Homeಕರ್ನಾಟಕಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

ಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

- Advertisement -
- Advertisement -

ಕುಂದುಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕಳೆದ ತಿಂಗಳು ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಹಾಗೂ ಕುರಿಗಾಹಿ ಸಮುದಾಯಕ್ಕೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯುವಂತೆ ಆಗ್ರಹಿಸಿ ಕುರುಬ ಸಮಾಜದ ಒಕ್ಕೂಟ ಮಾರ್ಚ್ 22ರಂದು ವಿಧಾನಸೌಧ ಚಲೋ ಹಮ್ಮಿಕೊಂಡಿದೆ.

ಕುರಿಗಾಹಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕರಾದ ಸಿದ್ದಣ ತೇಜಿ, “ಈ ಕೊಲೆ ಮತ್ತು ಅತ್ಯಾಚಾರದ ಬಗ್ಗೆ ಸಂಶಯವಿದೆ. ಒಬ್ಬ ಮುದುಕನನ್ನು ಆರೋಪಿ ಎಂದು ಬಂಧಿಸಲಾಗಿದೆ. ಆದರೆ ಇದರ ಹಿಂದೆ ಕಾಣದ ಕೈಗಳು ಇವೆ. ಹೋರಾಟವನ್ನು ಹತ್ತಿಕ್ಕಲು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯ ಮೇಲೆ ನಮಗೆ ಸಂಶಯವಿದೆ” ಎಂದಿದ್ದಾರೆ.

“ದುಷ್ಕರ್ಮಿಗಳನ್ನು ಹಿಡಿದುಕೊಂಡು ಬಂದವರಿಗೆ ಬಹುಮಾನ ನೀಡುವುದಾಗಿ ಪೊಲೀಸರು ಹೇಳುತ್ತಾರೆ. ರೇಪ್ ಆಗಿದೆಯೋ ಇಲ್ಲವೋ ಅಥವಾ ಎಷ್ಟು ಮಂದಿ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆಂಬ ವಿವರಣೆಗಳು ಪೊಲೀಸರಿಗೇ ಗೊತ್ತಿಲ್ಲ. ಬೀಟ್ ಪೊಲೀಸರ ಹೇಳಿಕೆ ಒಂದು ರೀತಿಯದ್ದಾದರೆ ಇಂಟೆಲಿಜೆನ್ಸ್‌‌ನವರ ಹೇಳಿಕೆ ಬೇರೆಯ ರೀತಿಯದ್ದಾಗಿದೆ” ಎಂದು ಟೀಕಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲವು ಮುಖಂಡರು ನಮ್ಮ ಕಾರ್ಯಕರ್ತರಿಗೆ ಅನ್ಯಾಯವಾಗುತ್ತದೆ ಎಂದು ಹೇಳುತ್ತಿದ್ದಾರೆ. ಇಲ್ಲಿ ಅಮಾಯಕರು ಸತ್ತರೂ ಚಿಂತೆ ಇಲ್ಲ, ಕಾಂಗ್ರೆಸ್‌, ಬಿಜೆಪಿ ಕಾರ್ಯಕರ್ತರು ಉಳಿಯಬೇಕಾ? ಪೊಲೀಸ್‌ ಇಲಾಖೆಯು ಬೇರೆಯವರ ಮಾತನ್ನು ಕೇಳುತ್ತಿದೆಯಾ? ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದನೆಂದು ಸರ್ಕಾರ 25 ಲಕ್ಷ ರೂ.ಗಳನ್ನು ನೀಡುತ್ತದೆ. ಒಬ್ಬ ಹೆಣ್ಣು ಮಗಳು ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಹೆಣ್ಣು ಮಕ್ಕಳು ಆತಂಕದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಭಾಗದಲ್ಲಿ ಹೆಣ್ಣುಮಕ್ಕಳು ಮನೆಯಿಂದ ಹೊರಗಡೆ ಬರಲು ಹೆದರುತ್ತಿದ್ದಾರೆ. ಇಂತಹ ದುಸ್ಥಿತಿಗೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ. ಈ ಅತ್ಯಾಚಾರ ಪ್ರಕರಣ ಸಿಒಡಿ ತನಿಖೆಯಾಗಬೇಕು. ನಾಲ್ಕೈದು ಜನರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ವಿವಿಧ ಸಮುದಾಯಗಳಿಗೆ ಈ ಆರೋಪಿಗಳು ಸೇರಿದ್ದು, ಸರಾಯಿ ಕುಡಿಯುತ್ತಿದ್ದರು, ಗಂಜಾ ಸೇದುತ್ತಿದ್ದರು. ಇವರು ಹಲವಾರು ಹೆಣ್ಣುಮಕ್ಕಳನ್ನು ರೇಪ್‌ ಮಾಡಿದ್ದಾರೆ. ಅದನ್ನು ಮುಚ್ಚಿ ಹಾಕಲಾಗಿದೆ. ಪೊಲೀಸ್ ಇಲಾಖೆಯ ವೈಫಲ್ಯ ಕಂಡು ಬರುತ್ತಿದೆ. ಜಿಲ್ಲಾಧಿಕಾರಿ ಇದರ ಬಗ್ಗೆ ಮಾತನಾಡುತ್ತಿಲ್ಲ. ಈ ಭಾಗದ ಒಬ್ಬ ಜನಪ್ರತಿನಿಧಿಗಳು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿಲ್ಲ. ಈ ಘಟನೆಯ ಹಿಂದೆ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರಿದ್ದಾರೆ. ಹೀಗಾಗಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ” ಎಂದಿದ್ದಾರೆ.

ವಿಧಾನಸೌಧ ಚಲೋ ಬೇಡಿಕೆಗಳು

  • ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ನಿಜವಾದ ಆರೋಪಿಗಳನ್ನು ಬಂಧಿಸಬೇಕು.
  • ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ತರಬೇಕು.
  • ಕುರಿಗಾಹಿಗಳು ಸ್ವಯಂ ರಕ್ಷಣೆ ಪಡೆಯುವುದಕ್ಕಾಗಿ ಬಂದೂಕಿನ ಪರವಾನಿಗಿಯನ್ನು ನೀಡಿ, ಸರಕಾರದಿಂದ ಉಚಿತವಾಗಿ ಬಂದೂಕನ್ನು ಒದಗಿಸಬೇಕು.
  • ಕುರಿಗಾಹಿಗಳ ದೂರುಗಳನ್ನು ಆಲಿಸಲು ಪ್ರತಿ ತಿಂಗಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿಗಾಹಿಗಳ ಸಭೆ ಮಾಡಬೇಕು. ಕುರಿಗಾಹಿ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಪ್ರಾತಿನಿಧ್ಯವನ್ನು ನೀಡಬೇಕು.
  • ಆಕಸ್ಮಿಕ ದುರ್ಘಟನೆಗಳು ನಡೆದಾಗ ಪರಿಹಾರ ನೀಡಲು ಕುರಿಗಾರರ ಹಿತರಕ್ಷಣೆಗಾಗಿ ಶಾಶ್ವತವಾದ ಪರಿಹಾರ ನಿಧಿಯನ್ನು ಸ್ಥಾಪಿಸಬೇಕು.
  • ಸರಕಾರವು ಪಶುಸಂಗೋಪನೆಗಳ ಆಹಾರಕ್ಕಾಗಿ ಮೀಸಲಾಗಿರುವ ಗೋಮಾಳ ಜಾಗವನ್ನು ಸಂರಕ್ಷಣೆ ಹಾಗೂ ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸಬೇಕು.
  • ಅನುಗ್ರಹ ಯೋಜನೆಗಳ ಪರಿಹಾರ ನಿಧಿಯ ಮೊತ್ತವನ್ನು 5 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಬೇಕು.
  • ಗುಣಮಟ್ಟದ ಔಷಧಿಗಳನ್ನು ಕಾಲಕಾಲಕ್ಕೆ ಕುರಿಗಳಿಗೆ ಪಿ.ಪಿ.ಆರ್.ಇ.ಟಿ., ನೀಲಿ ನಾಲಿಗೆ ರೋಗದ ಲಸಿಕೆಗಳನ್ನು ಪೂರೈಸಬೇಕು.
  • ಪಶುವೈದ್ಯಕೀಯ ಇಲಾಖೆಯಲ್ಲಿ ಇರುವ ಜಾನುವಾರಗಳ ಸಂಖ್ಯೆಯ ಅನುಗುಣವಾಗಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವಾಗಿ ನೇಮಕಾತಿ ಮಾಡಬೇಕು.
  • ಪ್ರತಿ ತಾಲೂಕಿನಲ್ಲಿ ಒಂದರಂತೆ ರೋಗ ತಪಾಸಣಾ ಕೇಂದ್ರಗಳನ್ನು ತೆರೆಯಬೇಕು. ತುರ್ತು ತಪಾಸಣೆಗಾಗಿ ಅಂಬ್ಯೂಲೆನ್ಸ್‌ಗಳನ್ನು ಹೋಬಳಿಗೆ ಒಂದರಂತೆ ನೀಡಬೇಕು.

    ಇದನ್ನೂ ಓದಿರಿ: ಕೇರಳ: ಅತ್ಯಾಚಾರ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...