Homeಮುಖಪುಟವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

ವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

- Advertisement -
- Advertisement -

ಕೊರೊನಾ ವೈರಸ್‌ ಇಡೀ ಜಗತ್ತಿನಾದ್ಯಂತ ತಾಂಡವವಾಡುತ್ತಿದೆ. ಬಡವರಿಂದ ಉಳ್ಳವರವರೆಗೂ ಎಲ್ಲರೂ ಕೊರೊನಾ ವೈರಸ್‌ನ ಆರ್ಭಟಕ್ಕೆ ಭೀತರಾಗಿ ಕುಳಿತಿದ್ದಾರೆ. ಭಾರತದಲ್ಲಿ 21 ದಿನಗಳ ಕಾಲ ಲಾಕ್‌ಔಟ್‌ ಘೋಷಿಸಿದ್ದು, ಯಾರೂ ಮನೆಯಿಂದ ಹೊರಬರುವಂತಿಲ್ಲ ಎಂದು ಆದೇಶಿಸಲಾಗಿದೆ.  ಈ ತುರ್ತು ಘೋಷಣೆಯಿಂದಾಗಿ ಹಲವಾರು ಜನರು ತಮಗೆ ಬೇಕಾದ ಅತ್ಯಾವಶ್ಯಕ ಸಾಮಗ್ರಿಗಳನ್ನು ಹೊಂದಿಸಿಕೊಳ್ಳಲಾಗದೆ, ಊರಿಂದೂರಿಗೆ ಗುಳೆ ಬಂದವರು ತಮ್ಮೂರಿಗೆ ಹಿಂದಿರಗಲೂ ಆಗದೆ ಪರದಾಡುತ್ತಿದ್ದಾರೆ.

ಕೆಲವರು ಏನಾದರೂ ಸಿಕ್ಕರೆ ಕೊಂಡು ತರಲು ಅಂಗಡಿಗಳನ್ನು ಹುಡುಕುತ್ತಿದ್ದರೆ, ಮತ್ತೂ ಕೆಲವರು ಊರ ಹಾದಿ ಹುಡುಕಿ ಹೊರಟಿದ್ದಾರೆ. ಹೀಗೆಲ್ಲಾ ಬೀದಿಗೆ ಬಂದವರನ್ನು ಪೋಲೀಸರು ಅಡ್ಡಗಟ್ಟಿ ತಮ್ಮ ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಮಕ್ಕಳಿದ್ದ ವಯಸ್ಸಾದ ವೃದ್ಧರವರೆಗೂ ಹಿಂದೆ ಮುಂದೆ ನೋಡದೇ ಬಾಸುಂಡೆಗಳ ಅವರ ಬೆನ್ನಮೇಲೆ ಕೊರೊನಾ ಸಂಕಷ್ಟದ ಗುರುತುಗಳನ್ನು ಮೂಡಿಸುತ್ತಿವೆ. ಪೊಲೀಸರೋ ಮಾನವೀಯತೆ ಎಂದರೇನು ಎಂಬುದನ್ನೇ ಮರೆತ ಮೃಗಗಳಂತೆ ವರ್ತಿಸುತ್ತಿದ್ದಾರೆ.

ಇಂತಹ ಪೊಲೀಸರ ಕ್ರೌರ್ಯದ ನಡುವೆಯೂ ಕೆಲವು ಮಾನವೀಯ ಪೊಲೀಸರು ನಿರ್ಗತಿಕರಿಗೆ, ನಿರಾಶ್ರಿತರಿಗೆ ಊಟ, ತಿಂಡಿ, ನೀರಿನ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ತಮ್ಮೊಳಗಿನ ಮಾನವೀಯತೆ ಜೊತೆಗೆ ತಮ್ಮ ಕರ್ತವ್ಯವೂ ಎಂಬಂತೆ ಬಡವರಿಗೆ ನೆರವಾಗುತ್ತಿದ್ದಾರೆ.

ಇದೆಲ್ಲದರ ನಡುವೆ ವಿಶೇಷ ಎಂಬಂತೆ ಕಾಣುತ್ತಿರುವುದು ತಮಿಳುನಾಡು ಪೊಲೀಸರ ಸೃಜನಾತ್ಮಕವಾಗಿ ಅರಿವು ಮೂಡಿಸುತ್ತಿರುವ ಕಲೆ. ರಸ್ತೆಯಲ್ಲಿ ಓಡಾಡುತ್ತಿರುವ, ಒಂದೂರಿಂದ ಮತ್ತೊಂದು ಊರಿಗೆ ಸಂಚರಿಸುತ್ತಿರುವ ದ್ವಿಚಕ್ರ ವಾಹನ ಸವಾರರಿಗೆ ಲಾಕ್‌ಡೌನ್‌ನ ಉದ್ದೇಶವನ್ನೂ, ಜನರು ಮನೆಯಿಂದ ಹೊರಬರದಂತೆ 21 ದಿನಗಳ ಕಾಲ ಮನೆಯಲ್ಲೇ ಉಳಿಯುವಂತೆ ಎಚ್ಚರಿಕೆಯ ಅರಿವು ಮೂಡಿಸಲು ಅದೇ ಕೊರೊನಾ ಹೆಲ್ಮೆಟ್‌ ಬಳಸಿ ಅಚ್ಚರಿಗೆ ಕಾರಣರಾಗಿದ್ದಾರೆ.

ಚೆನೈನ ಕಿಂಗ್‌ಗೌತಮ್ ಎಂಬ ಪೋಲೀಸ್‌ ಅಧಿಕಾರಿ ತಮ್ಮ ಹೆಲ್ಮೆಟ್‌ ಮೇಲೆ ಕೊರೊನಾ ವೈರಸ್‌ ರೀತಿಯಲ್ಲಿ ಡಿಸೈನ್‌ ಮಾಡಿಕೊಂಡು, ಆ ಹೆಲ್ಮೆಟ್‌ ಹಾಕಿಕೊಂಡು ರಸ್ತೆಯಲ್ಲಿ ನಿಂತು ಬರುವ ಬೈಕ್‌ ಸವಾರರನ್ನು ನಿಲ್ಲಿಸಿ, ತಾನು ಕೊರೊನಾ ನೀವು ಹೀಗೆ ರಸ್ತೆಯಲ್ಲಿ ಅಡ್ಡಾಡುತ್ತಿದ್ದರೆ, ಗುಂಪುಗುಂಪಾಗಿ ಓಡಾಡುತ್ತಿದ್ದರೆ, ನಾವು ನಿಮ್ಮ ಮೇಲೆ ದಾಳಿ ಮಾಡುತ್ತೇನೆ, ನಿಮ್ಮ ಆರೋಗ್ಯವನ್ನು ಕಿತ್ತುಕೊಂಡು, ಅನಾರೋಗ್ಯಕ್ಕೆ ಅವಕಾಶವಾಗುತ್ತದೆ. ನನ್ನಿಂದ ನಿಮ್ಮ ಜೀವಕ್ಕೂ ಅಪಾಯವಾದೀತು ಎಂದು ಕೊರೊನಾ ರೀತಿಯಲ್ಲೇ ಅರಿವು ಮೂಡಿಸುತ್ತಿದ್ದಾರೆ.

ಕ್ರೌರ್ಯವನ್ನು ಮೆರೆಯುತ್ತಿರುವ ಪೊಲೀಸರಿಗೆ ಇಂತಹ ಅಧಿಕಾರಿಗಳು ಮಾದರಿಯಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...