Homeಕರ್ನಾಟಕವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ವಜಾಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.

- Advertisement -
- Advertisement -

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು.

ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.

ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್‌ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್‌, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್‌- ಹೀಗೆ ಹಲವು ಸಂಘಟನೆಗಳು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ಭಾಗವಾಗಿದ್ದವು. ನೂರಾರು ವಾಹನಗಳನ್ನು ಮಾಡಿಕೊಂಡು ದೂರದ ಜಿಲ್ಲೆಗಳಿಂದ ಸಾವಿರಾರು ಜನರು ಬೆಂಗಳೂರಿಗೆ ಆಗಮಿಸಿದ್ದರು.

ಕೇಂದ್ರ ರೈಲ್ವೆ ನಿಲ್ದಾಣದಿಂದ ಪ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಲಾಯಿತು. ದಾರಿಯುದ್ದಕ್ಕೂ ಜೈಭೀಮ್ ಘೋಷಣೆಗಳು ಮೊಳಗಿತು. ನೀಲಿ ಭಾವುಟ, ನೀಲಿ ಶಾಲುಗಳು, ನೀಲಿ ಟೋಪಿಗಳು ರಾರಾಜಿಸಿದವು. ಕಲಾವಿದರು ವಾದ್ಯ ನುಡಿಸುತ್ತ ಮೆರವಣಿಗೆಯನ್ನು ಮುನ್ನಡೆಸಿದರು. ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು.

“ಕೋರ್ಟ್ ಸಭಾಂಗಣದಲ್ಲಿಯೇ ಅಂಬೇಡ್ಕರ್‌ ಭಾವಚಿತ್ರ ಇರುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಬೇಕು. ನ್ಯಾಯಾಲಯದಲ್ಲಿ ಮೀಸಲಾತಿ ಕಡ್ಡಾಯ ಮಾಡಬೇಕು. ಹುಮನಾಬಾದ್ ತಹಸೀಲ್ದಾರ್‌ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಲಾಯಿತು.

ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಅಂಬೇಡ್ಕರ್‌ ಹಾಗೂ ಸಂವಿಧಾನವನ್ನು ಅವಮಾನಿಸುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವೇ ಇದೆ. ಮಲ್ಲಿಕಾರ್ಜುನಗೌಡರ ವಿರುದ್ಧ ಸೂಕ್ತ ಕ್ರಮ ಜರುಗಿಸದಿದ್ದರೆ ಹೋರಾಟ ತೀವ್ರಗೊಳ್ಳಲಿದೆ” ಎಂದು ಎಚ್ಚರಿಸಿದರು.

ಬಿಎಸ್‌ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಮಾತನಾಡಿ, “ಅಂಬೇಡ್ಕರ್‌ ಹೆಸರಲ್ಲಿ ಗೆದ್ದ ಅನೇಕರು ಮನುವಾದಿಗಳಾಗಿದ್ದಾರೆ. ಈ ಹಿಂದೆಯೂ ಅಂಬೇಡ್ಕರ್‌ರವರಿಗೆ ಅವಮಾನ ಮಾಡಿರುವ ಘಟನೆಗಳು ನಡೆದಿವೆ” ಎಂದು ಬೇಸರ ವ್ಯಕ್ತಪಡಿಸಿದರು.

ಮೆರವಣಿಗೆ ವೇಳೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹಿರಿಯ ದಲಿತ ಹೋರಾಟಗಾರ ಮಾವಳ್ಳಿ ಶಂಕರ್‌, “ಮಲ್ಲಿಕಾರ್ಜುನ ಗೌಡ ಅವರನ್ನು ನ್ಯಾಯಮೂರ್ತಿ ಎನ್ನುತ್ತಾರೆ. ಆದರೆ ಅವರ ಒಳಗಡೆ ಇರುವುದು ಜಾತಿವಾದಿ ಮನಸ್ಸು. ಬಸವಣ್ಣ ಹಾಗೂ ಕುವೆಂಪು ಅವರ ನಾಡಿನಲ್ಲಿ ಇಂತಹ ಜಾತಿವಾದಿ ಮನಸ್ಸುಗಳು ನ್ಯಾಯಸ್ಥಾನದಲ್ಲಿ ಕುಳಿತಿರುವುದು ಅತ್ಯಂತ ಅಪಮಾನಕರ ಸಂಗತಿ. ಬಾಬಾ ಅಂಬೇಡ್ಕರ್‌ರವರಿಗೆ ಕಿಂಚಿತ್ತು ಅಪಮಾನವಾದರೂ ಈ ಶೋಷಿತ ಸಮುದಾಯಗಳು ಸುಮ್ಮನಿರುವುದಿಲ್ಲ ಎಂಬುದನ್ನು ಈ ನಾಡಿಗೆ ತೋರಿಸಿಕೊಡಲಾಗಿದೆ” ಎಂದರು.

ಇದನ್ನೂ ಓದಿರಿ: ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ಬಾಬಾ ಸಾಹೇಬರು ಯಾವುದೋ ಒಂದು ಜಾತಿ ವರ್ಗದ ನಾಯಕರಲ್ಲ. ಇಡೀ ದೇಶದ ಜನ ಇಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಬಗ್ಗೆ ಮಾತನಾಡುತ್ತಿದ್ದಾರೆ. ಅನೇಕ ಸಮುದಾಯಗಳು ಬಾಬಾ ಸಾಹೇಬರು ಬರೆದ ಸಂವಿಧಾನ ಆಶಯಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಇದು ಒಂದು ಒಳ್ಳೆಯ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದರು.

ಬಾಬಾ ಸಾಹೇಬರು ಸಮಾನತೆ, ಭ್ರಾತೃತ್ವದ ಸಂಕೇತ. ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕು. ಪ್ರತಿಭಟನೆಗೆ ಹೆದರಿದ ಹೈಕೋರ್ಟ್ ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್‌ ಫೋಟೋ ಇಡಲು ಸೂಚಿಸಿದೆ. ಇಷ್ಟೇ ಅಲ್ಲದೆ ಬೇರೆ ದಿನಗಳಲ್ಲಿಯೂ ನ್ಯಾಯಾಲಯದಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು. ಹೈಕೋರ್ಟ್ ಆದೇಶ ತಿದ್ದುಪಡಿಯಾಗಬೇಕಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಮೈಸೂರು: ಸರ್ಕಾರಿ ಶಾಲೆಯ ಅಭಿವೃದ್ಧಿಗೆ 2.5 ಎಕರೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

‘ಅರಾಜಕತೆಯೇ ಸಂಘಪರಿವಾರದ ಉದ್ದೇಶ’

ಅನೇಕ ಸಮಸ್ಯೆಗಳು ಜೀವಂತವಾಗಿವೆ. ಈ ಸರ್ಕಾರ, ಸಂಘಪರಿವಾರಕ್ಕೆ ಇದ್ಯಾವುದೂ ಬೇಕಾಗಿಲ್ಲ. ಬೇಕಾಗಿರುವುದು ಹಿಜಾಬ್ ವಿವಾದ ಮಾತ್ರ. ತಮ್ಮ ಧಾರ್ಮಿಕ ಹಕ್ಕುಗಳಿಗೆ ಅನುಸಾರವಾಗಿ ಹಿಜಾಬ್ ಧರಿಸಿ ಹೆಣ್ಣುಮಕ್ಕಳು ಶಾಲಾ, ಕಾಲೇಜುಗಳಿಗೆ ಹೋಗುತ್ತಿದ್ದರು. ಇದನ್ನು ದೊಡ್ಡದಾಗಿ ವಿವಾದ ಮಾಡಲಾಗಿದೆ. ಈ ವೈದಿಕರು, ಮನುವಾದಿ ಸಂತತಿಯವರು ದೇಶವನ್ನು ನೆಮ್ಮದಿಯಾಗಿ ಇಡಲು ಬಿಡುವುದಿಲ್ಲ. ದೇಶವನ್ನು ಅರಾಜಕ ಸ್ಥಿತಿಯಲ್ಲಿ ಇಡಬೇಕು ಎಂಬುದು ಸಂಘ ಪರಿವಾರದ ಪಿತೂರಿ. ಮುಂದಿನ ಚುನಾವಣೆಯಲ್ಲಿ ಸರಿಯಾದ ಪಾಠವನ್ನು ಕಲಿಸಬೇಕಿದೆ ಎಂದು ಮಾವಳ್ಳಿ ಶಂಕರ್‌ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಎಲ್ಲ ಅಂಬೇಡ್ಕರ್‌, ಪೆರಿಯಾರ್‌ ವಾದಿಗಳು ನೀಲಿ ಶಾಲು ಧರಿಸಿ ಇಲ್ಲಿ ಸೇರಿದ್ದೇವೆ. ಮಲ್ಲಿಕಾರ್ಜುನ ಗೌಡ ಅವರಿಗೆ ನ್ಯಾಯ ಎಂದರೆ ಏನೆಂದು ಗೊತ್ತಿಲ್ಲ. ರಾಜ್ಯದಲ್ಲಿ ನಿರ್ಲಕ್ಷ್ಯದ ಸರ್ಕಾರವಿದೆ. ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್ ಪಕ್ಷಗಳು ಈ ಹೋರಾಟದ ಪರ ನಿಲ್ಲಲಿಲ್ಲ” ಎಂದು ದೂರಿದರು.

ಮಲ್ಲಿಕಾರ್ಜುನಗೌಡರಂಥವರು ಕಣ್ಣಿಗೆ ಕಾಣುವ ಶತ್ರುಗಳು. ಆದರೆ ಎಲ್ಲ ಪಕ್ಷಗಳು ಬಾಬಾ ಸಾಹೇಬರ ಫೋಟೋ ಮಾತ್ರ ಹಾಕಿಕೊಂಡು ನಮ್ಮನ್ನು ದಿಕ್ಕು ತಪ್ಪಿಸುತ್ತಿವೆ. ಇವರು ಬಹಳ ಅಪಾಯಕಾರಿ ಶತ್ರುಗಳು. ಅವರ ವಿರುದ್ಧವೂ ನಾವು ನಿಂತುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ನಾವು ನೀಲಿ ಶಾಲುಗಳು: ಚೇತನ್‌

“ನಾವು ಹಿಂದೂ ಅಲ್ಲ, ಮುಸಲ್ಮಾನರೂ ಅಲ್ಲ. ನಾವು ಸಮಾನತಾ ವಾದಿಗಳು. ನಾವು ಬಿಜೆಪಿಯೂ ಅಲ್ಲ, ಕಾಂಗ್ರೆಸ್ಸೂ ಅಲ್ಲ. ನಾವು ಪರ್ಯಾಯ ಶಕ್ತಿಗಳು. ಈಗ ದೊಡ್ಡ ವಿವಾದ ನಡೆಯುತ್ತಿದೆ. ನಾವು ಕೇಸರಿ ಶಾಲೂ ಅಲ್ಲ, ಹಿಜಾಬೂ ಅಲ್ಲ. ನಾವು ನೀಲಿ ಶಾಲುಗಳು. ಬದಲಾವಣೆಯೇ ಪರ್ಯಾಯವಾಗಿದೆ. ಈ ಘೋಷಣೆ ರಾಜ್ಯದ ಮೂಲೆಮೂಲೆಗೂ ಹರಡುತ್ತಿದೆ” ಎಂದು ಚೇತನ್ ತಿಳಿಸಿದರು.

ಸಿಎಂ ಸ್ಥಳಕ್ಕೆ ಭೇಟಿ: ಭರವಸೆ

ಪ್ರತಿಭಟನಾ ಸ್ಥಳಕ್ಕೆ (ಫ್ರೀಡಂ ಪಾರ್ಕ್‌)  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ, ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಹೋರಾಟಗಾರರ ಮನವಿ ಪತ್ರವನ್ನು ಸಿಎಂ ಸ್ವೀಕರಿಸಿದರು. ಜೊತೆಗೆ ಮಲ್ಲಿಕಾರ್ಜುನ ಗೌಡ ಅವರ ನಡೆಯನ್ನು ಖಂಡಿಸಿದರು.

“ಅಂಬೇಡ್ಕರ್‌ ಫೋಟೋ ತೆರವು ಮಾಡಿಸಿ ಅವಮಾನ ಮಾಡಿದ ಘಟನೆಯು ನಮಗೂ ಕಣ್ಣು ತೆರೆಸಿದೆ. ಘಟನೆ ಸಂಬಂಧ ದಲಿತ ಸಮುದಾಯಗಳ ಮುಖಂಡರು ನನಗೆ ವಿವರಿಸಿದ್ದಾರೆ. ಶೀಘ್ರದಲ್ಲಿಯೇ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗುವುದು” ಎಂದು ತಿಳಿಸಿದರು.

ಚಿಂತಕ ಯೋಗೇಶ್‌ ಮಾಸ್ಟರ್‌, ಹ.ರಾ.ಮಹೇಶ್‌, ಹರಿರಾಮ್‌, ಬಿ.ಆರ್‌.ಭಾಸ್ಕರ್‌ ಪ್ರಸಾದ್‌ ಸೇರಿದಂತೆ ಹಲವು ಮುಖಂಡರು ಹೋರಾಟದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...