Homeಕರ್ನಾಟಕಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

ಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

- Advertisement -
- Advertisement -

ಕುಂದುಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕಳೆದ ತಿಂಗಳು ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಹಾಗೂ ಕುರಿಗಾಹಿ ಸಮುದಾಯಕ್ಕೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯುವಂತೆ ಆಗ್ರಹಿಸಿ ಕುರುಬ ಸಮಾಜದ ಒಕ್ಕೂಟ ಮಾರ್ಚ್ 22ರಂದು ವಿಧಾನಸೌಧ ಚಲೋ ಹಮ್ಮಿಕೊಂಡಿದೆ.

ಕುರಿಗಾಹಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕರಾದ ಸಿದ್ದಣ ತೇಜಿ, “ಈ ಕೊಲೆ ಮತ್ತು ಅತ್ಯಾಚಾರದ ಬಗ್ಗೆ ಸಂಶಯವಿದೆ. ಒಬ್ಬ ಮುದುಕನನ್ನು ಆರೋಪಿ ಎಂದು ಬಂಧಿಸಲಾಗಿದೆ. ಆದರೆ ಇದರ ಹಿಂದೆ ಕಾಣದ ಕೈಗಳು ಇವೆ. ಹೋರಾಟವನ್ನು ಹತ್ತಿಕ್ಕಲು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯ ಮೇಲೆ ನಮಗೆ ಸಂಶಯವಿದೆ” ಎಂದಿದ್ದಾರೆ.

“ದುಷ್ಕರ್ಮಿಗಳನ್ನು ಹಿಡಿದುಕೊಂಡು ಬಂದವರಿಗೆ ಬಹುಮಾನ ನೀಡುವುದಾಗಿ ಪೊಲೀಸರು ಹೇಳುತ್ತಾರೆ. ರೇಪ್ ಆಗಿದೆಯೋ ಇಲ್ಲವೋ ಅಥವಾ ಎಷ್ಟು ಮಂದಿ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆಂಬ ವಿವರಣೆಗಳು ಪೊಲೀಸರಿಗೇ ಗೊತ್ತಿಲ್ಲ. ಬೀಟ್ ಪೊಲೀಸರ ಹೇಳಿಕೆ ಒಂದು ರೀತಿಯದ್ದಾದರೆ ಇಂಟೆಲಿಜೆನ್ಸ್‌‌ನವರ ಹೇಳಿಕೆ ಬೇರೆಯ ರೀತಿಯದ್ದಾಗಿದೆ” ಎಂದು ಟೀಕಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲವು ಮುಖಂಡರು ನಮ್ಮ ಕಾರ್ಯಕರ್ತರಿಗೆ ಅನ್ಯಾಯವಾಗುತ್ತದೆ ಎಂದು ಹೇಳುತ್ತಿದ್ದಾರೆ. ಇಲ್ಲಿ ಅಮಾಯಕರು ಸತ್ತರೂ ಚಿಂತೆ ಇಲ್ಲ, ಕಾಂಗ್ರೆಸ್‌, ಬಿಜೆಪಿ ಕಾರ್ಯಕರ್ತರು ಉಳಿಯಬೇಕಾ? ಪೊಲೀಸ್‌ ಇಲಾಖೆಯು ಬೇರೆಯವರ ಮಾತನ್ನು ಕೇಳುತ್ತಿದೆಯಾ? ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದನೆಂದು ಸರ್ಕಾರ 25 ಲಕ್ಷ ರೂ.ಗಳನ್ನು ನೀಡುತ್ತದೆ. ಒಬ್ಬ ಹೆಣ್ಣು ಮಗಳು ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಹೆಣ್ಣು ಮಕ್ಕಳು ಆತಂಕದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಭಾಗದಲ್ಲಿ ಹೆಣ್ಣುಮಕ್ಕಳು ಮನೆಯಿಂದ ಹೊರಗಡೆ ಬರಲು ಹೆದರುತ್ತಿದ್ದಾರೆ. ಇಂತಹ ದುಸ್ಥಿತಿಗೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ. ಈ ಅತ್ಯಾಚಾರ ಪ್ರಕರಣ ಸಿಒಡಿ ತನಿಖೆಯಾಗಬೇಕು. ನಾಲ್ಕೈದು ಜನರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ವಿವಿಧ ಸಮುದಾಯಗಳಿಗೆ ಈ ಆರೋಪಿಗಳು ಸೇರಿದ್ದು, ಸರಾಯಿ ಕುಡಿಯುತ್ತಿದ್ದರು, ಗಂಜಾ ಸೇದುತ್ತಿದ್ದರು. ಇವರು ಹಲವಾರು ಹೆಣ್ಣುಮಕ್ಕಳನ್ನು ರೇಪ್‌ ಮಾಡಿದ್ದಾರೆ. ಅದನ್ನು ಮುಚ್ಚಿ ಹಾಕಲಾಗಿದೆ. ಪೊಲೀಸ್ ಇಲಾಖೆಯ ವೈಫಲ್ಯ ಕಂಡು ಬರುತ್ತಿದೆ. ಜಿಲ್ಲಾಧಿಕಾರಿ ಇದರ ಬಗ್ಗೆ ಮಾತನಾಡುತ್ತಿಲ್ಲ. ಈ ಭಾಗದ ಒಬ್ಬ ಜನಪ್ರತಿನಿಧಿಗಳು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿಲ್ಲ. ಈ ಘಟನೆಯ ಹಿಂದೆ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರಿದ್ದಾರೆ. ಹೀಗಾಗಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ” ಎಂದಿದ್ದಾರೆ.

ವಿಧಾನಸೌಧ ಚಲೋ ಬೇಡಿಕೆಗಳು

  • ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ನಿಜವಾದ ಆರೋಪಿಗಳನ್ನು ಬಂಧಿಸಬೇಕು.
  • ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ತರಬೇಕು.
  • ಕುರಿಗಾಹಿಗಳು ಸ್ವಯಂ ರಕ್ಷಣೆ ಪಡೆಯುವುದಕ್ಕಾಗಿ ಬಂದೂಕಿನ ಪರವಾನಿಗಿಯನ್ನು ನೀಡಿ, ಸರಕಾರದಿಂದ ಉಚಿತವಾಗಿ ಬಂದೂಕನ್ನು ಒದಗಿಸಬೇಕು.
  • ಕುರಿಗಾಹಿಗಳ ದೂರುಗಳನ್ನು ಆಲಿಸಲು ಪ್ರತಿ ತಿಂಗಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿಗಾಹಿಗಳ ಸಭೆ ಮಾಡಬೇಕು. ಕುರಿಗಾಹಿ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಪ್ರಾತಿನಿಧ್ಯವನ್ನು ನೀಡಬೇಕು.
  • ಆಕಸ್ಮಿಕ ದುರ್ಘಟನೆಗಳು ನಡೆದಾಗ ಪರಿಹಾರ ನೀಡಲು ಕುರಿಗಾರರ ಹಿತರಕ್ಷಣೆಗಾಗಿ ಶಾಶ್ವತವಾದ ಪರಿಹಾರ ನಿಧಿಯನ್ನು ಸ್ಥಾಪಿಸಬೇಕು.
  • ಸರಕಾರವು ಪಶುಸಂಗೋಪನೆಗಳ ಆಹಾರಕ್ಕಾಗಿ ಮೀಸಲಾಗಿರುವ ಗೋಮಾಳ ಜಾಗವನ್ನು ಸಂರಕ್ಷಣೆ ಹಾಗೂ ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸಬೇಕು.
  • ಅನುಗ್ರಹ ಯೋಜನೆಗಳ ಪರಿಹಾರ ನಿಧಿಯ ಮೊತ್ತವನ್ನು 5 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಬೇಕು.
  • ಗುಣಮಟ್ಟದ ಔಷಧಿಗಳನ್ನು ಕಾಲಕಾಲಕ್ಕೆ ಕುರಿಗಳಿಗೆ ಪಿ.ಪಿ.ಆರ್.ಇ.ಟಿ., ನೀಲಿ ನಾಲಿಗೆ ರೋಗದ ಲಸಿಕೆಗಳನ್ನು ಪೂರೈಸಬೇಕು.
  • ಪಶುವೈದ್ಯಕೀಯ ಇಲಾಖೆಯಲ್ಲಿ ಇರುವ ಜಾನುವಾರಗಳ ಸಂಖ್ಯೆಯ ಅನುಗುಣವಾಗಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವಾಗಿ ನೇಮಕಾತಿ ಮಾಡಬೇಕು.
  • ಪ್ರತಿ ತಾಲೂಕಿನಲ್ಲಿ ಒಂದರಂತೆ ರೋಗ ತಪಾಸಣಾ ಕೇಂದ್ರಗಳನ್ನು ತೆರೆಯಬೇಕು. ತುರ್ತು ತಪಾಸಣೆಗಾಗಿ ಅಂಬ್ಯೂಲೆನ್ಸ್‌ಗಳನ್ನು ಹೋಬಳಿಗೆ ಒಂದರಂತೆ ನೀಡಬೇಕು.

    ಇದನ್ನೂ ಓದಿರಿ: ಕೇರಳ: ಅತ್ಯಾಚಾರ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...