Homeಅಂತರಾಷ್ಟ್ರೀಯರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

ರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

- Advertisement -
- Advertisement -

ಹನೋಯಿ: 12 ಬಿಲಿಯನ್ ಡಾಲರ್ ವಂಚನೆ ಪ್ರಕರಣದಲ್ಲಿ ದುರುಪಯೋಗ ಮತ್ತು ಲಂಚದ ಅಪರಾಧದಲ್ಲಿ ಸಿಲುಕಿರುವ ರಿಯಲ್ ಎಸ್ಟೇಟ್ ಉದ್ಯಮಿ ಟ್ರೂಂಗ್ ಮೈ ಲ್ಯಾನ್‌  ವಿರುದ್ಧದ ಮೇಲ್ಮನವಿಯನ್ನು ತಿರಸ್ಕರಿಸಿದ ನಂತರ ವಿಯೆಟ್ನಾಂನ ನ್ಯಾಯಾಲಯವು ವಿಧಿಸಿರುವ ಮರಣದಂಡನೆ ಶಿಕ್ಷೆಯನ್ನು ಮಂಗಳವಾರದಂದು ಮತ್ತೆ ಎತ್ತಿಹಿಡಿದಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

ವಿಯೆಟ್ನಾಂನಲ್ಲಿ ದಾಖಲೆಯ ಅತಿದೊಡ್ಡ ಹಣಕಾಸು ವಂಚನೆ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ವ್ಯಾನ್ ಥಿನ್ ಫಾಟ್ ಹೋಲ್ಡಿಂಗ್ಸ್ ಗ್ರೂಪ್‌ನ ಅಧ್ಯಕ್ಷೆಯಾಗಿರುವ ಲ್ಯಾನ್ ಅವರ ಪಾತ್ರಕ್ಕಾಗಿ ನ್ಯಾಯಾಲಯವು ಇದೇ ಏಪ್ರಿಲ್‌ನಲ್ಲಿ ಅವರಿಗೆ ಮರಣದಂಡನೆ ವಿಧಿಸಿತ್ತು.

ದಕ್ಷಿಣ ಹೋ ಚಿ ಮಿನ್ಹ್ ನಗರದ ಹೈ ಪೀಪಲ್ಸ್ ಕೋರ್ಟ್ ಲ್ಯಾನ್ ಮರಣದಂಡನೆಯನ್ನುಕಡಿತಗೊಳಿಸಲು ಯಾವುದೇ ಆಧಾರಗಳಿಲ್ಲದ ಕಾರಣ ಈ ನಿರ್ಧಾರಕ್ಕೆ ಬಂದಿದೆ ಎಂದು ಆನ್‌ಲೈನ್ ಪತ್ರಿಕೆ VnExpress ವರದಿ ಮಾಡಿದೆ.

ಲ್ಯಾನ್ ಅವರು ವಂಚಿಸಿದ ಹಣದ ಮುಕ್ಕಾಲು ಭಾಗವನ್ನು ಹಿಂದಿರುಗಿಸಲು ಸಾಧ್ಯವಾದರೆ, ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

“ಲ್ಯಾನ್  ಪ್ರಕರಣ ದೇಶದ ಇತಿಹಾಸದಲ್ಲಿ ಅಭೂತಪೂರ್ವವಾಗಿದೆ ಹಾಗೆಯೇ  ದುರುಪಯೋಗಪಡಿಸಿಕೊಂಡ ಹಣದ ಮೊತ್ತವು ಅಭೂತಪೂರ್ವವಾಗಿ ದೊಡ್ಡದಾಗಿದೆ. ಅದು ಎಷ್ಟೆಂದರೆ ಮರುಪಡೆಯಲಾಗದಷ್ಟು” ಎಂದು ಸರ್ಕಾರಿ ಆನ್‌ಲೈನ್ ಪತ್ರಿಕೆ ಹೇಳಿದೆ.

ಈ ಪ್ರಕರಣವು ಸಮಾಜ, ದೇಶದ ಹಣಕಾಸು ಮಾರುಕಟ್ಟೆ, ಆರ್ಥಿಕತೆಯ ಹಲವು ಅಂಶಗಳ ಮೇಲೆ ಪರಿಣಾಮ ಬೀರಿದೆ ಎಂದು ಅದು ತಿಳಿಸಿದೆ.

ಲ್ಯಾನ್ ತನ್ನ ತಪ್ಪನ್ನು  ಒಪ್ಪಿಕೊಂಡಿರುವುದು, ಪಶ್ಚಾತ್ತಾಪ ಪಡುವುದು ಮತ್ತು ದುರುಪಯೋಗಪಡಿಸಿಕೊಂಡ ಹಣದ ಒಂದು ಭಾಗವನ್ನು ಮರುಪಾವತಿ ಮಾಡುವುದರಿಂದ ಶಿಕ್ಷೆಯಿಂದ ಕೆಲ ರಿಯಾಯತಿ ಪಡೆಯಬಹುದಾಗಿದೆ ಎಂದು ಅವರ ವಕೀಲರ ಹೇಳಿಕೆಯನ್ನು ರಾಜ್ಯ ಮಾಧ್ಯಮವು ಉಲ್ಲೇಖಿಸಿದೆ, ಆದರೆ ಪ್ರಾಸಿಕ್ಯೂಟರ್‌ಗಳು ಇದಕ್ಕೆ ಸಾಕಾಗುವುದಿಲ್ಲ ಎಂದು ಅದು ಹೇಳಿದೆ.

ಲ್ಯಾನ್‌ನ ವಕೀಲರಿಂದ  ಹೆಚ್ಚಿನ ಹೇಳಿಕೆಗಳನ್ನು ಪಡೆಯಲು ಮಾಧ್ಯಮಗಳಿಗೆ ಇಲ್ಲಿಯವರೆಗೂ ಸಾಧ್ಯವಾಗುತ್ತಿಲ್ಲ.

ವಿಯೆಟ್ನಾಂನ ನ್ಯಾಯಾಲಯದಲ್ಲಿ ಮರುವಿಚಾರಣೆಯ ಕಾರ್ಯವಿಧಾನಗಳ ಅಡಿಯಲ್ಲಿ  ಇದನ್ನು ಇನ್ನಷ್ಟು ಪರಿಶೀಲಿಸುವ ಹಕ್ಕನ್ನು ಲ್ಯಾನ್ ಹೊಂದಿದ್ದಾರೆ.

ಠೇವಣಿ ಇರಿಸುವ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಸೈಗಾನ್ ಜಾಯಿಂಟ್ ಸ್ಟಾಕ್ ಕಮರ್ಷಿಯಲ್ ಬ್ಯಾಂಕ್ (SCB) ನಲ್ಲಿ  ವಂಚನೆಯ ಕಾರಣಕ್ಕಾಗಿ 2022ರಲ್ಲಿ ಲ್ಯಾನ್ ಅವರ ಬಂಧನ ದೇಶದಲ್ಲಿ ಭಾರೀ ಸಂಚಲನೆಯನ್ನುಂಟು ಮಾಡಿತ್ತು.

ಮರಣದಂಡನೆಯ ಹೊರತಾಗಿಯೂ, ವಂಚನೆ, ಮನಿ ಲಾಂಡರಿಂಗ್ ಮತ್ತು ಅಕ್ರಮ ಗಡಿಯಾಚೆಗಿನ ಹಣ ವರ್ಗಾವಣೆಯ ಮೂಲಕ ಅಪಾರ ಆಸ್ತಿ ಗಳಿಕೆ ಆರೋಪದ ಮೇಲೆ ಅಕ್ಟೋಬರ್‌ನಲ್ಲಿ ನಡೆದ ಪ್ರತ್ಯೇಕ ವಿಚಾರಣೆಯಲ್ಲಿ ಲ್ಯಾನ್‌ಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಲಾಯಿತು.

ಇದನ್ನೂ ಓದಿ…ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...