Homeಕರ್ನಾಟಕದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

- Advertisement -
- Advertisement -

ನಿಮ್ಹಾನ್ಸ್‌ ಆಸ್ಪತ್ರೆಯ ಅಧಿಕಾರಿಗಳು ನಮ್ಮನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಮುದಾಯಕ್ಕೆ ಸೇರಿದ 15 ಮಹಿಳೆಯರು ಸೇರಿದಂತೆ ಒಟ್ಟು 19 ಮಂದಿ ಬೆಂಗಳೂರಿನಲ್ಲಿ ಜುಲೈ 9 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ತಮ್ಮನ್ನು ಮತ್ತೆ ಸೇವೆಗೆ ತೆಗೆದುಕೊಳ್ಳುವಂತೆ ಆಡಳಿತ ಮಂಡಳಿಯನ್ನು ಒತ್ತಾಯಿಸಿದ್ದಾರೆ.

ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ (ಎಐಸಿಸಿಟಿಯು) ಗೆ ಸಂಯೋಜಿತವಾಗಿರುವ ನಿಮ್ಹಾನ್ಸ್ ಪ್ರಗತಿಪರ ವರ್ಕರ್ಸ್ ಯೂನಿಯನ್ (ಎನ್‌ಪಿಡಬ್ಲ್ಯುಯು) ಅಡಿಯಲ್ಲಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

ಕೊರೊನಾ ನೈಟ್‌ ಕರ್ಫ್ಯೂ ಇದ್ದಂತಹ (ಎರಡು ತಿಂಗಳ ಹಿಂದೆ) ಸಮಯಲ್ಲಿ ನೌಕರರಿಗೆ ರಾತ್ರಿ 9:30 ವರೆಗೆ ಕೆಲಸ ನಿರ್ವಹಿಸುವಂತೆ ನಿಮ್ಹಾನ್ಸ್‌ ಆಡಳಿತ ಮಂಡಳಿಯು ನಿರ್ದೇಶಿಸಿತ್ತು. ಆದರೆ ಕಾರ್ಮಿಕರು ರಾತ್ರಿ ಹೊತ್ತು ಬಸ್ಸುಗಳು ಇಲ್ಲದಿರುವ ಕಾರಣ, ತಮಗೆ ವಾಹನಗಳನ್ನು ವ್ಯವಸ್ಥೆ ಮಾಡಿಕೊಡಿ ಎಂದು ಕೋರಿದ್ದರು. ಇಷ್ಟಕ್ಕೆ ಆಡಳಿತ ಮಂಡಳಿ ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ಎನ್‌ಪಿಡಬ್ಲ್ಯುಯು ಆರೋಪಿಸಿದೆ.

ಪ್ರತಿಭಟನಾ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರರಾಗಿರುವ ವಿನಯ್ ಶ್ರೀನಿವಾಸ್ ಅವರು ಭೇಟಿ ನೀಡಿ ಕಾರ್ಮಿಕರಿಗೆ ಬೆಂಬಲ ನೀಡಿದ್ದಾರೆ.

ಪ್ರತಿಭಟನಾ ನಿರತ ಮಹಿಳೆಯರು ತಮ್ಮ ಅಳಲನ್ನು ತೋಡಿಕೊಂಡಿದ್ದು, ನಾವು ಯಾವುದೆ ತಪ್ಪನ್ನು ಮಾಡಿಲ್ಲ. ಕೊರೊನಾದಂತಹ ಸಂಕಷ್ಟದಲ್ಲಿ ಕೂಡಾ ನಾವು ಕೆಲಸ ಮಾಡಿದ್ದೇವೆ. ಕೆಲಸದ ಸಮಯ ಬದಲಾಯಿಸದ್ದನ್ನು ಪ್ರಶ್ನಿಸಿರುವುದಕ್ಕೆ ನಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ನಮಗೆ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ. ವಿಡಿಯೊವನ್ನು ಕೆಳಗೆ ನೋಡಬಹುದು.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

“ವಿಕಿರಣಶಾಸ್ತ್ರ ವಿಭಾಗದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಕೆಲಸದ ಸಮಯವನ್ನು ಬದಲಾಯಿಸಲಾಗಿದೆ. ಈ ವಿಭಾಗದಲ್ಲಿ ಹೆಚ್ಚಿನ ಆಸ್ಪತ್ರೆ ಸಹಾಯಕರು ಮಹಿಳೆಯರೇ ಆಗಿರುವುದರಿಂದ, ಕಾರ್ಮಿಕರು ತಮ್ಮ ಸುರಕ್ಷತೆ ಬಗ್ಗೆ ಆತಂಕಗಳನ್ನು ವ್ಯಕ್ತಪಡಿಸಿದ್ದರು. ಜೊತೆಗೆ ಕನಿಷ್ಠ ಸಾರಿಗೆ ವ್ಯವಸ್ಥೆಯನ್ನಾದರೂ ಮಾಡಿ ಎಂದು ಕೋರಿದ್ದರು. ಆದಾಗ್ಯೂ, ಅವರನ್ನು ಜುಲೈ 9 ರಂದು ಸೇವೆಯಿಂದ ವಜಾಗೊಳಿಸಲಾಯಿತು” ಎಂದು ಎನ್‌ಪಿಡಬ್ಲ್ಯುಯು ಪ್ರಧಾನ ಕಾರ್ಯದರ್ಶಿ ಎಂ.ಬಸವರಾಜ್ ಹೇಳಿದ್ದಾರೆ.

“ನಾವು ಹೊರಗುತ್ತಿಗೆ ಏಜೆನ್ಸಿಯಿಂದ ಬಂದವರಾಗಿದ್ದರೂ, ನಿಮ್ಹಾನ್ಸ್ ಅಧಿಕಾರಿಗಳ ಸೂಚನೆ ಮೇರೆಗೆ ಈ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ನಮ್ಮನ್ನು ಮತ್ತೆ ಸೇವೆಗೆ ಸೇರಿಸಿಕೊಳ್ಳುವವರೆಗೂ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಆದರೆ ಪ್ರತಿಭಟನಾಕಾರ ಕಾರ್ಮಿಕರ ಆರೋಪಗಳನ್ನು ನಿಮ್ಹಾನ್ಸ್ ರಿಜಿಸ್ಟ್ರಾರ್ ಬಿ.ಎಸ್. ಶಂಕರನಾರಾಯಣ ರಾವ್ ಅವರು ನಿರಾಕರಿಸಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಅವರು ಹೇಳುವಂತೆ, “ಎಲ್ಲಾ ಕಾರ್ಮಿಕರು ಹೊರಗುತ್ತಿಗೆ ಏಜೆನ್ಸಿಗೆ ಸೇರಿದವರು. ಯಾರೂ ನಿಮ್ಹಾನ್ಸ್‌ನಿಂದ ನೇರವಾಗಿ ಕೆಲಸ ಮಾಡುತ್ತಿಲ್ಲ. ಈ ಕಾರ್ಮಿಕರ ಮೇಲೆ ನಮಗೆ ಯಾವುದೇ ನಿಯಂತ್ರಣವಿಲ್ಲ. ಅವರ ಕೆಲಸದ ಸ್ವರೂಪವನ್ನು ತೀರ್ಮಾನಿಸಲು ಏಜೆನ್ಸಿಗೆ ಅಧಿಕಾರವಿದೆ” ಎಂದು ಅವರು ದಿ ಹಿಂದೂಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಏಕಾಂಗಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕ: ಧರಣಿ ಬಳಿಕ ಸಿದ್ದರಾಮಯ್ಯ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...