Homeಕರ್ನಾಟಕವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ವಜಾಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.

- Advertisement -
- Advertisement -

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು.

ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.

ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್‌ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್‌, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್‌- ಹೀಗೆ ಹಲವು ಸಂಘಟನೆಗಳು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ಭಾಗವಾಗಿದ್ದವು. ನೂರಾರು ವಾಹನಗಳನ್ನು ಮಾಡಿಕೊಂಡು ದೂರದ ಜಿಲ್ಲೆಗಳಿಂದ ಸಾವಿರಾರು ಜನರು ಬೆಂಗಳೂರಿಗೆ ಆಗಮಿಸಿದ್ದರು.

ಕೇಂದ್ರ ರೈಲ್ವೆ ನಿಲ್ದಾಣದಿಂದ ಪ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಲಾಯಿತು. ದಾರಿಯುದ್ದಕ್ಕೂ ಜೈಭೀಮ್ ಘೋಷಣೆಗಳು ಮೊಳಗಿತು. ನೀಲಿ ಭಾವುಟ, ನೀಲಿ ಶಾಲುಗಳು, ನೀಲಿ ಟೋಪಿಗಳು ರಾರಾಜಿಸಿದವು. ಕಲಾವಿದರು ವಾದ್ಯ ನುಡಿಸುತ್ತ ಮೆರವಣಿಗೆಯನ್ನು ಮುನ್ನಡೆಸಿದರು. ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು.

“ಕೋರ್ಟ್ ಸಭಾಂಗಣದಲ್ಲಿಯೇ ಅಂಬೇಡ್ಕರ್‌ ಭಾವಚಿತ್ರ ಇರುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಬೇಕು. ನ್ಯಾಯಾಲಯದಲ್ಲಿ ಮೀಸಲಾತಿ ಕಡ್ಡಾಯ ಮಾಡಬೇಕು. ಹುಮನಾಬಾದ್ ತಹಸೀಲ್ದಾರ್‌ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಲಾಯಿತು.

ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಅಂಬೇಡ್ಕರ್‌ ಹಾಗೂ ಸಂವಿಧಾನವನ್ನು ಅವಮಾನಿಸುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವೇ ಇದೆ. ಮಲ್ಲಿಕಾರ್ಜುನಗೌಡರ ವಿರುದ್ಧ ಸೂಕ್ತ ಕ್ರಮ ಜರುಗಿಸದಿದ್ದರೆ ಹೋರಾಟ ತೀವ್ರಗೊಳ್ಳಲಿದೆ” ಎಂದು ಎಚ್ಚರಿಸಿದರು.

ಬಿಎಸ್‌ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಮಾತನಾಡಿ, “ಅಂಬೇಡ್ಕರ್‌ ಹೆಸರಲ್ಲಿ ಗೆದ್ದ ಅನೇಕರು ಮನುವಾದಿಗಳಾಗಿದ್ದಾರೆ. ಈ ಹಿಂದೆಯೂ ಅಂಬೇಡ್ಕರ್‌ರವರಿಗೆ ಅವಮಾನ ಮಾಡಿರುವ ಘಟನೆಗಳು ನಡೆದಿವೆ” ಎಂದು ಬೇಸರ ವ್ಯಕ್ತಪಡಿಸಿದರು.

ಮೆರವಣಿಗೆ ವೇಳೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹಿರಿಯ ದಲಿತ ಹೋರಾಟಗಾರ ಮಾವಳ್ಳಿ ಶಂಕರ್‌, “ಮಲ್ಲಿಕಾರ್ಜುನ ಗೌಡ ಅವರನ್ನು ನ್ಯಾಯಮೂರ್ತಿ ಎನ್ನುತ್ತಾರೆ. ಆದರೆ ಅವರ ಒಳಗಡೆ ಇರುವುದು ಜಾತಿವಾದಿ ಮನಸ್ಸು. ಬಸವಣ್ಣ ಹಾಗೂ ಕುವೆಂಪು ಅವರ ನಾಡಿನಲ್ಲಿ ಇಂತಹ ಜಾತಿವಾದಿ ಮನಸ್ಸುಗಳು ನ್ಯಾಯಸ್ಥಾನದಲ್ಲಿ ಕುಳಿತಿರುವುದು ಅತ್ಯಂತ ಅಪಮಾನಕರ ಸಂಗತಿ. ಬಾಬಾ ಅಂಬೇಡ್ಕರ್‌ರವರಿಗೆ ಕಿಂಚಿತ್ತು ಅಪಮಾನವಾದರೂ ಈ ಶೋಷಿತ ಸಮುದಾಯಗಳು ಸುಮ್ಮನಿರುವುದಿಲ್ಲ ಎಂಬುದನ್ನು ಈ ನಾಡಿಗೆ ತೋರಿಸಿಕೊಡಲಾಗಿದೆ” ಎಂದರು.

ಇದನ್ನೂ ಓದಿರಿ: ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ಬಾಬಾ ಸಾಹೇಬರು ಯಾವುದೋ ಒಂದು ಜಾತಿ ವರ್ಗದ ನಾಯಕರಲ್ಲ. ಇಡೀ ದೇಶದ ಜನ ಇಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಬಗ್ಗೆ ಮಾತನಾಡುತ್ತಿದ್ದಾರೆ. ಅನೇಕ ಸಮುದಾಯಗಳು ಬಾಬಾ ಸಾಹೇಬರು ಬರೆದ ಸಂವಿಧಾನ ಆಶಯಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಇದು ಒಂದು ಒಳ್ಳೆಯ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದರು.

ಬಾಬಾ ಸಾಹೇಬರು ಸಮಾನತೆ, ಭ್ರಾತೃತ್ವದ ಸಂಕೇತ. ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕು. ಪ್ರತಿಭಟನೆಗೆ ಹೆದರಿದ ಹೈಕೋರ್ಟ್ ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್‌ ಫೋಟೋ ಇಡಲು ಸೂಚಿಸಿದೆ. ಇಷ್ಟೇ ಅಲ್ಲದೆ ಬೇರೆ ದಿನಗಳಲ್ಲಿಯೂ ನ್ಯಾಯಾಲಯದಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು. ಹೈಕೋರ್ಟ್ ಆದೇಶ ತಿದ್ದುಪಡಿಯಾಗಬೇಕಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಮೈಸೂರು: ಸರ್ಕಾರಿ ಶಾಲೆಯ ಅಭಿವೃದ್ಧಿಗೆ 2.5 ಎಕರೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

‘ಅರಾಜಕತೆಯೇ ಸಂಘಪರಿವಾರದ ಉದ್ದೇಶ’

ಅನೇಕ ಸಮಸ್ಯೆಗಳು ಜೀವಂತವಾಗಿವೆ. ಈ ಸರ್ಕಾರ, ಸಂಘಪರಿವಾರಕ್ಕೆ ಇದ್ಯಾವುದೂ ಬೇಕಾಗಿಲ್ಲ. ಬೇಕಾಗಿರುವುದು ಹಿಜಾಬ್ ವಿವಾದ ಮಾತ್ರ. ತಮ್ಮ ಧಾರ್ಮಿಕ ಹಕ್ಕುಗಳಿಗೆ ಅನುಸಾರವಾಗಿ ಹಿಜಾಬ್ ಧರಿಸಿ ಹೆಣ್ಣುಮಕ್ಕಳು ಶಾಲಾ, ಕಾಲೇಜುಗಳಿಗೆ ಹೋಗುತ್ತಿದ್ದರು. ಇದನ್ನು ದೊಡ್ಡದಾಗಿ ವಿವಾದ ಮಾಡಲಾಗಿದೆ. ಈ ವೈದಿಕರು, ಮನುವಾದಿ ಸಂತತಿಯವರು ದೇಶವನ್ನು ನೆಮ್ಮದಿಯಾಗಿ ಇಡಲು ಬಿಡುವುದಿಲ್ಲ. ದೇಶವನ್ನು ಅರಾಜಕ ಸ್ಥಿತಿಯಲ್ಲಿ ಇಡಬೇಕು ಎಂಬುದು ಸಂಘ ಪರಿವಾರದ ಪಿತೂರಿ. ಮುಂದಿನ ಚುನಾವಣೆಯಲ್ಲಿ ಸರಿಯಾದ ಪಾಠವನ್ನು ಕಲಿಸಬೇಕಿದೆ ಎಂದು ಮಾವಳ್ಳಿ ಶಂಕರ್‌ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಎಲ್ಲ ಅಂಬೇಡ್ಕರ್‌, ಪೆರಿಯಾರ್‌ ವಾದಿಗಳು ನೀಲಿ ಶಾಲು ಧರಿಸಿ ಇಲ್ಲಿ ಸೇರಿದ್ದೇವೆ. ಮಲ್ಲಿಕಾರ್ಜುನ ಗೌಡ ಅವರಿಗೆ ನ್ಯಾಯ ಎಂದರೆ ಏನೆಂದು ಗೊತ್ತಿಲ್ಲ. ರಾಜ್ಯದಲ್ಲಿ ನಿರ್ಲಕ್ಷ್ಯದ ಸರ್ಕಾರವಿದೆ. ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್ ಪಕ್ಷಗಳು ಈ ಹೋರಾಟದ ಪರ ನಿಲ್ಲಲಿಲ್ಲ” ಎಂದು ದೂರಿದರು.

ಮಲ್ಲಿಕಾರ್ಜುನಗೌಡರಂಥವರು ಕಣ್ಣಿಗೆ ಕಾಣುವ ಶತ್ರುಗಳು. ಆದರೆ ಎಲ್ಲ ಪಕ್ಷಗಳು ಬಾಬಾ ಸಾಹೇಬರ ಫೋಟೋ ಮಾತ್ರ ಹಾಕಿಕೊಂಡು ನಮ್ಮನ್ನು ದಿಕ್ಕು ತಪ್ಪಿಸುತ್ತಿವೆ. ಇವರು ಬಹಳ ಅಪಾಯಕಾರಿ ಶತ್ರುಗಳು. ಅವರ ವಿರುದ್ಧವೂ ನಾವು ನಿಂತುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ನಾವು ನೀಲಿ ಶಾಲುಗಳು: ಚೇತನ್‌

“ನಾವು ಹಿಂದೂ ಅಲ್ಲ, ಮುಸಲ್ಮಾನರೂ ಅಲ್ಲ. ನಾವು ಸಮಾನತಾ ವಾದಿಗಳು. ನಾವು ಬಿಜೆಪಿಯೂ ಅಲ್ಲ, ಕಾಂಗ್ರೆಸ್ಸೂ ಅಲ್ಲ. ನಾವು ಪರ್ಯಾಯ ಶಕ್ತಿಗಳು. ಈಗ ದೊಡ್ಡ ವಿವಾದ ನಡೆಯುತ್ತಿದೆ. ನಾವು ಕೇಸರಿ ಶಾಲೂ ಅಲ್ಲ, ಹಿಜಾಬೂ ಅಲ್ಲ. ನಾವು ನೀಲಿ ಶಾಲುಗಳು. ಬದಲಾವಣೆಯೇ ಪರ್ಯಾಯವಾಗಿದೆ. ಈ ಘೋಷಣೆ ರಾಜ್ಯದ ಮೂಲೆಮೂಲೆಗೂ ಹರಡುತ್ತಿದೆ” ಎಂದು ಚೇತನ್ ತಿಳಿಸಿದರು.

ಸಿಎಂ ಸ್ಥಳಕ್ಕೆ ಭೇಟಿ: ಭರವಸೆ

ಪ್ರತಿಭಟನಾ ಸ್ಥಳಕ್ಕೆ (ಫ್ರೀಡಂ ಪಾರ್ಕ್‌)  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ, ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಹೋರಾಟಗಾರರ ಮನವಿ ಪತ್ರವನ್ನು ಸಿಎಂ ಸ್ವೀಕರಿಸಿದರು. ಜೊತೆಗೆ ಮಲ್ಲಿಕಾರ್ಜುನ ಗೌಡ ಅವರ ನಡೆಯನ್ನು ಖಂಡಿಸಿದರು.

“ಅಂಬೇಡ್ಕರ್‌ ಫೋಟೋ ತೆರವು ಮಾಡಿಸಿ ಅವಮಾನ ಮಾಡಿದ ಘಟನೆಯು ನಮಗೂ ಕಣ್ಣು ತೆರೆಸಿದೆ. ಘಟನೆ ಸಂಬಂಧ ದಲಿತ ಸಮುದಾಯಗಳ ಮುಖಂಡರು ನನಗೆ ವಿವರಿಸಿದ್ದಾರೆ. ಶೀಘ್ರದಲ್ಲಿಯೇ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗುವುದು” ಎಂದು ತಿಳಿಸಿದರು.

ಚಿಂತಕ ಯೋಗೇಶ್‌ ಮಾಸ್ಟರ್‌, ಹ.ರಾ.ಮಹೇಶ್‌, ಹರಿರಾಮ್‌, ಬಿ.ಆರ್‌.ಭಾಸ್ಕರ್‌ ಪ್ರಸಾದ್‌ ಸೇರಿದಂತೆ ಹಲವು ಮುಖಂಡರು ಹೋರಾಟದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...