Homeಕರ್ನಾಟಕಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

ಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

- Advertisement -
- Advertisement -

ಕುಂದುಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕಳೆದ ತಿಂಗಳು ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಹಾಗೂ ಕುರಿಗಾಹಿ ಸಮುದಾಯಕ್ಕೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯುವಂತೆ ಆಗ್ರಹಿಸಿ ಕುರುಬ ಸಮಾಜದ ಒಕ್ಕೂಟ ಮಾರ್ಚ್ 22ರಂದು ವಿಧಾನಸೌಧ ಚಲೋ ಹಮ್ಮಿಕೊಂಡಿದೆ.

ಕುರಿಗಾಹಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕರಾದ ಸಿದ್ದಣ ತೇಜಿ, “ಈ ಕೊಲೆ ಮತ್ತು ಅತ್ಯಾಚಾರದ ಬಗ್ಗೆ ಸಂಶಯವಿದೆ. ಒಬ್ಬ ಮುದುಕನನ್ನು ಆರೋಪಿ ಎಂದು ಬಂಧಿಸಲಾಗಿದೆ. ಆದರೆ ಇದರ ಹಿಂದೆ ಕಾಣದ ಕೈಗಳು ಇವೆ. ಹೋರಾಟವನ್ನು ಹತ್ತಿಕ್ಕಲು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯ ಮೇಲೆ ನಮಗೆ ಸಂಶಯವಿದೆ” ಎಂದಿದ್ದಾರೆ.

“ದುಷ್ಕರ್ಮಿಗಳನ್ನು ಹಿಡಿದುಕೊಂಡು ಬಂದವರಿಗೆ ಬಹುಮಾನ ನೀಡುವುದಾಗಿ ಪೊಲೀಸರು ಹೇಳುತ್ತಾರೆ. ರೇಪ್ ಆಗಿದೆಯೋ ಇಲ್ಲವೋ ಅಥವಾ ಎಷ್ಟು ಮಂದಿ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆಂಬ ವಿವರಣೆಗಳು ಪೊಲೀಸರಿಗೇ ಗೊತ್ತಿಲ್ಲ. ಬೀಟ್ ಪೊಲೀಸರ ಹೇಳಿಕೆ ಒಂದು ರೀತಿಯದ್ದಾದರೆ ಇಂಟೆಲಿಜೆನ್ಸ್‌‌ನವರ ಹೇಳಿಕೆ ಬೇರೆಯ ರೀತಿಯದ್ದಾಗಿದೆ” ಎಂದು ಟೀಕಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲವು ಮುಖಂಡರು ನಮ್ಮ ಕಾರ್ಯಕರ್ತರಿಗೆ ಅನ್ಯಾಯವಾಗುತ್ತದೆ ಎಂದು ಹೇಳುತ್ತಿದ್ದಾರೆ. ಇಲ್ಲಿ ಅಮಾಯಕರು ಸತ್ತರೂ ಚಿಂತೆ ಇಲ್ಲ, ಕಾಂಗ್ರೆಸ್‌, ಬಿಜೆಪಿ ಕಾರ್ಯಕರ್ತರು ಉಳಿಯಬೇಕಾ? ಪೊಲೀಸ್‌ ಇಲಾಖೆಯು ಬೇರೆಯವರ ಮಾತನ್ನು ಕೇಳುತ್ತಿದೆಯಾ? ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದನೆಂದು ಸರ್ಕಾರ 25 ಲಕ್ಷ ರೂ.ಗಳನ್ನು ನೀಡುತ್ತದೆ. ಒಬ್ಬ ಹೆಣ್ಣು ಮಗಳು ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಹೆಣ್ಣು ಮಕ್ಕಳು ಆತಂಕದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಭಾಗದಲ್ಲಿ ಹೆಣ್ಣುಮಕ್ಕಳು ಮನೆಯಿಂದ ಹೊರಗಡೆ ಬರಲು ಹೆದರುತ್ತಿದ್ದಾರೆ. ಇಂತಹ ದುಸ್ಥಿತಿಗೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ. ಈ ಅತ್ಯಾಚಾರ ಪ್ರಕರಣ ಸಿಒಡಿ ತನಿಖೆಯಾಗಬೇಕು. ನಾಲ್ಕೈದು ಜನರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ವಿವಿಧ ಸಮುದಾಯಗಳಿಗೆ ಈ ಆರೋಪಿಗಳು ಸೇರಿದ್ದು, ಸರಾಯಿ ಕುಡಿಯುತ್ತಿದ್ದರು, ಗಂಜಾ ಸೇದುತ್ತಿದ್ದರು. ಇವರು ಹಲವಾರು ಹೆಣ್ಣುಮಕ್ಕಳನ್ನು ರೇಪ್‌ ಮಾಡಿದ್ದಾರೆ. ಅದನ್ನು ಮುಚ್ಚಿ ಹಾಕಲಾಗಿದೆ. ಪೊಲೀಸ್ ಇಲಾಖೆಯ ವೈಫಲ್ಯ ಕಂಡು ಬರುತ್ತಿದೆ. ಜಿಲ್ಲಾಧಿಕಾರಿ ಇದರ ಬಗ್ಗೆ ಮಾತನಾಡುತ್ತಿಲ್ಲ. ಈ ಭಾಗದ ಒಬ್ಬ ಜನಪ್ರತಿನಿಧಿಗಳು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿಲ್ಲ. ಈ ಘಟನೆಯ ಹಿಂದೆ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರಿದ್ದಾರೆ. ಹೀಗಾಗಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ” ಎಂದಿದ್ದಾರೆ.

ವಿಧಾನಸೌಧ ಚಲೋ ಬೇಡಿಕೆಗಳು

  • ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ನಿಜವಾದ ಆರೋಪಿಗಳನ್ನು ಬಂಧಿಸಬೇಕು.
  • ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ತರಬೇಕು.
  • ಕುರಿಗಾಹಿಗಳು ಸ್ವಯಂ ರಕ್ಷಣೆ ಪಡೆಯುವುದಕ್ಕಾಗಿ ಬಂದೂಕಿನ ಪರವಾನಿಗಿಯನ್ನು ನೀಡಿ, ಸರಕಾರದಿಂದ ಉಚಿತವಾಗಿ ಬಂದೂಕನ್ನು ಒದಗಿಸಬೇಕು.
  • ಕುರಿಗಾಹಿಗಳ ದೂರುಗಳನ್ನು ಆಲಿಸಲು ಪ್ರತಿ ತಿಂಗಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿಗಾಹಿಗಳ ಸಭೆ ಮಾಡಬೇಕು. ಕುರಿಗಾಹಿ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಪ್ರಾತಿನಿಧ್ಯವನ್ನು ನೀಡಬೇಕು.
  • ಆಕಸ್ಮಿಕ ದುರ್ಘಟನೆಗಳು ನಡೆದಾಗ ಪರಿಹಾರ ನೀಡಲು ಕುರಿಗಾರರ ಹಿತರಕ್ಷಣೆಗಾಗಿ ಶಾಶ್ವತವಾದ ಪರಿಹಾರ ನಿಧಿಯನ್ನು ಸ್ಥಾಪಿಸಬೇಕು.
  • ಸರಕಾರವು ಪಶುಸಂಗೋಪನೆಗಳ ಆಹಾರಕ್ಕಾಗಿ ಮೀಸಲಾಗಿರುವ ಗೋಮಾಳ ಜಾಗವನ್ನು ಸಂರಕ್ಷಣೆ ಹಾಗೂ ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸಬೇಕು.
  • ಅನುಗ್ರಹ ಯೋಜನೆಗಳ ಪರಿಹಾರ ನಿಧಿಯ ಮೊತ್ತವನ್ನು 5 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಬೇಕು.
  • ಗುಣಮಟ್ಟದ ಔಷಧಿಗಳನ್ನು ಕಾಲಕಾಲಕ್ಕೆ ಕುರಿಗಳಿಗೆ ಪಿ.ಪಿ.ಆರ್.ಇ.ಟಿ., ನೀಲಿ ನಾಲಿಗೆ ರೋಗದ ಲಸಿಕೆಗಳನ್ನು ಪೂರೈಸಬೇಕು.
  • ಪಶುವೈದ್ಯಕೀಯ ಇಲಾಖೆಯಲ್ಲಿ ಇರುವ ಜಾನುವಾರಗಳ ಸಂಖ್ಯೆಯ ಅನುಗುಣವಾಗಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವಾಗಿ ನೇಮಕಾತಿ ಮಾಡಬೇಕು.
  • ಪ್ರತಿ ತಾಲೂಕಿನಲ್ಲಿ ಒಂದರಂತೆ ರೋಗ ತಪಾಸಣಾ ಕೇಂದ್ರಗಳನ್ನು ತೆರೆಯಬೇಕು. ತುರ್ತು ತಪಾಸಣೆಗಾಗಿ ಅಂಬ್ಯೂಲೆನ್ಸ್‌ಗಳನ್ನು ಹೋಬಳಿಗೆ ಒಂದರಂತೆ ನೀಡಬೇಕು.

    ಇದನ್ನೂ ಓದಿರಿ: ಕೇರಳ: ಅತ್ಯಾಚಾರ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...