Homeಕರ್ನಾಟಕಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

ಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

- Advertisement -
- Advertisement -

ಕುಂದುಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕಳೆದ ತಿಂಗಳು ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಹಾಗೂ ಕುರಿಗಾಹಿ ಸಮುದಾಯಕ್ಕೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯುವಂತೆ ಆಗ್ರಹಿಸಿ ಕುರುಬ ಸಮಾಜದ ಒಕ್ಕೂಟ ಮಾರ್ಚ್ 22ರಂದು ವಿಧಾನಸೌಧ ಚಲೋ ಹಮ್ಮಿಕೊಂಡಿದೆ.

ಕುರಿಗಾಹಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕರಾದ ಸಿದ್ದಣ ತೇಜಿ, “ಈ ಕೊಲೆ ಮತ್ತು ಅತ್ಯಾಚಾರದ ಬಗ್ಗೆ ಸಂಶಯವಿದೆ. ಒಬ್ಬ ಮುದುಕನನ್ನು ಆರೋಪಿ ಎಂದು ಬಂಧಿಸಲಾಗಿದೆ. ಆದರೆ ಇದರ ಹಿಂದೆ ಕಾಣದ ಕೈಗಳು ಇವೆ. ಹೋರಾಟವನ್ನು ಹತ್ತಿಕ್ಕಲು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯ ಮೇಲೆ ನಮಗೆ ಸಂಶಯವಿದೆ” ಎಂದಿದ್ದಾರೆ.

“ದುಷ್ಕರ್ಮಿಗಳನ್ನು ಹಿಡಿದುಕೊಂಡು ಬಂದವರಿಗೆ ಬಹುಮಾನ ನೀಡುವುದಾಗಿ ಪೊಲೀಸರು ಹೇಳುತ್ತಾರೆ. ರೇಪ್ ಆಗಿದೆಯೋ ಇಲ್ಲವೋ ಅಥವಾ ಎಷ್ಟು ಮಂದಿ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆಂಬ ವಿವರಣೆಗಳು ಪೊಲೀಸರಿಗೇ ಗೊತ್ತಿಲ್ಲ. ಬೀಟ್ ಪೊಲೀಸರ ಹೇಳಿಕೆ ಒಂದು ರೀತಿಯದ್ದಾದರೆ ಇಂಟೆಲಿಜೆನ್ಸ್‌‌ನವರ ಹೇಳಿಕೆ ಬೇರೆಯ ರೀತಿಯದ್ದಾಗಿದೆ” ಎಂದು ಟೀಕಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲವು ಮುಖಂಡರು ನಮ್ಮ ಕಾರ್ಯಕರ್ತರಿಗೆ ಅನ್ಯಾಯವಾಗುತ್ತದೆ ಎಂದು ಹೇಳುತ್ತಿದ್ದಾರೆ. ಇಲ್ಲಿ ಅಮಾಯಕರು ಸತ್ತರೂ ಚಿಂತೆ ಇಲ್ಲ, ಕಾಂಗ್ರೆಸ್‌, ಬಿಜೆಪಿ ಕಾರ್ಯಕರ್ತರು ಉಳಿಯಬೇಕಾ? ಪೊಲೀಸ್‌ ಇಲಾಖೆಯು ಬೇರೆಯವರ ಮಾತನ್ನು ಕೇಳುತ್ತಿದೆಯಾ? ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದನೆಂದು ಸರ್ಕಾರ 25 ಲಕ್ಷ ರೂ.ಗಳನ್ನು ನೀಡುತ್ತದೆ. ಒಬ್ಬ ಹೆಣ್ಣು ಮಗಳು ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಹೆಣ್ಣು ಮಕ್ಕಳು ಆತಂಕದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಭಾಗದಲ್ಲಿ ಹೆಣ್ಣುಮಕ್ಕಳು ಮನೆಯಿಂದ ಹೊರಗಡೆ ಬರಲು ಹೆದರುತ್ತಿದ್ದಾರೆ. ಇಂತಹ ದುಸ್ಥಿತಿಗೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ. ಈ ಅತ್ಯಾಚಾರ ಪ್ರಕರಣ ಸಿಒಡಿ ತನಿಖೆಯಾಗಬೇಕು. ನಾಲ್ಕೈದು ಜನರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ವಿವಿಧ ಸಮುದಾಯಗಳಿಗೆ ಈ ಆರೋಪಿಗಳು ಸೇರಿದ್ದು, ಸರಾಯಿ ಕುಡಿಯುತ್ತಿದ್ದರು, ಗಂಜಾ ಸೇದುತ್ತಿದ್ದರು. ಇವರು ಹಲವಾರು ಹೆಣ್ಣುಮಕ್ಕಳನ್ನು ರೇಪ್‌ ಮಾಡಿದ್ದಾರೆ. ಅದನ್ನು ಮುಚ್ಚಿ ಹಾಕಲಾಗಿದೆ. ಪೊಲೀಸ್ ಇಲಾಖೆಯ ವೈಫಲ್ಯ ಕಂಡು ಬರುತ್ತಿದೆ. ಜಿಲ್ಲಾಧಿಕಾರಿ ಇದರ ಬಗ್ಗೆ ಮಾತನಾಡುತ್ತಿಲ್ಲ. ಈ ಭಾಗದ ಒಬ್ಬ ಜನಪ್ರತಿನಿಧಿಗಳು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿಲ್ಲ. ಈ ಘಟನೆಯ ಹಿಂದೆ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರಿದ್ದಾರೆ. ಹೀಗಾಗಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ” ಎಂದಿದ್ದಾರೆ.

ವಿಧಾನಸೌಧ ಚಲೋ ಬೇಡಿಕೆಗಳು

  • ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ನಿಜವಾದ ಆರೋಪಿಗಳನ್ನು ಬಂಧಿಸಬೇಕು.
  • ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ತರಬೇಕು.
  • ಕುರಿಗಾಹಿಗಳು ಸ್ವಯಂ ರಕ್ಷಣೆ ಪಡೆಯುವುದಕ್ಕಾಗಿ ಬಂದೂಕಿನ ಪರವಾನಿಗಿಯನ್ನು ನೀಡಿ, ಸರಕಾರದಿಂದ ಉಚಿತವಾಗಿ ಬಂದೂಕನ್ನು ಒದಗಿಸಬೇಕು.
  • ಕುರಿಗಾಹಿಗಳ ದೂರುಗಳನ್ನು ಆಲಿಸಲು ಪ್ರತಿ ತಿಂಗಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿಗಾಹಿಗಳ ಸಭೆ ಮಾಡಬೇಕು. ಕುರಿಗಾಹಿ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಪ್ರಾತಿನಿಧ್ಯವನ್ನು ನೀಡಬೇಕು.
  • ಆಕಸ್ಮಿಕ ದುರ್ಘಟನೆಗಳು ನಡೆದಾಗ ಪರಿಹಾರ ನೀಡಲು ಕುರಿಗಾರರ ಹಿತರಕ್ಷಣೆಗಾಗಿ ಶಾಶ್ವತವಾದ ಪರಿಹಾರ ನಿಧಿಯನ್ನು ಸ್ಥಾಪಿಸಬೇಕು.
  • ಸರಕಾರವು ಪಶುಸಂಗೋಪನೆಗಳ ಆಹಾರಕ್ಕಾಗಿ ಮೀಸಲಾಗಿರುವ ಗೋಮಾಳ ಜಾಗವನ್ನು ಸಂರಕ್ಷಣೆ ಹಾಗೂ ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸಬೇಕು.
  • ಅನುಗ್ರಹ ಯೋಜನೆಗಳ ಪರಿಹಾರ ನಿಧಿಯ ಮೊತ್ತವನ್ನು 5 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಬೇಕು.
  • ಗುಣಮಟ್ಟದ ಔಷಧಿಗಳನ್ನು ಕಾಲಕಾಲಕ್ಕೆ ಕುರಿಗಳಿಗೆ ಪಿ.ಪಿ.ಆರ್.ಇ.ಟಿ., ನೀಲಿ ನಾಲಿಗೆ ರೋಗದ ಲಸಿಕೆಗಳನ್ನು ಪೂರೈಸಬೇಕು.
  • ಪಶುವೈದ್ಯಕೀಯ ಇಲಾಖೆಯಲ್ಲಿ ಇರುವ ಜಾನುವಾರಗಳ ಸಂಖ್ಯೆಯ ಅನುಗುಣವಾಗಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವಾಗಿ ನೇಮಕಾತಿ ಮಾಡಬೇಕು.
  • ಪ್ರತಿ ತಾಲೂಕಿನಲ್ಲಿ ಒಂದರಂತೆ ರೋಗ ತಪಾಸಣಾ ಕೇಂದ್ರಗಳನ್ನು ತೆರೆಯಬೇಕು. ತುರ್ತು ತಪಾಸಣೆಗಾಗಿ ಅಂಬ್ಯೂಲೆನ್ಸ್‌ಗಳನ್ನು ಹೋಬಳಿಗೆ ಒಂದರಂತೆ ನೀಡಬೇಕು.

    ಇದನ್ನೂ ಓದಿರಿ: ಕೇರಳ: ಅತ್ಯಾಚಾರ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...