Homeಕರೋನಾ ತಲ್ಲಣಜನವರಿ 1 ರಿಂದ ವಿದ್ಯಾಗಮ ಪುನರಾರಂಭ- ಸಚಿವ ಸುರೇಶ್ ಕುಮಾರ್‌

ಜನವರಿ 1 ರಿಂದ ವಿದ್ಯಾಗಮ ಪುನರಾರಂಭ- ಸಚಿವ ಸುರೇಶ್ ಕುಮಾರ್‌

- Advertisement -
- Advertisement -

ರಾಜ್ಯದ ಗ್ರಾಮೀಣ ಪ್ರದೇಶದ ಮಕ್ಕಳ ಹಿತದೃಷ್ಟಿಯಿಂದ ಜಾರಿಗೆ ಬಂದಿದ್ದ ವಿದ್ಯಾಗಮ ಯೋಜನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ತೆರೆಯದಿರುವ ಕಾರಣ ಜನವರಿ 1 ರಿಂದ ವಿದ್ಯಾಗಮ ಪುನರಾರಂಭಿಸಲಾಗುತ್ತಿದೆ.

ಗ್ರಾಮೀಣ ಭಾಗದ ಮಕ್ಕಳು ಆನ್‌ಲೈನ್ ತರಗತಿಗಳಿಗೆ ನೆಟ್ ವರ್ಕ್ ಸಮಸ್ಯೆ, ವಿದ್ಯುತ್ ಸಮಸ್ಯೆ, ಸುಧಾರಿತ ಮೊಬೈಲ್ ಕೊರತೆ ಹೀಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಜನವರಿ 1 ರಿಂದ ಪರಿಷ್ಕೃತ ರೂಪದಲ್ಲಿ ಮತ್ತೆ ವಿದ್ಯಾಗಮವನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಳೆದ ಆಗಸ್ಟ್ 8 ರಿಂದ ವಿದ್ಯಾಗಮವನ್ನು ಆರಂಭಿಸಲಾಗಿತ್ತು. ನಂತರ ಅ.10 ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೂಪದಲ್ಲಿ ವಿದ್ಯಾಗಮ ಯೋಜನೆ ಅನುಷ್ಠಾನಗೊಳ್ಳಲಿದೆ.

ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಕೊರೊನಾ ಸಂದರ್ಭದಲ್ಲಿ ಮಕ್ಕಳ ಕಲಿಕೆಯನ್ನು ನಿರಂತರವಾಗಿರಿಸಲು, ತಂತ್ರಜ್ಞಾನದ ಲಭ್ಯತೆಯಿಲ್ಲದ  ಗ್ರಾಮೀಣ ಭಾಗದ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ತಜ್ಞರ ಸಮಿತಿಯ ಶಿಫಾರಸ್ಸನ್ನು ಆಧರಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ಆರಂಭಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳು, ಪಾಲಕರು, ಶಿಕ್ಷಕರು, ಸಮುದಾಯ ಮತ್ತು ಹಲವು ಸಂಘಟನೆಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದವು.

ವಿದ್ಯಾಗಮ ಆರಂಭವನ್ನು ಶಾಲೆಗಳ ಆರಂಭ ಎಂದು ಯಾರೂ ಭಾವಿಸಬಾರದು. ಕಲಿಕೆ ನಿರಂತರವಾಗಿಬೇಕು ಎಂಬ ದೃಷ್ಟಿಯಿಂದ ಈ ವಿದ್ಯಾಗಮ ಯೋಜನೆ ಪುನಾರಂಭಿಸಲಾಗಿದೆ. ಸ್ವಲ್ಪ ಬದಲಾವಣೆ ಮಾಡಿ ವಿದ್ಯಾಗಮವನ್ನು ಮತ್ತೆ ಜಾರಿಗೆ ತರಬೇಕು ಎಂದು ಶಿಕ್ಷಕ ವಲಯದಲ್ಲೂ ಅಭಿಪ್ರಾಯ ಕೇಳಿಬಂದಿತ್ತು. ಹಾಗಾಗಿ ಕೆಲವು ಸುಧಾರಿತ ಕ್ರಮಗಳೊಡನೆ ಈ ಯೋಜನೆಯನ್ನು ಮತ್ತೆ ಆರಂಭಿಸಲಾಗಿದೆ ಎಂದಿದ್ದಾರೆ.

ಶಿಕ್ಷಣ ಇಲಾಖೆ ಈ ಬಾರಿ ಹಲವು ಸುಧಾರಣೆಗಳನ್ನು ಕೈಗೊಂಡಿದ್ದು, ಯೋಜನೆ ಕೇವಲ ಸರ್ಕಾರಿ ಶಾಲೆಗಳಿಗೆ ಸೀಮಿತವಾಗಿಲ್ಲ. ಖಾಸಗಿ ಶಾಲೆಗಳು ಸಹ 1 ರಿಂದ 10ನೇ ತರಗತಿವರೆಗೆ ಅವಕಾಶವಿದೆ. ಇದು ಯಾವ ವಿದ್ಯಾರ್ಥಿಗೂ ಕಡ್ಡಾಯವಲ್ಲ. ತಂದೆ-ತಾಯಿ ಒಪ್ಪಿಗೆ ಕೊಟ್ಟರೆ ಮಾತ್ರ ವಿದ್ಯಾರ್ಥಿಗಳು ಹಾಜರಾಗಬಹುದು. ಎಲ್ಲರಿಗೂ ಕೊರೊನಾ ಮಾರ್ಗಸೂಚಿ ಕಡ್ಡಾಯ.

ಆರೋಗ್ಯದಲ್ಲಿ ತೊಂದರೆಗಳಿದ್ದರೆ ವಿದ್ಯಾರ್ಥಿಗಳು ಗುಣಮುಖರಾಗುವವರೆಗು ಬರುವಂತಿಲ್ಲ. ಆಯಾ ಜಿಲ್ಲೆಗಳ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.


ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...