಲ್ಲಿ ನಿಂತು ಬರುವ ಬೈಕ್‌ ಸವಾರರನ್ನು ನಿಲ್ಲಿಸಿ, ತಾನು ಕೊರೊನಾ ನೀವು ಹೀಗೆ ರಸ್ತೆಯಲ್ಲಿ ಅಡ್ಡಾಡುತ್ತಿದ್ದರೆ, ಗುಂಪುಗುಂಪಾಗಿ ಓಡಾಡುತ್ತಿದ್ದರೆ, ನಾವು ನಿಮ್ಮ ಮೇಲೆ ದಾಳಿ ಮಾಡುತ್ತೇನೆ, ನಿಮ್ಮ ಆರೋಗ್ಯವನ್ನು ಕಿತ್ತುಕೊಂಡು, ಅನಾರೋಗ್ಯಕ್ಕೆ ಅವಕಾಶವಾಗುತ್ತದೆ. ನನ್ನಿಂದ ನಿಮ್ಮ ಜೀವಕ್ಕೂ ಅಪಾಯವಾದೀತು ಎಂದು ಕೊರೊನಾ ರೀತಿಯಲ್ಲೇ ಅರಿವು ಮೂಡಿಸುತ್ತಿದ್ದಾರೆ.

ಕ್ರೌರ್ಯವನ್ನು ಮೆರೆಯುತ್ತಿರುವ ಪೊಲೀಸರಿಗೆ ಇಂತಹ ಅಧಿಕಾರಿಗಳು ಮಾದರಿಯಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...