Homeಮುಖಪುಟವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

ವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

- Advertisement -
- Advertisement -

ಕೊರೊನಾ ವೈರಸ್‌ ಇಡೀ ಜಗತ್ತಿನಾದ್ಯಂತ ತಾಂಡವವಾಡುತ್ತಿದೆ. ಬಡವರಿಂದ ಉಳ್ಳವರವರೆಗೂ ಎಲ್ಲರೂ ಕೊರೊನಾ ವೈರಸ್‌ನ ಆರ್ಭಟಕ್ಕೆ ಭೀತರಾಗಿ ಕುಳಿತಿದ್ದಾರೆ. ಭಾರತದಲ್ಲಿ 21 ದಿನಗಳ ಕಾಲ ಲಾಕ್‌ಔಟ್‌ ಘೋಷಿಸಿದ್ದು, ಯಾರೂ ಮನೆಯಿಂದ ಹೊರಬರುವಂತಿಲ್ಲ ಎಂದು ಆದೇಶಿಸಲಾಗಿದೆ.  ಈ ತುರ್ತು ಘೋಷಣೆಯಿಂದಾಗಿ ಹಲವಾರು ಜನರು ತಮಗೆ ಬೇಕಾದ ಅತ್ಯಾವಶ್ಯಕ ಸಾಮಗ್ರಿಗಳನ್ನು ಹೊಂದಿಸಿಕೊಳ್ಳಲಾಗದೆ, ಊರಿಂದೂರಿಗೆ ಗುಳೆ ಬಂದವರು ತಮ್ಮೂರಿಗೆ ಹಿಂದಿರಗಲೂ ಆಗದೆ ಪರದಾಡುತ್ತಿದ್ದಾರೆ.

ಕೆಲವರು ಏನಾದರೂ ಸಿಕ್ಕರೆ ಕೊಂಡು ತರಲು ಅಂಗಡಿಗಳನ್ನು ಹುಡುಕುತ್ತಿದ್ದರೆ, ಮತ್ತೂ ಕೆಲವರು ಊರ ಹಾದಿ ಹುಡುಕಿ ಹೊರಟಿದ್ದಾರೆ. ಹೀಗೆಲ್ಲಾ ಬೀದಿಗೆ ಬಂದವರನ್ನು ಪೋಲೀಸರು ಅಡ್ಡಗಟ್ಟಿ ತಮ್ಮ ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಮಕ್ಕಳಿದ್ದ ವಯಸ್ಸಾದ ವೃದ್ಧರವರೆಗೂ ಹಿಂದೆ ಮುಂದೆ ನೋಡದೇ ಬಾಸುಂಡೆಗಳ ಅವರ ಬೆನ್ನಮೇಲೆ ಕೊರೊನಾ ಸಂಕಷ್ಟದ ಗುರುತುಗಳನ್ನು ಮೂಡಿಸುತ್ತಿವೆ. ಪೊಲೀಸರೋ ಮಾನವೀಯತೆ ಎಂದರೇನು ಎಂಬುದನ್ನೇ ಮರೆತ ಮೃಗಗಳಂತೆ ವರ್ತಿಸುತ್ತಿದ್ದಾರೆ.

ಇಂತಹ ಪೊಲೀಸರ ಕ್ರೌರ್ಯದ ನಡುವೆಯೂ ಕೆಲವು ಮಾನವೀಯ ಪೊಲೀಸರು ನಿರ್ಗತಿಕರಿಗೆ, ನಿರಾಶ್ರಿತರಿಗೆ ಊಟ, ತಿಂಡಿ, ನೀರಿನ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ತಮ್ಮೊಳಗಿನ ಮಾನವೀಯತೆ ಜೊತೆಗೆ ತಮ್ಮ ಕರ್ತವ್ಯವೂ ಎಂಬಂತೆ ಬಡವರಿಗೆ ನೆರವಾಗುತ್ತಿದ್ದಾರೆ.

ಇದೆಲ್ಲದರ ನಡುವೆ ವಿಶೇಷ ಎಂಬಂತೆ ಕಾಣುತ್ತಿರುವುದು ತಮಿಳುನಾಡು ಪೊಲೀಸರ ಸೃಜನಾತ್ಮಕವಾಗಿ ಅರಿವು ಮೂಡಿಸುತ್ತಿರುವ ಕಲೆ. ರಸ್ತೆಯಲ್ಲಿ ಓಡಾಡುತ್ತಿರುವ, ಒಂದೂರಿಂದ ಮತ್ತೊಂದು ಊರಿಗೆ ಸಂಚರಿಸುತ್ತಿರುವ ದ್ವಿಚಕ್ರ ವಾಹನ ಸವಾರರಿಗೆ ಲಾಕ್‌ಡೌನ್‌ನ ಉದ್ದೇಶವನ್ನೂ, ಜನರು ಮನೆಯಿಂದ ಹೊರಬರದಂತೆ 21 ದಿನಗಳ ಕಾಲ ಮನೆಯಲ್ಲೇ ಉಳಿಯುವಂತೆ ಎಚ್ಚರಿಕೆಯ ಅರಿವು ಮೂಡಿಸಲು ಅದೇ ಕೊರೊನಾ ಹೆಲ್ಮೆಟ್‌ ಬಳಸಿ ಅಚ್ಚರಿಗೆ ಕಾರಣರಾಗಿದ್ದಾರೆ.

ಚೆನೈನ ಕಿಂಗ್‌ಗೌತಮ್ ಎಂಬ ಪೋಲೀಸ್‌ ಅಧಿಕಾರಿ ತಮ್ಮ ಹೆಲ್ಮೆಟ್‌ ಮೇಲೆ ಕೊರೊನಾ ವೈರಸ್‌ ರೀತಿಯಲ್ಲಿ ಡಿಸೈನ್‌ ಮಾಡಿಕೊಂಡು, ಆ ಹೆಲ್ಮೆಟ್‌ ಹಾಕಿಕೊಂಡು ರಸ್ತೆಯಲ್ಲಿ ನಿಂತು ಬರುವ ಬೈಕ್‌ ಸವಾರರನ್ನು ನಿಲ್ಲಿಸಿ, ತಾನು ಕೊರೊನಾ ನೀವು ಹೀಗೆ ರಸ್ತೆಯಲ್ಲಿ ಅಡ್ಡಾಡುತ್ತಿದ್ದರೆ, ಗುಂಪುಗುಂಪಾಗಿ ಓಡಾಡುತ್ತಿದ್ದರೆ, ನಾವು ನಿಮ್ಮ ಮೇಲೆ ದಾಳಿ ಮಾಡುತ್ತೇನೆ, ನಿಮ್ಮ ಆರೋಗ್ಯವನ್ನು ಕಿತ್ತುಕೊಂಡು, ಅನಾರೋಗ್ಯಕ್ಕೆ ಅವಕಾಶವಾಗುತ್ತದೆ. ನನ್ನಿಂದ ನಿಮ್ಮ ಜೀವಕ್ಕೂ ಅಪಾಯವಾದೀತು ಎಂದು ಕೊರೊನಾ ರೀತಿಯಲ್ಲೇ ಅರಿವು ಮೂಡಿಸುತ್ತಿದ್ದಾರೆ.

ಕ್ರೌರ್ಯವನ್ನು ಮೆರೆಯುತ್ತಿರುವ ಪೊಲೀಸರಿಗೆ ಇಂತಹ ಅಧಿಕಾರಿಗಳು ಮಾದರಿಯಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...