Homeಕರ್ನಾಟಕಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

ಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

- Advertisement -
- Advertisement -

ಕುಂದುಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕಳೆದ ತಿಂಗಳು ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಹಾಗೂ ಕುರಿಗಾಹಿ ಸಮುದಾಯಕ್ಕೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯುವಂತೆ ಆಗ್ರಹಿಸಿ ಕುರುಬ ಸಮಾಜದ ಒಕ್ಕೂಟ ಮಾರ್ಚ್ 22ರಂದು ವಿಧಾನಸೌಧ ಚಲೋ ಹಮ್ಮಿಕೊಂಡಿದೆ.

ಕುರಿಗಾಹಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕರಾದ ಸಿದ್ದಣ ತೇಜಿ, “ಈ ಕೊಲೆ ಮತ್ತು ಅತ್ಯಾಚಾರದ ಬಗ್ಗೆ ಸಂಶಯವಿದೆ. ಒಬ್ಬ ಮುದುಕನನ್ನು ಆರೋಪಿ ಎಂದು ಬಂಧಿಸಲಾಗಿದೆ. ಆದರೆ ಇದರ ಹಿಂದೆ ಕಾಣದ ಕೈಗಳು ಇವೆ. ಹೋರಾಟವನ್ನು ಹತ್ತಿಕ್ಕಲು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯ ಮೇಲೆ ನಮಗೆ ಸಂಶಯವಿದೆ” ಎಂದಿದ್ದಾರೆ.

“ದುಷ್ಕರ್ಮಿಗಳನ್ನು ಹಿಡಿದುಕೊಂಡು ಬಂದವರಿಗೆ ಬಹುಮಾನ ನೀಡುವುದಾಗಿ ಪೊಲೀಸರು ಹೇಳುತ್ತಾರೆ. ರೇಪ್ ಆಗಿದೆಯೋ ಇಲ್ಲವೋ ಅಥವಾ ಎಷ್ಟು ಮಂದಿ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆಂಬ ವಿವರಣೆಗಳು ಪೊಲೀಸರಿಗೇ ಗೊತ್ತಿಲ್ಲ. ಬೀಟ್ ಪೊಲೀಸರ ಹೇಳಿಕೆ ಒಂದು ರೀತಿಯದ್ದಾದರೆ ಇಂಟೆಲಿಜೆನ್ಸ್‌‌ನವರ ಹೇಳಿಕೆ ಬೇರೆಯ ರೀತಿಯದ್ದಾಗಿದೆ” ಎಂದು ಟೀಕಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲವು ಮುಖಂಡರು ನಮ್ಮ ಕಾರ್ಯಕರ್ತರಿಗೆ ಅನ್ಯಾಯವಾಗುತ್ತದೆ ಎಂದು ಹೇಳುತ್ತಿದ್ದಾರೆ. ಇಲ್ಲಿ ಅಮಾಯಕರು ಸತ್ತರೂ ಚಿಂತೆ ಇಲ್ಲ, ಕಾಂಗ್ರೆಸ್‌, ಬಿಜೆಪಿ ಕಾರ್ಯಕರ್ತರು ಉಳಿಯಬೇಕಾ? ಪೊಲೀಸ್‌ ಇಲಾಖೆಯು ಬೇರೆಯವರ ಮಾತನ್ನು ಕೇಳುತ್ತಿದೆಯಾ? ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದನೆಂದು ಸರ್ಕಾರ 25 ಲಕ್ಷ ರೂ.ಗಳನ್ನು ನೀಡುತ್ತದೆ. ಒಬ್ಬ ಹೆಣ್ಣು ಮಗಳು ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಹೆಣ್ಣು ಮಕ್ಕಳು ಆತಂಕದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಭಾಗದಲ್ಲಿ ಹೆಣ್ಣುಮಕ್ಕಳು ಮನೆಯಿಂದ ಹೊರಗಡೆ ಬರಲು ಹೆದರುತ್ತಿದ್ದಾರೆ. ಇಂತಹ ದುಸ್ಥಿತಿಗೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ. ಈ ಅತ್ಯಾಚಾರ ಪ್ರಕರಣ ಸಿಒಡಿ ತನಿಖೆಯಾಗಬೇಕು. ನಾಲ್ಕೈದು ಜನರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ವಿವಿಧ ಸಮುದಾಯಗಳಿಗೆ ಈ ಆರೋಪಿಗಳು ಸೇರಿದ್ದು, ಸರಾಯಿ ಕುಡಿಯುತ್ತಿದ್ದರು, ಗಂಜಾ ಸೇದುತ್ತಿದ್ದರು. ಇವರು ಹಲವಾರು ಹೆಣ್ಣುಮಕ್ಕಳನ್ನು ರೇಪ್‌ ಮಾಡಿದ್ದಾರೆ. ಅದನ್ನು ಮುಚ್ಚಿ ಹಾಕಲಾಗಿದೆ. ಪೊಲೀಸ್ ಇಲಾಖೆಯ ವೈಫಲ್ಯ ಕಂಡು ಬರುತ್ತಿದೆ. ಜಿಲ್ಲಾಧಿಕಾರಿ ಇದರ ಬಗ್ಗೆ ಮಾತನಾಡುತ್ತಿಲ್ಲ. ಈ ಭಾಗದ ಒಬ್ಬ ಜನಪ್ರತಿನಿಧಿಗಳು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿಲ್ಲ. ಈ ಘಟನೆಯ ಹಿಂದೆ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರಿದ್ದಾರೆ. ಹೀಗಾಗಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ” ಎಂದಿದ್ದಾರೆ.

ವಿಧಾನಸೌಧ ಚಲೋ ಬೇಡಿಕೆಗಳು

  • ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ನಿಜವಾದ ಆರೋಪಿಗಳನ್ನು ಬಂಧಿಸಬೇಕು.
  • ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ತರಬೇಕು.
  • ಕುರಿಗಾಹಿಗಳು ಸ್ವಯಂ ರಕ್ಷಣೆ ಪಡೆಯುವುದಕ್ಕಾಗಿ ಬಂದೂಕಿನ ಪರವಾನಿಗಿಯನ್ನು ನೀಡಿ, ಸರಕಾರದಿಂದ ಉಚಿತವಾಗಿ ಬಂದೂಕನ್ನು ಒದಗಿಸಬೇಕು.
  • ಕುರಿಗಾಹಿಗಳ ದೂರುಗಳನ್ನು ಆಲಿಸಲು ಪ್ರತಿ ತಿಂಗಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿಗಾಹಿಗಳ ಸಭೆ ಮಾಡಬೇಕು. ಕುರಿಗಾಹಿ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಪ್ರಾತಿನಿಧ್ಯವನ್ನು ನೀಡಬೇಕು.
  • ಆಕಸ್ಮಿಕ ದುರ್ಘಟನೆಗಳು ನಡೆದಾಗ ಪರಿಹಾರ ನೀಡಲು ಕುರಿಗಾರರ ಹಿತರಕ್ಷಣೆಗಾಗಿ ಶಾಶ್ವತವಾದ ಪರಿಹಾರ ನಿಧಿಯನ್ನು ಸ್ಥಾಪಿಸಬೇಕು.
  • ಸರಕಾರವು ಪಶುಸಂಗೋಪನೆಗಳ ಆಹಾರಕ್ಕಾಗಿ ಮೀಸಲಾಗಿರುವ ಗೋಮಾಳ ಜಾಗವನ್ನು ಸಂರಕ್ಷಣೆ ಹಾಗೂ ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸಬೇಕು.
  • ಅನುಗ್ರಹ ಯೋಜನೆಗಳ ಪರಿಹಾರ ನಿಧಿಯ ಮೊತ್ತವನ್ನು 5 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಬೇಕು.
  • ಗುಣಮಟ್ಟದ ಔಷಧಿಗಳನ್ನು ಕಾಲಕಾಲಕ್ಕೆ ಕುರಿಗಳಿಗೆ ಪಿ.ಪಿ.ಆರ್.ಇ.ಟಿ., ನೀಲಿ ನಾಲಿಗೆ ರೋಗದ ಲಸಿಕೆಗಳನ್ನು ಪೂರೈಸಬೇಕು.
  • ಪಶುವೈದ್ಯಕೀಯ ಇಲಾಖೆಯಲ್ಲಿ ಇರುವ ಜಾನುವಾರಗಳ ಸಂಖ್ಯೆಯ ಅನುಗುಣವಾಗಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವಾಗಿ ನೇಮಕಾತಿ ಮಾಡಬೇಕು.
  • ಪ್ರತಿ ತಾಲೂಕಿನಲ್ಲಿ ಒಂದರಂತೆ ರೋಗ ತಪಾಸಣಾ ಕೇಂದ್ರಗಳನ್ನು ತೆರೆಯಬೇಕು. ತುರ್ತು ತಪಾಸಣೆಗಾಗಿ ಅಂಬ್ಯೂಲೆನ್ಸ್‌ಗಳನ್ನು ಹೋಬಳಿಗೆ ಒಂದರಂತೆ ನೀಡಬೇಕು.

    ಇದನ್ನೂ ಓದಿರಿ: ಕೇರಳ: ಅತ್ಯಾಚಾರ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...